Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಪತ್ನಿ, ಮಕ್ಕಳಿಗೆ ಚಿಕನ್ ತಯಾರಿಸಿ ಉಣಬಡಿಸಿದ ಕಾರವಾರ ಶಾಸಕ ಸತೀಶ್ ಸೈಲ್

Public TV
Last updated: May 13, 2018 6:08 pm
Public TV
Share
3 Min Read
KWR RELAX
SHARE

ಕಾರವಾರ: ಒಂದೆಡೆ ಅಬ್ಬರದ ಪ್ರಚಾರ, ಸದಾ ತುಂಬಿ ತುಳುಕುತಿದ್ದ ಜನರ ಸಂತೆ, ಟೀಕೆ ಟಿಪ್ಪಣಿಗಳ ನಡುವೆ ತಾನು ಗೆಲ್ಲಬೇಕೆಂಬ ಹಂಬಲದಲ್ಲಿ ವಿಧಾನಸಭಾ ಚುನಾವಣೆಯ ರಂಗಿನ ರಣರಂಗದಲ್ಲಿ ಸದಾ ಬಿಸಿಯಾಗಿದ್ದ ಪ್ರತಿಷ್ಠಿತ ಕಣವಾದ ಕಾರವಾರ ವಿಧಾನಸಭಾ ಕ್ಷೇತ್ರದ ಮೂರು ಪಕ್ಷದ ನಾಯಕರು ಈಗ ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ.

ಸದಾ ಜನರ ಮಧ್ಯೆ ಇರುವ ನಾಯಕರು ತಮ್ಮ ವೈಯಕ್ತಿಕ ಬದುಕಿಗೆ ಸಮಯ ಕೊಟ್ಟದ್ದು ಅಲ್ಪ ಸಮಯ. ಇದೇ ತಿಂಗಳ 15 ರಂದು ಫಲಿತಾಂಶದ ನಿರೀಕ್ಷೆಯಲ್ಲಿರುವ ಈ ನಾಯಕರು ಇಂದು ತಮ್ಮ ಒತ್ತಡವನ್ನು ಕಮ್ಮಿ ಮಾಡಿಕೊಳ್ಳಲು ಅಡುಗೆ ಮಾಡಿ ಕುಟುಂಬವರಿಗೆ ಬಡಿಸಿದ್ದಾರೆ.

ಕಳೆದ ಎರಡು ತಿಂಗಳ ಚುನಾವಣಾ ಕುರುಕ್ಷೇತ್ರಕ್ಕೆ ಪೂರ್ಣ ವಿರಾಮ ಬಿದ್ದಿದೆ. ಇನ್ನು 15ನೇ ದಿನಾಂಕದಂದು ಜನರ ನಿರ್ಧಾರದ ಫಲಿತಾಂಶ ಬರಬೇಕಿದೆ. ತಾವು ಪಟ್ಟ ಶ್ರಮದ ನಿರೀಕ್ಷೆಯಲ್ಲಿ ನಾಯಕರು ಒತ್ತಡದಲ್ಲಿ ಇರೋದು ಸಹಜವಾಗಿದೆ. ತ್ರಿಕೋನ ಸ್ಪರ್ಧೆ ಇರುವ ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಹಾಲಿ ಪಕ್ಷೇತರ ಶಾಸಕ ಸತೀಶ್ ಸೈಲ್, ಜೆಡಿಎಸ್ ನಿಂದ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಮತ್ತು ಬಿಜೆಪಿಯಿಂದ ರೂಪಾಲಿ ನಾಯ್ಕ ಸ್ಪರ್ಧಿಸಿದ್ದರು.

