ಕಾರವಾರ: ಕಾರ್ಗಿಲ್ ವಿಜಯ್ ದಿವಸದ ಆಚರಣೆಯ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿರುವ ಕದಂಬ ನೌಕಾನೆಲೆಯಲ್ಲಿ ಇಂದು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನೌಕ ಹಡಗುಗಳನ್ನು ವೀಕ್ಷಿಸಲು ಅವಕಾಶ ಮಾಡಿಕೊಡಲಾಯಿತು.
ಜಿಲ್ಲೆಯ ಜನರಲ್ಲದೇ ಹೊರರಾಜ್ಯದ ಜನರು ಇಂದು ಕಾರವಾರದ ಕದಂಬ ನೌಕಾನೆಲೆಗೆ ಆಗಮಿಸಿ ಐ.ಎನ್.ಎಸ್. ವಿಕ್ರಮಾದಿತ್ಯ ಹಾಗೂ ಸುವರ್ಣ ಯುದ್ಧ ನೌಕೆಯನ್ನು ವೀಕ್ಷಿಸುವ ಮೂಲಕ ಕಣ್ತುಬಿಂಕೊಂಡರು.
ಪ್ರತಿ ವರ್ಷದಲ್ಲಿ ಒಂದು ಬಾರಿ ಮಾತ್ರ ಸಾರ್ವಜನಿಕರಿಗೆ ಏಷ್ಯಾದ ಅತಿದೊಡ್ಡ ಹಡಗು ವಿಕ್ರಮಾದಿತ್ಯ ಹಾಗೂ ನೌಕಾನೆಲೆಯನ್ನು ನೋಡಲು ಅವಕಾಶ ಕಲ್ಪಿಸಲಾಗುತ್ತದೆ. ಇಂದು ಒಂದೇ ದಿನದಲ್ಲಿ 15 ಸಾವಿರಕ್ಕೂ ಹೆಚ್ಚು ಜನರು ನೌಕಾನೆಲೆಗೆ ಭೇಟಿ ನೀಡಿದರು.