Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವರ ದುಡ್ಡಲ್ಲಿ ಕದಂಬೋತ್ಸವ- ಕಲಾವಿದರನ್ನು ಕರೆಸಲು ಕಾಣಿಕೆ ಹಣ ಕೇಳಿದ ಜಿಲ್ಲಾಡಳಿತ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇವರ ದುಡ್ಡಲ್ಲಿ ಕದಂಬೋತ್ಸವ- ಕಲಾವಿದರನ್ನು ಕರೆಸಲು ಕಾಣಿಕೆ ಹಣ ಕೇಳಿದ ಜಿಲ್ಲಾಡಳಿತ!

Bengaluru City

ದೇವರ ದುಡ್ಡಲ್ಲಿ ಕದಂಬೋತ್ಸವ- ಕಲಾವಿದರನ್ನು ಕರೆಸಲು ಕಾಣಿಕೆ ಹಣ ಕೇಳಿದ ಜಿಲ್ಲಾಡಳಿತ!

Public TV
Last updated: February 2, 2020 1:29 pm
Public TV
Share
2 Min Read
KWR
SHARE

ಕಾರವಾರ: ಪಂಪನ ನಾಡು ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ನಡೆಯಲಿರುವ ಕದಂಬೋತ್ಸವಕ್ಕೆ ತಲಾ ಒಂದು ಲಕ್ಷ ರೂಪಾಯಿಗಳ ದೇಣಿಗೆ ನೀಡುವಂತೆ ತನ್ನ ಇಲಾಖೆಗೆ ಒಳಪಡುವ ಎ ಮತ್ತು ಬಿ ವರ್ಗದ ದೇವಸ್ಥಾನಗಳಿಗೆ ಮುಜರಾಯಿ ಇಲಾಖೆ ಸೂಚನೆ ನೀಡಿದೆ.

ಮುಜರಾಯಿ ಇಲಾಖೆಯ ಈ ಸೂಚನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಉತ್ಸವ ನಡೆಸಲು ಭಕ್ತರ ಹಣವೇಕೇ ಎಂಬ ಮಾತುಗಳು ಕೇಳಿ ಬರುತ್ತಿದ್ದರೆ ಕೆಲವು ದೇವಸ್ಥಾನಗಳು ಈಗಾಗಲೇ ಒಂದು ಲಕ್ಷ ಮೊತ್ತದ ಚೆಕ್ ಗಳನ್ನು ನೀಡಿವೆ.

ಪ್ರತಿ ವರ್ಷ ಕದಂಬೋತ್ಸವ ಹಾಗೂ ಕರಾವಳಿ ಉತ್ಸವವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅನುದಾನದಿಂದ ಹಾಗೂ ಖಾಸಗಿ ಉದ್ಯಮಿಗಳ ದೇಣಿಗೆ ಸಂಗ್ರಹಿಸಿ ಮಾಡಲಾಗುತಿತ್ತು. ಆದರೆ ಈ ಬಾರಿ ಕರಾವಳಿ ಉತ್ಸವಕ್ಕೆ ಅನುದಾನದ ಕೊರತೆ ಹಾಗೂ ಪ್ರವಾಹದ ತೊಂದರೆಯಿಂದಾಗಿ ರದ್ದು ಮಾಡಲಾಗಿದೆ.

