Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ರಾಜ್ಯಕ್ಕೆ ಬೆಳಕು ನೀಡಿದ ಜನರ ಬದುಕು ಕತ್ತಲಲ್ಲಿ- ಗ್ರಾಮದಲ್ಲಿ ಪ್ರತಿ ದಿನ ಕಂಪಿಸುತ್ತೆ ಭೂಮಿ

Public TV
Last updated: December 25, 2019 12:05 am
Public TV
Share
2 Min Read
kwr stone mining
SHARE

ಕಾರವಾರ: ಆ ಊರಿನಲ್ಲಿ ಪ್ರತಿ ದಿನ ಭೂಮಿ ಕಂಪಿಸುತ್ತೆ. ಇದ್ದಕ್ಕಿದ್ದ ಹಾಗೆ ಮನೆಗಳ ಮೇಲೆ ಕಲ್ಲುಗಳು ಬಿದ್ದರೆ ಕಂಪನದಿಂದ ಮನೆಗಳೇ ಬಿರುಕು ಬಿಡುತ್ತಿವೆ. ಹೌದು ಕಲ್ಲು ಗಣಿಗಾರಿಕೆಯಿಂದ ಈ ಅವಾಂತರ ಸೃಷ್ಟಿಯಾಗಿದ್ದು, ಜನ ನಿತ್ಯವೂ ಜೀವವನ್ನು ಕೈಯಲ್ಲೇ ಹಿಡಿದುಕೊಂಡು ಬದುಕಬೇಕಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರ, ಅಡಾಳಿ, ಗೌಳಿವಾಡದ ಜನ ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಬದುಕನ್ನು ಕತ್ತಲು ಮಾಡಿಕೊಂಡು ಹೊಸ ಬದುಕು ಕಟ್ಟಿಕೊಂಡವರು. ರಾಜ್ಯ ಸರ್ಕಾರದ ಸೂಪಾ ಜಲವಿದ್ಯುತ್ ಯೋಜನೆಯಲ್ಲಿ ತಮ್ಮ ಜಮೀನನ್ನು ಕಳೆದುಕೊಂಡ ನಿರಾಶ್ರಿತರಿಗಾಗಿ 35 ವರ್ಷದ ಹಿಂದೆಯೇ ರಾಮನಗರದಲ್ಲಿ ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಜಮೀನನ್ನು ನೀಡಿದೆ. ಈ ಜಮೀನಿನಲ್ಲಿ ಬದುಕು ಕಟ್ಟಿಕೊಂಡ ಜನ ಇದೀಗ ಭಯದಿಂದ ಜೀವನ ಸಾಗಿಸಬೇಕಾಗಿದೆ.

vlcsnap 2019 12 25 00h01m21s232

ಸರ್ಕಾರ ನೀಡಿದ ಜಮೀನಿನಲ್ಲಿ ಬದುಕು ಕಟ್ಟಿಕೊಂಡ ಜನರಿಗೆ ಜಿಲ್ಲಾಡಳಿತ ಈ ಊರಿನ ಮಾರುದೂರದಲ್ಲಿಯೇ ಗಣಿಗಾರಿಕೆಗೆ ಅವಕಾಶ ಕಲ್ಪಿಸಿಕೊಟ್ಟಿದೆ. ಮೊದಲು ಎಂಟು ಗುತ್ತಿಗೆದಾರರಿಗೆ ಕಲ್ಲುಗಣಿಗಾರಿಕೆಗಾಗಿ ತಲಾ ಎರಡು ಎಕರೆ ಪ್ರದೇಶವನ್ನು ರಾಮನಗರದ ಸರ್ವೆ ನಂ.45 ರಲ್ಲಿ ಅವಕಾಶ ಮಾಡಿಕೊಟ್ಟಿತು. ಗಣಿಗಾರಿಕೆಗಾಗಿ ಗುತ್ತಿಗೆ ಪಡೆದ ಗುತ್ತಿಗೆದಾರರು ಮೊದಲು ಎರಡು ಎಕರೆ ಪ್ರದೇಶದಲ್ಲಿ ಮಾತ್ರ ಗಣಿಗಾರಿಕೆ ಪ್ರಾರಂಭಿಸಿದರು. ಆದರೆ ದುರಾಸೆಗೆ ಬಿದ್ದ ಗಣಿ ಮಾಲೀಕರು ಇಲ್ಲಿನ ನೂರು ಎಕರೆ ಪ್ರದೇಶವನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡು ಕಾನೂನು ಬಾಹಿರವಾಗಿ ನಿಯಮ ಮೀರಿ ಗಣಿಗಾರಿಕೆ ಮಾಡುತಿದ್ದು, ಮಾತ್ರವಲ್ಲದೆ ದೊಡ್ಡ ಪ್ರಮಾಣದ ಸ್ಫೋಟಕ ಬಳಸಿ ಕಲ್ಲುಗಳನ್ನು ಸಿಡಿಯಲು ಶುರುಮಾಡಿದ್ದಾರೆ.

