ನಿಯಮ ಉಲ್ಲಂಘಿಸಿದವರ ಮೇಲೆ ಬಿತ್ತು ಕೇಸ್ – ಸೂಪರ್ ಮಾರ್ಕೆಟ್ ಪರವಾನಿಗೆ ರದ್ದು

kwr super market

ಕಾರವಾರ: ನಗರಸಭೆ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಕಾರವಾರದ ಸಾಯಿ ಸೂಪರ್ ಮಾರ್ಕೆಟ್ ನ ಪರವಾನಿಗೆ ರದ್ದು ಮಾಡಲಾಗಿದೆ.

ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆ ಅಂಗಡಿ ತೆರೆಯದಂತೆ ಕಾರವಾರ ನಗರಸಭೆ ಆದೇಶ ಹೊರಡಿಸಿತ್ತು. ಆದರೆ ಆದೇಶ ಉಲ್ಲಂಘನೆ ಮಾಡಿದ್ದಲ್ಲದೇ ದಿನಸಿ ಪದಾರ್ಥಗಳಿಗೆ ಹೆಚ್ಚಿನ ದರ ವಿಧಿಸುತ್ತಿದ್ದಾರೆ ಎಂದು ಸಾಯಿ ಸೂಪರ್ ಮಾರ್ಕೆಟ್ ವಿರುದ್ಧ ಸಾರ್ವಜನಿಕರು ನೀಡಿದ್ದರು. ಈ ಹಿನ್ನೆಲೆ ಇಂದು ನಗರಸಭೆ ಸಾಯಿ ಸೂಪರ್ ಮಾರ್ಕೆಟ್ ನ ಪರವಾನಿಗೆ ರದ್ದು ಪಡಿಸಿ ಆದೇಶ ಹೊರಡಿಸಿದೆ.

kwr super market 1

ಕಾರವಾರ ತಾಲೂಕಿನಲ್ಲಿ ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿದ 179 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. 179 ಪ್ರಕರಣಗಳಿಂದ 94,500 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಒಂದು ವಾಹನ ಜಪ್ತಿ ಮಾಡಿ, ಎರಡು ಕರ್ಫ್ಯೂ ಉಲ್ಲಂಘನೆ ಪ್ರಕರಣ ದಾಖಲು ಮಾಡಲಾಗಿದೆ.

Comments

Leave a Reply

Your email address will not be published. Required fields are marked *