Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸ್ಪೀಕರ್ ಕಾಗೇರಿ ಕ್ಷೇತ್ರದಲ್ಲಿ ಹೆಚ್ಚಾಯ್ತು ಮಂಗನ ಕಾಯಿಲೆ

Public TV
Last updated: March 19, 2020 8:10 pm
Public TV
Share
2 Min Read
Vishweshwar Hegde Kageri
SHARE

– ಊರು ಬಿಟ್ಟು ಹೋದ ಮಂಗನ ಕಾಯಿಲೆ ಸೋಂಕಿತರು

ಕಾರವಾರ: ಕೊರೊನಾ ವೈರಸ್‍ಗೆ ರಾಜ್ಯದ ಜನ ಭಯಗೊಂಡಿದ್ದರೆ ಇತ್ತ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವಕ್ಷೇತ್ರ ಸಿದ್ದಾಪುರ ತಾಲೂಕಿನಲ್ಲಿ ಹೆಚ್ಚುತ್ತಿರುವ ಮಂಗನಕಾಯಿಲೆ (ಕೆ.ಎಫ್.ಡಿ)ಯಿಂದ ಜನರು ಭಯಪಟ್ಟು ಊರು ಬಿಡುತ್ತಿದ್ದಾರೆ.

ಹೌದು. ಉತ್ತರ ಕನ್ನಡ ಜಿಲ್ಲೆಯ ಜನರೀಗ ಕೆ.ಎಫ್.ಡಿ ವೈರಸ್‍ಗೆ ಭಯಪಟ್ಟು ಊರು ತೊರೆಯುತಿದ್ದಾರೆ. ವಿಧಾನಸಭಾ ಸ್ಪೀಕರ್ ಕಾಗೇರಿಯವರ ಸ್ವಕ್ಷೇತ್ರ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬಾಳಗೋಡು, ಮಳಗುಳಿ, ಹನುಮನಜಡ್ಡಿ, ಹೊನ್ನೆಗಟಗಿ, ತ್ಯಾಗಲಿಗಳಲ್ಲಿ 200ಕ್ಕೂ ಹೆಚ್ಚು ಮಂಗಗಳು ಈ ವರ್ಷ ಸಾವನ್ನಪ್ಪಿದ್ದು ಇವುಗಳಲ್ಲಿ ಹಲವು ಮಂಗಗಳಲ್ಲಿ ಕೆ.ಎಫ್.ಡಿ ವೈರಸ್ ಪತ್ತೆಯಾಗಿದೆ.

Karwar Monkey disease

ಈ ವೈರಸ್ ಜನರಿಗೂ ಹಬ್ಬುತ್ತಿದ್ದು ಈ ಗ್ರಾಮದಲ್ಲಿ ಈಗಾಗಲೇ 11 ಜನರಿಗೆ ಮಂಗನಕಾಯಿಲೆ ಇರುವುದು ದೃಢಪಟ್ಟಿದೆ. ಇದೇ ತಿಂಗಳಲ್ಲಿ ಮಳಗುಳಿ ಗ್ರಾಮದ ಭಾಸ್ಕರ್ ಗಣಪತಿ ಹೆಗಡೆ ಎಂಬುವವರು ಮಂಗನ ಕಾಯಿಲೆಯಿಂದ ಸಾವನ್ನಪ್ಪಿದ್ದರು. ಕಳೆದ ವರ್ಷ ಜಿಲ್ಲೆಯಲ್ಲಿ 87 ಪ್ರಕರಣಗಳು ವರದಿಯಾಗಿದ್ದು, ಸಿದ್ದಾಪುರ ತಾಲೂಕಿನಲ್ಲಿಯೇ 15 ಜನರಿಗೆ ಮಂಗನಕಾಯಿಲೆ ಬಂದಿದ್ದು, ಇದರಲ್ಲಿ ಆರು ಜನರು ಸಾವನ್ನಪ್ಪಿದ್ದರು. ಹೀಗಾಗಿ ಸಿದ್ದಾಪುರ ತಾಲೂಕಿನ ಮಂಗನಕಾಯಿಲೆ ಪೀಡಿತ ಪ್ರದೇಶವಾದ ಬಾಳಗೋಡು ಸೇರಿದಂತೆ ಹಲವು ಗ್ರಾಮದಲ್ಲಿ ಜನರು ಮನೆ ಬಿಡುತಿದ್ದು ಊರಿನಲ್ಲಿ ಬಿಕೋ ಎನ್ನುತ್ತಿದೆ.