ಇದರಿಂದಾಗಿ ಇಡೀ ಗ್ರಾಮ ಕಲ್ಲಿನ ಧೂಳಿನಿಂದ ಆವರಿಸಿದೆ ಸಿಡಿತಲೆಯಿಂದಾಗಿ ಗ್ರಾಮದಲ್ಲಿರುವ ಮನೆಗಳು ಬಿರುಕು ಬಿಡಲು ಪ್ರಾರಂಭಿಸಿವೆ. ಗಣಿಗಾರಿಕೆಯಿಂದಾಗಿ ಗ್ರಾಮದ ಜನ ಕೃಷಿ ಭೂಮಿ ಉಳುವುದನ್ನೂ ಬಿಡುವಂತಾಗಿದ್ದು, ನರಕದಲ್ಲಿ ಜೀವನ ನಡೆಸುವಂತಾಗಿದೆ.

vlcsnap 2019 12 25 00h00m46s140

ಪ್ರತಿಭಟಿಸಿದರೂ ಕೇಳೋರಿಲ್ಲ!

ರಾಮನಗರದ ಜನ ಅಕ್ರಮ ಗಣಿಗಾರಿಕೆಯಿಂದ ತಮ್ಮ ಜಮೀನಿನಲ್ಲಿ ಕೃಷಿ ಬಿಡುವಂತಾದರೆ, ಇಡೀ ಗ್ರಾಮ ಧೂಳಿನಿಂದ ತುಂಬಿಹೋಗಿದ್ದು ಸಿಡಿತಲೆಯಿಂದಾಗಿ ಮನೆಗಳು ಬಿರುಕು ಬಿಟ್ಟಿವೆ. ಈ ಕುರಿತು ಪ್ರತಿಭಟನೆ ನಡೆಸಿ ಮಾಲಿನ್ಯ ನಿಯಂತ್ರಣ ಮಂಡಳಿ, ಅರಣ್ಯ ಇಲಾಖೆ ಹಾಗೂ ಜೋಯಿಡಾದ ತಹಶೀಲ್ದಾರ್ ಗೆ ಮನವಿ ಸಲ್ಲಿಸುತ್ತಲೇ ಬಂದಿದ್ದು, ಅಧಿಕಾರಿಗಳು ಮಾತ್ರ ತಮಗೆ ಸಂಬಂಧವೇ ಇಲ್ಲವೆಂಬಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ.

ಈ ಕುರಿತು ಜೋಯಿಡಾ ದ ತಹಶೀಲ್ದಾರ್ ಸಂಜಯ್ ಕಾಂಬ್ಳೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ಕೇವಲ ಎರಡು ಎಕರೆ ಪ್ರದೇಶದಲ್ಲಿ ಮಾತ್ರ ಗಣಿಗಾರಿಕೆ ನಡೆಯುತ್ತಿದೆ. ಅಕ್ರಮ ಗಣಿಗಾರಿಕೆ ನಡೆಯುತಿಲ್ಲ, ಯಾವುದೇ ಸಮಸ್ಯೆಯಾಗಿಲ್ಲ ಎಂದು ತೇಪೆ ಹಾಕುತಿದ್ದಾರೆ. ಕಾನೂನು ಬಾಹಿರ ಬ್ಲಾಸ್ಟಿಂಗ್ ನಡೆದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

vlcsnap 2019 12 25 00h01m32s76

ಪಬ್ಲಿಕ್ ಟಿವಿ ಸ್ಥಳ ಪರಿಶೀಲನೆ ನಡೆಸಿದಾಗ ನೂರಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಮಾಡುತಿದ್ದು, ನಿಯಮಗಳನ್ನು ಗಾಳಿಗೆ ತೂರಿ ಅತ್ಯಂತ ಪ್ರಭಲ ಸಿಡಿತಲೆ ಬಳಸಿ ಬಂಡೆಗಳನ್ನು ಒಡೆಯಲಾಗುತ್ತಿದೆ. ಇದರಿಂದಾಗಿ ಇಲ್ಲಿನ ಅಂತರ್ಜಲ ಕೂಡ ಬತ್ತಿ ಹೋಗಿದ್ದು, ಇಡೀ ಗ್ರಾಮ ಧೂಳಿನಿಂದ ತುಂಬಿದೆ. ಹೆಚ್ಚು ಧೂಳು ಆವರಿಸಿದ್ದರಿಂದ ಹಿಮ ಆವರಿಸಿದಂತೆ ಭಾಸವಾಗುತ್ತದೆ. ಅಲ್ಲದೆ ಗ್ರಾಮಕ್ಕೆ ಹೋಗುವ ದಾರಿಯನ್ನೂ ಗಣಿ ಮಾಲೀಕರು ನುಂಗಿದ್ದು, ಗಣಿಗಾರಿಕೆಗಾಗಿ ದಾರಿಯನ್ನೂ ಬಳಸಿಕೊಳ್ಳಲಾಗಿದೆ.

TAGGED:karwarofficersPublic TVstone miningಅಧಿಕಾರಿಗಳುಕಲ್ಲು ಗಣಿಗಾರಿಕೆಕಾರವಾರಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
5 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
6 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
6 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
8 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
1 hour ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
1 hour ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
2 hours ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
2 hours ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
2 hours ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?