ಕಾರವಾರ: ಬಾಗಿಲು ಒಡೆದು ಕಳ್ಳತನ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಾಗಾಲ್ನ ದೇವಕಿ ಕೃಷ್ಣ ದೇವಸ್ಥಾನದಲ್ಲಿ ನಡೆದಿದೆ.
ದೇವಸ್ಥಾನದ ಮುಂಭಾಗದ ಬಾಗಿಲು ಒಡೆದು ಒಳ ಹೊಕ್ಕ ಕಳ್ಳರು ದೇವಸ್ಥಾನ ಗರ್ಭಗುಡಿಗೆ ಲೇಪಿಸಿದ್ದ ಬೆಳ್ಳಿ ಬಾಗಿಲು, ಕಾಣಿಕೆ ಹುಂಡಿಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾರೆ.
ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಶ್ವಾನದಳ ಹಾಗೂ ಕುಮಟಾ ಪೊಲೀಸರು ಆಗಮಿಸಿ ಪರಿಶೀಲನೆ ಮಾಡಿ ಒಟ್ಟು ಐದು ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಕಳುವಾಗಿದೆ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.