Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿ, ಮಕ್ಕಳಿಗೆ ಚಿಕನ್ ತಯಾರಿಸಿ ಉಣಬಡಿಸಿದ ಕಾರವಾರ ಶಾಸಕ ಸತೀಶ್ ಸೈಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪತ್ನಿ, ಮಕ್ಕಳಿಗೆ ಚಿಕನ್ ತಯಾರಿಸಿ ಉಣಬಡಿಸಿದ ಕಾರವಾರ ಶಾಸಕ ಸತೀಶ್ ಸೈಲ್

Districts

ಪತ್ನಿ, ಮಕ್ಕಳಿಗೆ ಚಿಕನ್ ತಯಾರಿಸಿ ಉಣಬಡಿಸಿದ ಕಾರವಾರ ಶಾಸಕ ಸತೀಶ್ ಸೈಲ್

Public TV
Last updated: May 13, 2018 6:08 pm
Public TV
Share
3 Min Read
KWR RELAX
SHARE

ಕಾರವಾರ: ಒಂದೆಡೆ ಅಬ್ಬರದ ಪ್ರಚಾರ, ಸದಾ ತುಂಬಿ ತುಳುಕುತಿದ್ದ ಜನರ ಸಂತೆ, ಟೀಕೆ ಟಿಪ್ಪಣಿಗಳ ನಡುವೆ ತಾನು ಗೆಲ್ಲಬೇಕೆಂಬ ಹಂಬಲದಲ್ಲಿ ವಿಧಾನಸಭಾ ಚುನಾವಣೆಯ ರಂಗಿನ ರಣರಂಗದಲ್ಲಿ ಸದಾ ಬಿಸಿಯಾಗಿದ್ದ ಪ್ರತಿಷ್ಠಿತ ಕಣವಾದ ಕಾರವಾರ ವಿಧಾನಸಭಾ ಕ್ಷೇತ್ರದ ಮೂರು ಪಕ್ಷದ ನಾಯಕರು ಈಗ ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ.

ಸದಾ ಜನರ ಮಧ್ಯೆ ಇರುವ ನಾಯಕರು ತಮ್ಮ ವೈಯಕ್ತಿಕ ಬದುಕಿಗೆ ಸಮಯ ಕೊಟ್ಟದ್ದು ಅಲ್ಪ ಸಮಯ. ಇದೇ ತಿಂಗಳ 15 ರಂದು ಫಲಿತಾಂಶದ ನಿರೀಕ್ಷೆಯಲ್ಲಿರುವ ಈ ನಾಯಕರು ಇಂದು ತಮ್ಮ ಒತ್ತಡವನ್ನು ಕಮ್ಮಿ ಮಾಡಿಕೊಳ್ಳಲು ಅಡುಗೆ ಮಾಡಿ ಕುಟುಂಬವರಿಗೆ ಬಡಿಸಿದ್ದಾರೆ.

ಕಳೆದ ಎರಡು ತಿಂಗಳ ಚುನಾವಣಾ ಕುರುಕ್ಷೇತ್ರಕ್ಕೆ ಪೂರ್ಣ ವಿರಾಮ ಬಿದ್ದಿದೆ. ಇನ್ನು 15ನೇ ದಿನಾಂಕದಂದು ಜನರ ನಿರ್ಧಾರದ ಫಲಿತಾಂಶ ಬರಬೇಕಿದೆ. ತಾವು ಪಟ್ಟ ಶ್ರಮದ ನಿರೀಕ್ಷೆಯಲ್ಲಿ ನಾಯಕರು ಒತ್ತಡದಲ್ಲಿ ಇರೋದು ಸಹಜವಾಗಿದೆ. ತ್ರಿಕೋನ ಸ್ಪರ್ಧೆ ಇರುವ ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಹಾಲಿ ಪಕ್ಷೇತರ ಶಾಸಕ ಸತೀಶ್ ಸೈಲ್, ಜೆಡಿಎಸ್ ನಿಂದ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಮತ್ತು ಬಿಜೆಪಿಯಿಂದ ರೂಪಾಲಿ ನಾಯ್ಕ ಸ್ಪರ್ಧಿಸಿದ್ದರು.

