ಕಾರವಾರ: ವಾಯು ವಿಹಾರಕ್ಕೆ ಹೋಗುತ್ತಿದ್ದ ನಗರಸಭೆ ಮಾಜಿ ಸದಸ್ಯ, ರೌಡಿಶೀಟರ್ನನ್ನು ನಡುರಸ್ತೆಯಲ್ಲಿಯೇ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಾರವಾರ (Karwar) ನಗರದ ಕಮಲಾಕರ್ ರಸ್ತೆಯ ಬಿಎಸ್ಎನ್ಎಲ್ ಕಚೇರಿ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಕಾರವಾರದ ಪದ್ಮನಾಭನಗರದ ಸತೀಶ್ ಕೊಳಂಬಕರ್ ಎನ್ನಲಾಗಿದ್ದು, ರಿಯಲ್ ಎಸ್ಟೇಟ್ ವ್ಯವಹಾರ ಮತ್ತು ಗುತ್ತಿಗೆ ಕೆಲಸ ಮಾಡುತ್ತಿದ್ದರು. ರೌಡಿಶೀಟರ್ ಆಗಿರುವ ಈತನ ಮೇಲೆ 9ಕ್ಕೂ ಹೆಚ್ಚು ಪ್ರಕರಣಗಳಿವೆ.ಇದನ್ನೂ ಓದಿ: ಮಗಳ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ಉಪೇಂದ್ರ ದಂಪತಿ
ಆರೋಪಿಗಳು ಮೃತ ಸತೀಶ್ಗೆ ಎರಡು ಲಕ್ಷ ರೂ. ಸಾಲವನ್ನು ನೀಡಿದ್ದರು. ಕಳೆದ ಕೆಲವು ದಿನಗಳ ಹಿಂದೆ ಕಾರವಾರ ನಗರದ ಪ್ರೀಮಿಯರ್ ಹೋಟೆಲ್ನಲ್ಲಿದ್ದಾಗ ಕೊಟ್ಟ ಸಾಲವನ್ನು ಮರಳಿ ಕೇಳಿದ್ದರು. ಆಗ ಜಗಳವಾಗಿ, ಅದು ವಿಕೋಪಕ್ಕೆ ತಿರುಗಿ ಚಾಕು ಇರಿದು ಹತ್ಯೆ ಮಾಡಿದ್ದಾರೆ. ಸದ್ಯ ನಿತೇಶ್ ತಾಂಡೇಲ್ ಹಾಗೂ ದರ್ಶನ್ ಎಂಬುವವರು ಸೇರಿ ಹತ್ಯೆ ಮಾಡಿದ್ದಾರೆ ಎಂದು ಮೃತ ಸತೀಶ್ ಮಗಳು ಆರೋಪಿಸಿದ್ದಾರೆ.
ಇನ್ನೂ ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಾತನಾಡಿ, ಹಣದ ವಿಷಯ ಹಾಗೂ ವೈಯಕ್ತಿಕ ಕಾರಣದಿಂದ ಹತ್ಯೆ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.ಇದನ್ನೂ ಓದಿ: PUBLiC TV Impact | ಜನಿವಾರ ಹಾಕಿದ್ದಕ್ಕೆ ಸಿಇಟಿಗೆ ನೋ ಎಂಟ್ರಿ – ಫ್ರೀ ಎಂಜಿನಿಯರಿಂಗ್ ಸೀಟ್ ಆಫರ್ ಕೊಟ್ಟ ಈಶ್ವರ್ ಖಂಡ್ರೆ