asnotikar 4

ಸದ್ಯ ಇಂದು ಮತ್ತು ನಾಳೆ ಮನಸ್ಸಿನಲ್ಲಿ ಅಳುಕು ಮತ್ತು ಒತ್ತಡ ಇದ್ದರು ಮೂವರು ಅಭ್ಯರ್ಥಿಗಳು ಈ ಒತ್ತಡ ಮರೆಯಲು ಹರಸಾಹಸ ಪಡುತಿದ್ದಾರೆ. ಕಳೆದ ಎರಡು ತಿಂಗಳಿಂದ ಕ್ಷೇತ್ರ ಸುತ್ತಿ ಪ್ರಚಾರ ನಡೆಸಿ ದಣಿದಿರುವ ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಗೋವಾಕ್ಕೆ ತೆರಳಿ ರಿಲ್ಯಾಕ್ಸ್ ಮಾಡುತ್ತಿದ್ದು, ಅವರ ಅಧಿಕೃತ ನಿವಾಸ ಜನರಿಲ್ಲದೇ ಬಿಕೋ ಎನ್ನುತಿತ್ತು. ಒತ್ತಡ ಮರೆಯಲು ಜನರಿಂದ ದೂರ ವಿರಲು ಬಯಸಿರುವ ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ ಕಾರವಾರದ ಸೋನಾರವಾಡದಲ್ಲಿರುವ ಮನೆಯ ಮುಂಭಾಗಕ್ಕೆ ಬೀಗ ಹಾಕಿ ಒಳ ಸೇರಿದ್ದಾರೆ. ಮನೆಯ ಬಳಿ ಬಂದ ಜನರ ಸಂಪರ್ಕಕ್ಕೆ ಸಿಗಲಿಲ್ಲ.

ಇನ್ನು ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಹಾಲಿ ಪಕ್ಷೇತರ ಶಾಸಕ ಸತೀಶ್ ಸೈಲ್ ರವರ ಮಾಜಾಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ಮನೆ ಕೂಡ ಯಾವುದೇ ಕಾರ್ಯಕರ್ತರ ಸದ್ದಿಲ್ಲದೇ ತಟಸ್ಥವಾಗಿತ್ತು. ಶಾಂತವಾಗಿದ್ದ ಮನೆಯಲ್ಲಿ ಸತೀಶ್ ಸೈಲ್ ಪತ್ನಿ ಕಲ್ಪನಾರೊಂದಿಗೆ ಅಡುಗೆ ಮನೆ ಸೇರಿ ಮಧ್ಯಾಹ್ನದ ಊಟಕ್ಕಾಗಿ ಚಿಕನ್ ತಯಾರಿಸಿದ್ದಾರೆ. ಅವರ ಕುಷಲೋಪರಿ ವಿಚಾರಿಸಲು ಬಂದವರಿಗೆ ತಮ್ಮ ಕೈಯಾರೆ ಟೀ ಮಾಡಿ ನೀಡಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ರಾಜಕೀಯ ಕ್ಷೇತ್ರಕ್ಕೆ ಬಂದಾಗಿನಿಂದ ಸಂಸಾರಕ್ಕೆ ಹೆಚ್ಚು ಸಮಯ ಕೊಡಲಾಗುತಿಲ್ಲ. ಮಕ್ಕಳೊಂದಿಗೆ ಬೆರೆಯದೇ ಎಷ್ಟೂ ದಿನಗಳಾಗಿವೆ. ಒಂದು ದಿನವಾದರೂ ನನ್ನ ಒತ್ತಡ ಮರೆತು ಮಕ್ಕಳು ಸಂಸಾರದೊಂದಿಗೆ ಬೆರೆಯಬೇಕೆಂದು ತೀರ್ಮಾನಿಸಿ ಜಂಜಾಟದಿಂದ ರಿಲಾಕ್ಸ್ ಮಾಡುತ್ತಿದ್ದೇನೆ ಎಂದು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.

Sail 3

ನನ್ನ ತಂದೆ ಕ್ಯಾನ್ಸರ್ ನಿಂದ ತೀರಿಕೊಂಡರು. ಆಗ ಅವರಿಗೆ ಕ್ಯಾನ್ಸರ್ ಇದೇ ಎಂದು ತಿಳಿದುಕೊಳ್ಳವ ವೇಳೆ ಅವರು ನಮ್ಮನ್ನು ಅಗಲಿದ್ದರು. ಕಾರವಾರ ಕ್ಷೇತ್ರದಲ್ಲಿ ಕೈಗಾ ಅಣು ಸ್ಥಾವರ, ಆದಿತ್ಯ ಬಿರ್ಲಾ ಕೆಮಿಕಲ್ ಕಾರ್ಖಾನೆಗಳಿವೆ. ಇವುಗಳಿಂದ ಸಾಕಷ್ಟು ಜನರಿಗೆ ಕ್ಯಾನ್ಸರ್ ನಂತಹ ರೋಗಗಳು ಬಂದಿವೆ. ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆ ವ್ಯವಸ್ಥೆ ಸರಿಯಾಗಿ ಇಲ್ಲ. ನನ್ನ ಅವಧಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಮಾಡಿಸುವ ಪ್ರಯತ್ನ ಮಾಡಿದ್ದೇನೆ. ಈಗ ಅದು ಸಫಲವಾಗಿದೆ ಎಂದು ತಮ್ಮ ತಂದೆಯನ್ನು ನೆನೆದು ಭಾವುಕರಾದ್ರು.