asnotikar 4

ಸದ್ಯ ಇಂದು ಮತ್ತು ನಾಳೆ ಮನಸ್ಸಿನಲ್ಲಿ ಅಳುಕು ಮತ್ತು ಒತ್ತಡ ಇದ್ದರು ಮೂವರು ಅಭ್ಯರ್ಥಿಗಳು ಈ ಒತ್ತಡ ಮರೆಯಲು ಹರಸಾಹಸ ಪಡುತಿದ್ದಾರೆ. ಕಳೆದ ಎರಡು ತಿಂಗಳಿಂದ ಕ್ಷೇತ್ರ ಸುತ್ತಿ ಪ್ರಚಾರ ನಡೆಸಿ ದಣಿದಿರುವ ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಗೋವಾಕ್ಕೆ ತೆರಳಿ ರಿಲ್ಯಾಕ್ಸ್ ಮಾಡುತ್ತಿದ್ದು, ಅವರ ಅಧಿಕೃತ ನಿವಾಸ ಜನರಿಲ್ಲದೇ ಬಿಕೋ ಎನ್ನುತಿತ್ತು. ಒತ್ತಡ ಮರೆಯಲು ಜನರಿಂದ ದೂರ ವಿರಲು ಬಯಸಿರುವ ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ ಕಾರವಾರದ ಸೋನಾರವಾಡದಲ್ಲಿರುವ ಮನೆಯ ಮುಂಭಾಗಕ್ಕೆ ಬೀಗ ಹಾಕಿ ಒಳ ಸೇರಿದ್ದಾರೆ. ಮನೆಯ ಬಳಿ ಬಂದ ಜನರ ಸಂಪರ್ಕಕ್ಕೆ ಸಿಗಲಿಲ್ಲ.

ಇನ್ನು ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಹಾಲಿ ಪಕ್ಷೇತರ ಶಾಸಕ ಸತೀಶ್ ಸೈಲ್ ರವರ ಮಾಜಾಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ಮನೆ ಕೂಡ ಯಾವುದೇ ಕಾರ್ಯಕರ್ತರ ಸದ್ದಿಲ್ಲದೇ ತಟಸ್ಥವಾಗಿತ್ತು. ಶಾಂತವಾಗಿದ್ದ ಮನೆಯಲ್ಲಿ ಸತೀಶ್ ಸೈಲ್ ಪತ್ನಿ ಕಲ್ಪನಾರೊಂದಿಗೆ ಅಡುಗೆ ಮನೆ ಸೇರಿ ಮಧ್ಯಾಹ್ನದ ಊಟಕ್ಕಾಗಿ ಚಿಕನ್ ತಯಾರಿಸಿದ್ದಾರೆ. ಅವರ ಕುಷಲೋಪರಿ ವಿಚಾರಿಸಲು ಬಂದವರಿಗೆ ತಮ್ಮ ಕೈಯಾರೆ ಟೀ ಮಾಡಿ ನೀಡಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ರಾಜಕೀಯ ಕ್ಷೇತ್ರಕ್ಕೆ ಬಂದಾಗಿನಿಂದ ಸಂಸಾರಕ್ಕೆ ಹೆಚ್ಚು ಸಮಯ ಕೊಡಲಾಗುತಿಲ್ಲ. ಮಕ್ಕಳೊಂದಿಗೆ ಬೆರೆಯದೇ ಎಷ್ಟೂ ದಿನಗಳಾಗಿವೆ. ಒಂದು ದಿನವಾದರೂ ನನ್ನ ಒತ್ತಡ ಮರೆತು ಮಕ್ಕಳು ಸಂಸಾರದೊಂದಿಗೆ ಬೆರೆಯಬೇಕೆಂದು ತೀರ್ಮಾನಿಸಿ ಜಂಜಾಟದಿಂದ ರಿಲಾಕ್ಸ್ ಮಾಡುತ್ತಿದ್ದೇನೆ ಎಂದು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.