Karwar Monkey disease 2

ಸಿದ್ದಾಪುರ ಭಾಗದಲ್ಲಿ ಚಿಕಿತ್ಸೆ ನೀಡಲು ವೈದ್ಯರ, ಸಿಬ್ಬಂದಿ ಕೊರತೆ ಎದುರಾಗಿದೆ. ಜೊತೆಗೆ ಇಲ್ಲಿ ಕೆಲಸ ಮಾಡಲು ಸಿಬ್ಬಂದಿ ಕೂಡ ಮುಂದೆ ಬರುತ್ತಿಲ್ಲ ಹೀಗಾಗಿ ಆರೋಗ್ಯ ಇಲಾಖೆ ಸಹ ತೊಂದರೆ ಅನುಭವಿಸುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಲು ತೊಡಕಾಗಿದೆ ಎಂಬುದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

ಕಾಗೇರಿಯವರೇ ನಮ್ಮ ನೋವು ಕೇಳಿ
ವಿಧಾನಸಭಾ ಸ್ಪೀಕರ್ ಸ್ವಕ್ಷೇತ್ರದಲ್ಲಿಯೇ ಅತೀ ಹೆಚ್ಚು ಮಂಗನಕಾಯಿಲೆ ಪ್ರಕರಣ ಪತ್ತೆಯಾಗುತ್ತಿದ್ದು ಜನರು ಊರು ಬಿಡುತಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಸಹ ಈ ಪ್ರದೇಶದಲ್ಲಿ ಕೆಲಸ ಮಾಡಲು ಹೆದರುತ್ತಿದ್ದಾರೆ. ಆದರೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಹಾಗೂ ಕಳೆದ ವರ್ಷ ಮರಣ ಹೊಂದಿದ ಜನರಿಗೆ ಪರಿಹಾರ ಕೊಡಿಸಲು ಸ್ಪೀಕರ್ ಕಾಗೇರಿ ಎಡವಿದ್ದಾರೆ. ಈವರೆಗೂ ಕ್ಷೇತ್ರಕ್ಕೆ ಬರುವುದಿರಲಿ ಇದರ ಬಗ್ಗೆ ಗಮನ ಹರಿಸುವ ಗೋಜಿಗೆ ಹೋಗದೇ ತಮ್ಮ ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷಿಸಿದ್ದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Karwar Monkey disease 3

ಕಳೆದ ವರ್ಷ ಸಾವನ್ನಪ್ಪಿದ ಯಾವೊಬ್ಬರಿಗೂ ಈವರೆಗೂ ಪರಿಹಾರ ಬಂದಿಲ್ಲ. ಇನ್ನು ಆರೋಗ್ಯ ಇಲಾಖೆ ಹಲವು ಕಾರಣಗಳಿಗೆ ಆರು ಜನರನ್ನು ಮಾತ್ರ ದಾಖಲೆಯಲ್ಲಿ ತೋರಿಸಿದ್ದು ಉಳಿದವರನ್ನು ಮಾತ್ರ ದಾಖಲೆಗಳಲ್ಲಿ ತೋರಿಸಿಲ್ಲ. ಇದಲ್ಲದೇ ಪಕ್ಕದ ಜಿಲ್ಲೆ ಶಿವಮೊಗ್ಗದಲ್ಲಿ ಮಂಗನ ಕಾಯಿಲೆಯಿಂದ ಸತ್ತವರಿಗೆ ಪರಿಹಾರ ಬಂದಿದೆ. ಆದರೆ ವಿಧಾನಸಭಾ ಸ್ಪೀಕರ್ ಸ್ವಕ್ಷೇತ್ರಕ್ಕೆ ಈ ಭಾಗ್ಯ ಇಲ್ಲ. ಕೊನೆ ಪಕ್ಷ ಸ್ಪೀಕರ್ ರವರು ತಮ್ಮ ಕ್ಷೇತ್ರಕ್ಕೆ ಬಂದು ಇರುವ ಸಮಸ್ಯೆ ಆಲಿಸಿ ಕ್ರಮ ಕೈಗೊಳ್ಳಲಿ ಎಂಬುದು ಮಂಗನಕಾಯಿಲೆಯಿಂದ ಬಳಲುತ್ತಿರುವ ಗ್ರಾಮಸ್ಥರು ಅಗ್ರಹಿಸಿದ್ದಾರೆ.