ನನ್ನ ಕ್ಷೇತ್ರದ ಜನರಿಗೆ ಉದ್ಯೋಗ ಇಲ್ಲಿಯೇ ಸಿಗುವಂತೆ ಮಾಡಬೇಕು. ಅದಕ್ಕಾಗಿ ಈ ಬಾರಿ ಚುನಾವಣಾ ಕಣದಲ್ಲಿದ್ದೇನೆ. ನನ್ನ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿರುವೆ ಎಂದು ನಾಲ್ಕು ವರ್ಷದ ತಮ್ಮ ಸಾಧನೆಯ ಬಗ್ಗೆ ಮನದ ಮಾತು ಹಂಚಿಕೊಂಡ್ರು. ಕಾರವಾರ ಕ್ಷೇತ್ರದ ಮೂರು ಪಕ್ಷದ ಅಭ್ಯರ್ಥಿಗಳು ಇಂದು ಜನರ, ಕಾರ್ಯಕರ್ತರ ಜಂಜಾಟದಿಂದ ದೂರ ಉಳಿದು ತಮ್ಮ ದಣಿವನ್ನು ನೀಗಿಸಿಕೊಂಡಿದ್ದು, 15ರ ಅಗ್ನಿ ಪರೀಕ್ಷೆಗೆ ರಿಫ್ರೆಶ್ ಆಗುತ್ತಿದ್ದಾರೆ.

roopali naik home

TAGGED:Anand AsnotikarKarnataka ElectionKarnataka Election 2018karwarNamma ElectionsPublic TVRelaxRoopali NaikaSatish Sailಆನಂದ್ ಆಸ್ನೋಟಿಕರ್ಕರ್ನಾಟಕ ಚುನಾವಣೆಕರ್ನಾಟಕ ಚುನಾವಣೆ 2018ಕಾರವಾರನಮ್ಮ ಚುನಾವಣೆಪಬ್ಲಿಕ್ ಟಿವಿರಿಲ್ಯಾಕ್ಷ್ರೂಪಾಲಿ ನಾಯ್ಕಸತೀಶ್ ಸೈಲ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

yellow line metro 1
Bengaluru City

ಈಚೆಗಷ್ಟೇ ಆರಂಭವಾದ ಯೆಲ್ಲೋ ಲೈನ್‌ ಮೆಟ್ರೋ – ರೈಲು ಮಿಸ್‌ ಮಾಡಿಕೊಂಡ ಪ್ರಯಾಣಿಕನಿಗೆ ಬಿತ್ತು ದಂಡ!

Public TV
By Public TV
23 minutes ago
Chitradurga Auto Driver Murder Arrest
Crime

ಆಟೋ ಚಾಲಕನ ಕೊಲೆಗೈದು ಮೂಟೆ ಕಟ್ಟಿ ಎಸೆದ ಪ್ರಕರಣ – ಆರೋಪಿ ಪತ್ನಿ, ಪುತ್ರ, ಪ್ರಿಯಕರ ಅರೆಸ್ಟ್

Public TV
By Public TV
32 minutes ago
Byrati Basavaraj 1
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

Public TV
By Public TV
42 minutes ago
Dharwad Suspend
Dharwad

ಕರ್ತವ್ಯ ಲೋಪ; ಧಾರವಾಡ ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಅಮಾನತು

Public TV
By Public TV
59 minutes ago
ramalinga reddy
Bengaluru City

ಮುಜರಾಯಿ ದೇವಾಲಯಗಳಲ್ಲಿ ಕನ್ನಡ ಶ್ಲೋಕ ಹೇಳಲು ಕಲಿಕೆಗೆ ಸೂಚನೆ: ರಾಮಲಿಂಗಾರೆಡ್ಡಿ

Public TV
By Public TV
1 hour ago
ramalingareddy
Bengaluru City

ಹೈಕೋರ್ಟ್ ಆದೇಶದಂತೆ ಬೈಕ್ ಟ್ಯಾಕ್ಸಿ ಸೇವೆ ಬಗ್ಗೆ ತೀರ್ಮಾನ – ರಾಮಲಿಂಗಾ ರೆಡ್ಡಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?