money 3

ಕದಂಬೋತ್ಸವ ಕಾರ್ಯಕ್ರಮವನ್ನು ಮಾತ್ರ ಮಾಡಲು ಜಿಲ್ಲಾಡಳಿತ ಮುಂದೆ ಬಂದಿದ್ದು ಇದಕ್ಕಾಗಿ ಸರ್ಕಾರದಿಂದ ಅನುದಾನ ಬಂದಿದೆ. ಈ ಅನುದಾನವು ಸದ್ಯ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಅಲ್ಪದ್ದಾಗಿದೆ. ಉದ್ಯಮಿಗಳು ಹಾಗೂ ದಾನಿಗಳ ಸಹಕಾರ ಪಡೆಯಬಹುದಾಗಿತ್ತು. ಆದರೆ ಈ ಹಿಂದೆ ಬಹುತೇಕ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದವರೇ ಇದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ದೇಣಿಗೆ ಸಂಗ್ರಹ ಮಾಡುತ್ತಿದ್ದರು. ಆದರೆ ಈ ಬಾರಿ ಜಿಲ್ಲಾ ಉಸ್ತುವಾರಿ ಸಚಿವೆ ನೆಪ ಮಾತ್ರಕ್ಕೆ ಎಂಬಂತಾಗಿದ್ದು ಅವರಿಗು ಕೂಡ ಆಸಕ್ತಿ ಇಲ್ಲದಂತಾಗಿದೆ. ಹೀಗಾಗಿ ಕದಂಬೋತ್ಸವ ಕಾರ್ಯಕ್ರಮ ನಿಗದಿಯಾದರೂ ಪ್ರತಿಷ್ಠಿತ ಪಂಪ ಪ್ರಶಸ್ತಿ ಘೋಷಣೆ ಮಾಡಲು ತಡವಾಗಿದ್ದು ಇನ್ನೂ ಘೋಷಣೆಯಾಗಿಲ್ಲ.

ಜಿಲ್ಲಾಧಿಕಾರಿಗಳೇ ಮುತುವರ್ಜಿ ವಹಿಸಿ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದು ದೊಡ್ಡ ದೊಡ್ಡ ಕಲಾವಿದರನ್ನು ಕರೆಸಲು ಮುಂದಾಗಿದ್ದಾರೆ. ಇದಕ್ಕಾಗಿ ಕೋಟಿ ಹಣದ ಖರ್ಚಾಗಲಿದೆ. ಎರಡು ದಿನ ಪಂಪನ ನಾಡಾದ ಬನವಾಸಿಯಲ್ಲಿ ಕದಂಬೋತ್ಸವ ನಡೆಯಲಿದೆ. ಇದೇ ಸಂದರ್ಭದಲ್ಲಿ ಪಂಪ ಪ್ರಶಸ್ತಿ ಸಹ ನೀಡಲಿದ್ದಾರೆ. ಹೀಗಾಗಿ ದೊಡ್ಡ ಮಟ್ಟದ ದೇಣಿಗೆ ಸಂಗ್ರಹ ಅನಿವಾರ್ಯವಾಗಿದೆ.

