Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಕ್ಕೆ ಬೆಳಕು ನೀಡಿದ ಜನರ ಬದುಕು ಕತ್ತಲಲ್ಲಿ- ಗ್ರಾಮದಲ್ಲಿ ಪ್ರತಿ ದಿನ ಕಂಪಿಸುತ್ತೆ ಭೂಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ರಾಜ್ಯಕ್ಕೆ ಬೆಳಕು ನೀಡಿದ ಜನರ ಬದುಕು ಕತ್ತಲಲ್ಲಿ- ಗ್ರಾಮದಲ್ಲಿ ಪ್ರತಿ ದಿನ ಕಂಪಿಸುತ್ತೆ ಭೂಮಿ

Karnataka

ರಾಜ್ಯಕ್ಕೆ ಬೆಳಕು ನೀಡಿದ ಜನರ ಬದುಕು ಕತ್ತಲಲ್ಲಿ- ಗ್ರಾಮದಲ್ಲಿ ಪ್ರತಿ ದಿನ ಕಂಪಿಸುತ್ತೆ ಭೂಮಿ

Public TV
Last updated: December 25, 2019 12:05 am
Public TV
Share
2 Min Read
kwr stone mining
SHARE

ಕಾರವಾರ: ಆ ಊರಿನಲ್ಲಿ ಪ್ರತಿ ದಿನ ಭೂಮಿ ಕಂಪಿಸುತ್ತೆ. ಇದ್ದಕ್ಕಿದ್ದ ಹಾಗೆ ಮನೆಗಳ ಮೇಲೆ ಕಲ್ಲುಗಳು ಬಿದ್ದರೆ ಕಂಪನದಿಂದ ಮನೆಗಳೇ ಬಿರುಕು ಬಿಡುತ್ತಿವೆ. ಹೌದು ಕಲ್ಲು ಗಣಿಗಾರಿಕೆಯಿಂದ ಈ ಅವಾಂತರ ಸೃಷ್ಟಿಯಾಗಿದ್ದು, ಜನ ನಿತ್ಯವೂ ಜೀವವನ್ನು ಕೈಯಲ್ಲೇ ಹಿಡಿದುಕೊಂಡು ಬದುಕಬೇಕಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರ, ಅಡಾಳಿ, ಗೌಳಿವಾಡದ ಜನ ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಬದುಕನ್ನು ಕತ್ತಲು ಮಾಡಿಕೊಂಡು ಹೊಸ ಬದುಕು ಕಟ್ಟಿಕೊಂಡವರು. ರಾಜ್ಯ ಸರ್ಕಾರದ ಸೂಪಾ ಜಲವಿದ್ಯುತ್ ಯೋಜನೆಯಲ್ಲಿ ತಮ್ಮ ಜಮೀನನ್ನು ಕಳೆದುಕೊಂಡ ನಿರಾಶ್ರಿತರಿಗಾಗಿ 35 ವರ್ಷದ ಹಿಂದೆಯೇ ರಾಮನಗರದಲ್ಲಿ ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಜಮೀನನ್ನು ನೀಡಿದೆ. ಈ ಜಮೀನಿನಲ್ಲಿ ಬದುಕು ಕಟ್ಟಿಕೊಂಡ ಜನ ಇದೀಗ ಭಯದಿಂದ ಜೀವನ ಸಾಗಿಸಬೇಕಾಗಿದೆ.

vlcsnap 2019 12 25 00h01m21s232

ಸರ್ಕಾರ ನೀಡಿದ ಜಮೀನಿನಲ್ಲಿ ಬದುಕು ಕಟ್ಟಿಕೊಂಡ ಜನರಿಗೆ ಜಿಲ್ಲಾಡಳಿತ ಈ ಊರಿನ ಮಾರುದೂರದಲ್ಲಿಯೇ ಗಣಿಗಾರಿಕೆಗೆ ಅವಕಾಶ ಕಲ್ಪಿಸಿಕೊಟ್ಟಿದೆ. ಮೊದಲು ಎಂಟು ಗುತ್ತಿಗೆದಾರರಿಗೆ ಕಲ್ಲುಗಣಿಗಾರಿಕೆಗಾಗಿ ತಲಾ ಎರಡು ಎಕರೆ ಪ್ರದೇಶವನ್ನು ರಾಮನಗರದ ಸರ್ವೆ ನಂ.45 ರಲ್ಲಿ ಅವಕಾಶ ಮಾಡಿಕೊಟ್ಟಿತು. ಗಣಿಗಾರಿಕೆಗಾಗಿ ಗುತ್ತಿಗೆ ಪಡೆದ ಗುತ್ತಿಗೆದಾರರು ಮೊದಲು ಎರಡು ಎಕರೆ ಪ್ರದೇಶದಲ್ಲಿ ಮಾತ್ರ ಗಣಿಗಾರಿಕೆ ಪ್ರಾರಂಭಿಸಿದರು. ಆದರೆ ದುರಾಸೆಗೆ ಬಿದ್ದ ಗಣಿ ಮಾಲೀಕರು ಇಲ್ಲಿನ ನೂರು ಎಕರೆ ಪ್ರದೇಶವನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡು ಕಾನೂನು ಬಾಹಿರವಾಗಿ ನಿಯಮ ಮೀರಿ ಗಣಿಗಾರಿಕೆ ಮಾಡುತಿದ್ದು, ಮಾತ್ರವಲ್ಲದೆ ದೊಡ್ಡ ಪ್ರಮಾಣದ ಸ್ಫೋಟಕ ಬಳಸಿ ಕಲ್ಲುಗಳನ್ನು ಸಿಡಿಯಲು ಶುರುಮಾಡಿದ್ದಾರೆ.