Karwar Monkey disease 4

ಒಂದೆಡೆ ಸಿಬ್ಬಂದಿಗಳ ಕೊರತೆ ಮತ್ತೊಂದೆಡೆ ಈ ಹಳ್ಳಿಗಳಲ್ಲಿ ಕೆಲಸ ಮಾಡಲು ಆರೋಗ್ಯ ಇಲಾಖೆ ಸಿಬ್ಬಂದಿ ಮನಸ್ಸು ಮಾಡದಿರುವುದು. ಜೊತೆಯಲ್ಲಿ ಜನರಲ್ಲಿ ಮಂಗನಕಾಯಿಲೆ ಕುರಿತು ಜಾಗೃತಿ ಮೂಡಿಸಲು ವಿಫಲವಾಗಿರುವುದರಿಂದ ಕಾಯಿಲೆ ಮತ್ತಷ್ಟು ಹೆಚ್ಚಲು ಕಾರಣವಾಗಿದೆ. ಸಿದ್ದಾಪುರ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕಾಯಿಲೆ ಉಲ್ಭಣವಾಗುತ್ತಿದೆ. ತಕ್ಷಣ ಈ ಬಗ್ಗೆ ಸರ್ಕಾರ ಗಮನಹರಿಸಿ ಕ್ರಮ ಕೈಗೊಳ್ಳದಿದ್ದರೆ ಮತ್ತಷ್ಟು ಜನರ ಬಲಿಯಾಗಲಿದ್ದು ತಕ್ಷಣ ಹೆಚ್ಚಿನ ಕ್ರಮ ಕೈಗೊಳ್ಳಬೇಕಿದೆ.

TAGGED:karwarMonkey DiseasePublic TVReliefspeakervillagersVishweshwar Hegde Kageriಕಾರವಾರಗ್ರಾಮಸ್ಥರುಪಬ್ಲಿಕ್ ಟಿವಿಪರಿಹಾರಮಂಗನ ಕಾಯಿಲೆವಿಶ್ವೇಶ್ವರ ಹೆಗಡೆ ಕಾಗೇರಿಸ್ಪೀಕರ್
Share This Article
Facebook Whatsapp Whatsapp Telegram

Cinema news

Vijay Sethupathi and Puri Jagannadh
ವಿಜಯ್ ಸೇತುಪತಿ ಹೊಸ ಸಿನಿಮಾದ ಶೂಟಿಂಗ್ ಮುಕ್ತಾಯ: ಪುರಿ ನಿರ್ದೇಶನದ ಸಿನಿಮಾ
Cinema Latest South cinema
Risha Gowda
ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲಬೇಕು – ರಿಷಾ ಗೌಡ
Cinema Karnataka Latest Top Stories TV Shows
sumalatha
ಚಿತ್ರರಂಗದಲ್ಲಿ ಲೀಡರ್‌ಶಿಪ್ ಬೇಕು: ಮಾಜಿ ಸಂಸದೆ ಸುಮಲತಾ
Cinema Latest Sandalwood Top Stories
The Rajasaab
ಪ್ರಭಾಸ್ ಕಲರ್ಫುಲ್ ಹಾಡಿಗೆ ಫ್ಯಾನ್ಸ್ ಫಿದಾ
Cinema Latest South cinema Top Stories

You Might Also Like

India women win 2nd successive Kabaddi World Cup title
Latest

ಕಬಡ್ಡಿಯಲ್ಲಿ ಭಾರತವೇ ವಿಶ್ವ ಚಾಂಪಿಯನ್‌ – ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದ ಮಹಿಳೆಯರು

Public TV
By Public TV
10 minutes ago
mangaluru crime
Dakshina Kannada

ಬೈಕ್‌ನಲ್ಲಿ ತಲವಾರ್ ಹಿಡಿದು ಸಾಗ್ತಿದ್ದವರ ವಿಡಿಯೋ ಮಾಡಿದ್ದಕ್ಕೆ ಹಲ್ಲೆ – ಓರ್ವ ವಶಕ್ಕೆ

Public TV
By Public TV
11 minutes ago
vande metro renamed as namo Bharat rapid rail
Latest

ಇನ್ಮುಂದೆ ನಮೋ ಭಾರತ್ ರೈಲಲ್ಲಿ ಪಾರ್ಟಿ, ಮದುವೆ ಫೋಟೋಶೂಟ್ ಮಾಡ್ಬಹುದು!

Public TV
By Public TV
1 hour ago
siddaramaiah
Bengaluru City

ಹೈಕಮಾಂಡ್ ಸಿಎಂ ಆಗಿ ಮುಂದುವರಿಯಿರಿ ಅಂದ್ರೆ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸಾಫ್ಟ್ ಆದ್ರಾ?

Public TV
By Public TV
2 hours ago
Mallikarjun kharge
Bengaluru City

ಕಾಂಗ್ರೆಸ್ ಪವರ್ ಶೇರ್ ವಾರ್ ಡೆಲ್ಲಿಗೆ ಶಿಫ್ಟ್? – ನಾಳೆ ಡೆಲ್ಲಿಗೆ ಖರ್ಗೆ ವಾಪಸ್

Public TV
By Public TV
2 hours ago
Coal Mine auction in Sandur took place in violation of Supreme Court order CEC reports
Bellary

ಸುಪ್ರೀಂ ಆದೇಶ ಉಲ್ಲಂಘಿಸಿ ಸಂಡೂರಿನಲ್ಲಿ ಗಣಿ ಹರಾಜು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?