Sail 3

ನನ್ನ ತಂದೆ ಕ್ಯಾನ್ಸರ್ ನಿಂದ ತೀರಿಕೊಂಡರು. ಆಗ ಅವರಿಗೆ ಕ್ಯಾನ್ಸರ್ ಇದೇ ಎಂದು ತಿಳಿದುಕೊಳ್ಳವ ವೇಳೆ ಅವರು ನಮ್ಮನ್ನು ಅಗಲಿದ್ದರು. ಕಾರವಾರ ಕ್ಷೇತ್ರದಲ್ಲಿ ಕೈಗಾ ಅಣು ಸ್ಥಾವರ, ಆದಿತ್ಯ ಬಿರ್ಲಾ ಕೆಮಿಕಲ್ ಕಾರ್ಖಾನೆಗಳಿವೆ. ಇವುಗಳಿಂದ ಸಾಕಷ್ಟು ಜನರಿಗೆ ಕ್ಯಾನ್ಸರ್ ನಂತಹ ರೋಗಗಳು ಬಂದಿವೆ. ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆ ವ್ಯವಸ್ಥೆ ಸರಿಯಾಗಿ ಇಲ್ಲ. ನನ್ನ ಅವಧಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಮಾಡಿಸುವ ಪ್ರಯತ್ನ ಮಾಡಿದ್ದೇನೆ. ಈಗ ಅದು ಸಫಲವಾಗಿದೆ ಎಂದು ತಮ್ಮ ತಂದೆಯನ್ನು ನೆನೆದು ಭಾವುಕರಾದ್ರು.

ನನ್ನ ಕ್ಷೇತ್ರದ ಜನರಿಗೆ ಉದ್ಯೋಗ ಇಲ್ಲಿಯೇ ಸಿಗುವಂತೆ ಮಾಡಬೇಕು. ಅದಕ್ಕಾಗಿ ಈ ಬಾರಿ ಚುನಾವಣಾ ಕಣದಲ್ಲಿದ್ದೇನೆ. ನನ್ನ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿರುವೆ ಎಂದು ನಾಲ್ಕು ವರ್ಷದ ತಮ್ಮ ಸಾಧನೆಯ ಬಗ್ಗೆ ಮನದ ಮಾತು ಹಂಚಿಕೊಂಡ್ರು. ಕಾರವಾರ ಕ್ಷೇತ್ರದ ಮೂರು ಪಕ್ಷದ ಅಭ್ಯರ್ಥಿಗಳು ಇಂದು ಜನರ, ಕಾರ್ಯಕರ್ತರ ಜಂಜಾಟದಿಂದ ದೂರ ಉಳಿದು ತಮ್ಮ ದಣಿವನ್ನು ನೀಗಿಸಿಕೊಂಡಿದ್ದು, 15ರ ಅಗ್ನಿ ಪರೀಕ್ಷೆಗೆ ರಿಫ್ರೆಶ್ ಆಗುತ್ತಿದ್ದಾರೆ.

roopali naik home

TAGGED:Anand AsnotikarKarnataka ElectionKarnataka Election 2018karwarNamma ElectionsPublic TVRelaxRoopali NaikaSatish Sailಆನಂದ್ ಆಸ್ನೋಟಿಕರ್ಕರ್ನಾಟಕ ಚುನಾವಣೆಕರ್ನಾಟಕ ಚುನಾವಣೆ 2018ಕಾರವಾರನಮ್ಮ ಚುನಾವಣೆಪಬ್ಲಿಕ್ ಟಿವಿರಿಲ್ಯಾಕ್ಷ್ರೂಪಾಲಿ ನಾಯ್ಕಸತೀಶ್ ಸೈಲ್
Share This Article
Facebook Whatsapp Whatsapp Telegram