ಇದರಿಂದಾಗಿ ಇಡೀ ಗ್ರಾಮ ಕಲ್ಲಿನ ಧೂಳಿನಿಂದ ಆವರಿಸಿದೆ ಸಿಡಿತಲೆಯಿಂದಾಗಿ ಗ್ರಾಮದಲ್ಲಿರುವ ಮನೆಗಳು ಬಿರುಕು ಬಿಡಲು ಪ್ರಾರಂಭಿಸಿವೆ. ಗಣಿಗಾರಿಕೆಯಿಂದಾಗಿ ಗ್ರಾಮದ ಜನ ಕೃಷಿ ಭೂಮಿ ಉಳುವುದನ್ನೂ ಬಿಡುವಂತಾಗಿದ್ದು, ನರಕದಲ್ಲಿ ಜೀವನ ನಡೆಸುವಂತಾಗಿದೆ.

vlcsnap 2019 12 25 00h00m46s140

ಪ್ರತಿಭಟಿಸಿದರೂ ಕೇಳೋರಿಲ್ಲ!

ರಾಮನಗರದ ಜನ ಅಕ್ರಮ ಗಣಿಗಾರಿಕೆಯಿಂದ ತಮ್ಮ ಜಮೀನಿನಲ್ಲಿ ಕೃಷಿ ಬಿಡುವಂತಾದರೆ, ಇಡೀ ಗ್ರಾಮ ಧೂಳಿನಿಂದ ತುಂಬಿಹೋಗಿದ್ದು ಸಿಡಿತಲೆಯಿಂದಾಗಿ ಮನೆಗಳು ಬಿರುಕು ಬಿಟ್ಟಿವೆ. ಈ ಕುರಿತು ಪ್ರತಿಭಟನೆ ನಡೆಸಿ ಮಾಲಿನ್ಯ ನಿಯಂತ್ರಣ ಮಂಡಳಿ, ಅರಣ್ಯ ಇಲಾಖೆ ಹಾಗೂ ಜೋಯಿಡಾದ ತಹಶೀಲ್ದಾರ್ ಗೆ ಮನವಿ ಸಲ್ಲಿಸುತ್ತಲೇ ಬಂದಿದ್ದು, ಅಧಿಕಾರಿಗಳು ಮಾತ್ರ ತಮಗೆ ಸಂಬಂಧವೇ ಇಲ್ಲವೆಂಬಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ.

ಈ ಕುರಿತು ಜೋಯಿಡಾ ದ ತಹಶೀಲ್ದಾರ್ ಸಂಜಯ್ ಕಾಂಬ್ಳೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ಕೇವಲ ಎರಡು ಎಕರೆ ಪ್ರದೇಶದಲ್ಲಿ ಮಾತ್ರ ಗಣಿಗಾರಿಕೆ ನಡೆಯುತ್ತಿದೆ. ಅಕ್ರಮ ಗಣಿಗಾರಿಕೆ ನಡೆಯುತಿಲ್ಲ, ಯಾವುದೇ ಸಮಸ್ಯೆಯಾಗಿಲ್ಲ ಎಂದು ತೇಪೆ ಹಾಕುತಿದ್ದಾರೆ. ಕಾನೂನು ಬಾಹಿರ ಬ್ಲಾಸ್ಟಿಂಗ್ ನಡೆದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

vlcsnap 2019 12 25 00h01m32s76

ಪಬ್ಲಿಕ್ ಟಿವಿ ಸ್ಥಳ ಪರಿಶೀಲನೆ ನಡೆಸಿದಾಗ ನೂರಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಮಾಡುತಿದ್ದು, ನಿಯಮಗಳನ್ನು ಗಾಳಿಗೆ ತೂರಿ ಅತ್ಯಂತ ಪ್ರಭಲ ಸಿಡಿತಲೆ ಬಳಸಿ ಬಂಡೆಗಳನ್ನು ಒಡೆಯಲಾಗುತ್ತಿದೆ. ಇದರಿಂದಾಗಿ ಇಲ್ಲಿನ ಅಂತರ್ಜಲ ಕೂಡ ಬತ್ತಿ ಹೋಗಿದ್ದು, ಇಡೀ ಗ್ರಾಮ ಧೂಳಿನಿಂದ ತುಂಬಿದೆ. ಹೆಚ್ಚು ಧೂಳು ಆವರಿಸಿದ್ದರಿಂದ ಹಿಮ ಆವರಿಸಿದಂತೆ ಭಾಸವಾಗುತ್ತದೆ. ಅಲ್ಲದೆ ಗ್ರಾಮಕ್ಕೆ ಹೋಗುವ ದಾರಿಯನ್ನೂ ಗಣಿ ಮಾಲೀಕರು ನುಂಗಿದ್ದು, ಗಣಿಗಾರಿಕೆಗಾಗಿ ದಾರಿಯನ್ನೂ ಬಳಸಿಕೊಳ್ಳಲಾಗಿದೆ.

TAGGED:karwarofficersPublic TVstone miningಅಧಿಕಾರಿಗಳುಕಲ್ಲು ಗಣಿಗಾರಿಕೆಕಾರವಾರಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
2 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
3 hours ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
3 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
3 hours ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
3 hours ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?