2000 NOTE 1

ಈಗಿನ ಪರಿಸ್ಥಿತಿಯಲ್ಲಿ ಉದ್ಯಮಿಗಳಾಗಲಿ, ರಾಜಕಾರಣಿಗಳಾಗಲಿ ದೇಣಿಗೆ ನೀಡಲು ಮುಂದಾಗದ ಕಾರಣ ಜಿಲ್ಲಾಡಳಿತ ಇದೇ ಮೊದಲ ಬಾರಿಗೆ ತನ್ನದೇ ಇಲಾಖೆಯ ಸುಪರ್ದಿಯಲ್ಲಿರುವ ಮುಜರಾಯಿ ದೇವಸ್ಥಾನದ ಹುಂಡಿಗೆ ಕೈಹಾಕಿದೆ. ಜನವರಿ 30ರಂದು ಮುಜರಾಯಿ ಇಲಾಖೆಯಿಂದ ಎಲ್ಲಾ ಮುಜರಾಯಿ ದೇವಸ್ಥಾನಗಳಿಗೆ ನೋಟಿಸ್ ನೀಡಿದ್ದು ಹಲವರು ಹಣವನ್ನು ದೇಣಿಗೆ ರೂಪದಲ್ಲಿ ನೀಡಿದರೆ ಇನ್ನೂ ಕೆಲವು ದೇವಸ್ಥಾನದ ಕಮಿಟಿ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಜಿಲ್ಲೆಯಲ್ಲಿ ಪ್ರವಾಹದಿಂದ ಸಾಕಷ್ಟು ಹಾನಿಯಾಗಿ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಇದಕ್ಕೆ ಈ ಹಣ ಬಳಸಲಿ ಅದನ್ನು ಬಿಟ್ಟು ದೇವಸ್ಥಾನ ಹಣ ಮನೋರಂಜನೆಗೆ ಹೋಗುತ್ತಿರುವುದಕ್ಕೆ ಮುಜರಾಯಿ ದೇವಸ್ಥಾನದ ಹಲವು ಕಮಿಟಿಯವರು ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಕೂಡ ನಾವು ಬಲವಂತವಾಗಿ ಆದೇಶಿಸಿಲ್ಲ, ಹಣದ ಕೊರತೆ ಇದೆ ದೇಣಿಗೆ ನೀಡಿ ಎಂದಷ್ಟೇ ಸೂಚನೆ ನೀಡಿದ್ದೇವೆ ಎಂದು ಹೇಳುತ್ತಿದೆ. ಆದರೆ ಕಡ್ಡಾಯವಾಗಿ ನೀಡಲೇಬೇಕು ಎಂದು ಒತ್ತಡ ಕೇಳಿಬಂದಿದೆ ಎಂಬ ಆರೋಪ ಕೇಳಿಬಂದಿದ್ದು ಈಗ ವಿವಾದ ಉಂಟುಮಾಡಿದೆ.

2000 notes reuters l

TAGGED:kadambotsavakarwarPublic TVಕದಂಬೋತ್ಸವಕಾಣಿಕೆಕಾರವಾರಜಿಲ್ಲಾಡಳಿತಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

dramatic and violent incident brother handing over sister to her husband in Chikkamagaluru
Chikkamagaluru

ಗಂಡನ ಮನೆಗೆ ಹೋಗಲ್ಲ ಅಂತ ಹಠ ಹಿಡಿದ ಅಕ್ಕ – ವೇಲ್‌ನಲ್ಲಿ ಕೈಕಟ್ಟಿ ಬಿಟ್ಟು ಬಂದ ತಮ್ಮ!

Public TV
By Public TV
9 minutes ago
Bidar Book fair 1
Bidar

ರಾಜ್ಯಮಟ್ಟದ ಬೃಹತ್ ವೀರಲೋಕ ಪುಸ್ತಕ ಸಂತೆಗೆ ಚಾಲನೆ ನೀಡಿದ ಡಾ.ಬರಗೂರು ರಾಮಚಂದ್ರಪ್ಪ

Public TV
By Public TV
14 minutes ago
Tumakuru Youth Suicide
Crime

ಚಲಿಸುತ್ತಿದ್ದ KSRTC ಬಸ್‌ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

Public TV
By Public TV
23 minutes ago
Nelamangala Traffic Jam
Bengaluru City

ಸಾಲು ಸಾಲು ರಜೆ – ಊರಿನತ್ತ ಜನರ ದಂಡು; ನೆಲಮಂಗಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

Public TV
By Public TV
33 minutes ago
Yalahanka
Bengaluru City

ಪಾರ್ಕಿಂಗ್‌ ವಿಚಾರಕ್ಕೆ ಯಲಹಂಕ ʻಕೈʼ ಮುಖಂಡನ ಅಳಿಯ & ಸ್ಥಳೀಯರ ನಡುವೆ ಕಿರಿಕ್‌

Public TV
By Public TV
52 minutes ago
Faridabad Father Kills Daughter Over Home Work
Crime

ಹೋಂ ವರ್ಕ್ ಸರಿಯಾಗಿ ಬರೆದಿಲ್ಲವೆಂದು 4 ವರ್ಷದ ಮಗಳನ್ನು ಕೊಂದ ತಂದೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?