Cinema news

Jana Nayagan Vijay
ವಿಜಯ್‌ಗೆ ಮತ್ತೆ ಶಾಕ್‌ – ಜ.21 ರವರೆಗೆ ‘ಜನನಾಯಗನ್’ ರಿಲೀಸ್‌ ಮಾಡುವಂತಿಲ್ಲ: ಮದ್ರಾಸ್‌ ಹೈಕೋರ್ಟ್‌ ಆದೇಶ
Cinema Latest Main Post South cinema
ram rahim movie team
ನಮ್ ಋಷಿ ನಿರ್ದೇಶನದ ‘ರಾಮ್ ರಹೀಮ್’ ಚಿತ್ರದ ಶೋ ರೀಲ್ ರಿಲೀಸ್
Cinema Latest Sandalwood Top Stories
Jana Nayagan
‘ಜನನಾಯಗನ್’ ಸಿನಿಮಾ ರಿಲೀಸ್‌ಗೆ ಗ್ರೀನ್‌ ಸಿಗ್ನಲ್‌ – UA ಸರ್ಟಿಫಿಕೇಟ್‌ ನೀಡುವಂತೆ ಮದ್ರಾಸ್ ಹೈಕೋರ್ಟ್ ಆದೇಶ
Cinema Latest Main Post South cinema
S. Mahender Nadabrahma Hamsalekha reunited Kannada Film
ಮತ್ತೆ ಜೊತೆಯಾದ ಎಸ್.ಮಹೇಂದರ್, ನಾದಬ್ರಹ್ಮ ಹಂಸಲೇಖ
Cinema Latest Sandalwood

You Might Also Like

Punjab Man Shoots Wife 2 Daughters Then Kills Self. House Help Finds Bodies
Crime

ಪಂಜಾಬ್‌ | ಪತ್ನಿ, ಇಬ್ಬರು ಹೆಣ್ಣುಮಕ್ಕನ್ನು ಗುಂಡಿಕ್ಕಿ ಕೊಂದು, ಆತ್ಮಹತ್ಯೆಗೆ ಶರಣಾದ ವ್ಯಕ್ತಿ

Public TV
By Public TV
24 minutes ago
Parameshwar
Bengaluru City

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿಗೆ – ಸಿಎಂ ಜೊತೆ ಚರ್ಚೆ ಬಳಿಕ ನಿರ್ಧಾರ: ಪರಮೇಶ್ವರ್

Public TV
By Public TV
35 minutes ago
Nikhil Kumaraswamy 1
Bengaluru City

ಕಾಲೇಜುಗಳಲ್ಲಿ ಮತ್ತೆ ಸ್ಟೂಡೆಂಟ್ ಎಲೆಕ್ಷನ್ ಮಾಡೋದು ಒಳ್ಳೆಯ ನಿರ್ಧಾರ: ನಿಖಿಲ್ ಕುಮಾರಸ್ವಾಮಿ

Public TV
By Public TV
1 hour ago
Let Siddaramaiah continue for another 5 years Basavadharma Peetha President Mate Gangadevi
Bagalkot

ಸಿದ್ದರಾಮಯ್ಯ 5 ವರ್ಷ ಅಧಿಕಾರದಲ್ಲಿ ಮುಂದುವರಿಯಲಿ: ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ

Public TV
By Public TV
1 hour ago
dandeli crocodile park acf murder case convicts sentenced 10 year jail
Court

ಕಾರವಾರ | ಮೊಸಳೆಗೆ ಆಹಾರ ಕೊಡ್ಬೇಡಿ ಎಂದಿದ್ದಕ್ಕೆ ಎಸಿಎಫ್‌ ಹತ್ಯೆ – ಕೊಲೆಗಾರನಿಗೆ 10 ವರ್ಷ ಜೈಲು

Public TV
By Public TV
1 hour ago
Purushottama Bilimale
Bengaluru City

ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲೆಯಾಳಂ ಕಡ್ಡಾಯವಾಗಿ ನಿಯಮ- ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಬೇಕು: ಪುರುಷೋತ್ತಮ ಬಿಳಿಮಲೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?