Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ ಕುಮಾರ್ ಗುಣಗಾನ ಮಾಡಿದ ಕಸಾಪ ಅಧ್ಯಕ್ಷ ಮಹೇಶ ಜೋಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಜ್ ಕುಮಾರ್ ಗುಣಗಾನ ಮಾಡಿದ ಕಸಾಪ ಅಧ್ಯಕ್ಷ ಮಹೇಶ ಜೋಶಿ

Cinema

ರಾಜ್ ಕುಮಾರ್ ಗುಣಗಾನ ಮಾಡಿದ ಕಸಾಪ ಅಧ್ಯಕ್ಷ ಮಹೇಶ ಜೋಶಿ

Public TV
Last updated: April 24, 2024 9:07 pm
Public TV
Share
3 Min Read
Mahesh Joshi
SHARE

ಡಾ.ರಾಜ್ ಕುಮಾರ್ (Raj Kumar) ಅವರು ಕನ್ನಡ ಸಂಸ್ಕೃತಿಯ ಪ್ರತೀಕದಂತಿದ್ದರು. ಕನ್ನಡಕ್ಕೊಬ್ಬನೇ ರಾಜ್ ಕುಮಾರ್  ಎನ್ನಿಸಿದ ಅವರು ತಮ್ಮ ಅಭಿನಯ ಮತ್ತು ಬದುಕಿನ ರೀತಿಯಿಂದ ಮಾದರಿ ಎನ್ನಿಸಿ ಕೊಂಡಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ವಿಶ್ಲೇಷಿಸಿದರು. ಅವರು ಇಂದು  ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಏರ್ಪಾಟಾಗಿದ್ದ ಡಾ.ರಾಜ್ ಕುಮಾರ್ ಅವರ 95ನೆಯ ಹುಟ್ಟು ಹಬ್ಬದ ಆಚರಣೆಯ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಮಂತ್ರಾಲಯ ಮಹತ್ಮೆ’ಯಲ್ಲಿನ ರಾಘವೇಂದ್ರ ಸ್ವಾಮಿಗಳ ಪಾತ್ರವನ್ನು ರಾಯರೇ ಮಾಡಿಸಿದ್ದರು ಎನ್ನುವ ರಾಜ್ ಕುಮಾರ್ ಅವರ ನಂಬಿಕೆಯನ್ನು ಪ್ರಸ್ತಾಪಿಸಿದ ನಾಡೋಜ ಡಾ.ಮಹೇಶ ಜೋಶಿಯವರು ವಿಜ್ಞಾನ ಕೊನೆಗೊಳ್ಳುವಲ್ಲಿ ಅಧ್ಯಾತ್ಮ ಆರಂಭವಾಗುತ್ತದೆ ಎಂದರು. ಸಂತ ಶ್ರೇಷ್ಟರಾದ ಕನಕದಾಸ, ಪುರಂದರ ದಾಸ, ಸರ್ವಜ್ಞ,  ತುಕಾರಂ, ಕಬೀರ ಮೊದಲಾದವರ ಪಾತ್ರಗಳಿಗೆ ಜೀವ ತುಂಬಿದ ಹಾಗೆ ಇಮ್ಮಡಿ ಪುಲಕೇಶಿ, ಮಯೂರ, ಶ್ರೀಕೃಷ್ಣದೇವರಾಯ ಮೊದಲಾದ ಕನ್ನಡ ನಾಡಿನ ವೀರರನ್ನು ಬೆಳ್ಳಿತೆರೆಯ ಮೂಲಕ ಜೀವಂತವಾಗಿಸಿದರು, ರಾಮ, ಕೃಷ್ಣ, ನಾರದ ಮೊದಲಾದ ಪುರಾಣ ಪಾತ್ರಗಳನ್ನೂ ಅಭಿನಯಿಸಿದರು, ಬಾಂಡ್ ನಿಂದ ಭಕ್ತನವರೆಗೆ, ಚಮ್ಮಾರನಿಂದ ಚಕ್ರವರ್ತಿಯವರೆಗೆ ಎಲ್ಲಾ ಮಾದರಿಯ ಪಾತ್ರಗಳನ್ನು ಮಾಡಿ ರಾಜ್ ಕುಮಾರ್ ಕನ್ನಡ ಸಾಂಸ್ಕೃತಿಕ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ ಎಂದು ನಾಡೋಜ ಡಾ.ಮಹೇಶ ಜೋಶಿ (Mahesh Joshi)  ವಿವರಿಸಿದರು.

Dr. Rajkumar 1

ಐವತ್ತಕ್ಕೂ ಹೆಚ್ಚು ಸಂದರ್ಭಗಳಲ್ಲಿ ರಾಜ್ ಕುಮಾರ್ ಅವರ  ಒಡನಾಟ ತಮಗೆ ದೊರಕಿದ್ದನ್ನ ಸ್ಮರಿಸಿ ಕೊಂಡ ಅವರು ದಾದಾ ಸಾಹೇಬ್ ಫಾಲ್ಕೆ ಪುರಸ್ಕಾರ  ಸ್ವೀಕಾರ ಸಂದರ್ಭದಲ್ಲಿ ನಾಲ್ಕು ದಿನ ದೊರಕಿದ ನಿಕಟ ಒಡನಾಟದ ಅನುಭವವನ್ನು ನೆನಪು ಮಾಡಿ ಕೊಂಡು ರಾಜ್ ಕುಮಾರ್ ಅವರಿಗೆ ಅಧ್ಯಾತ್ಮದಲ್ಲಿ ಆಸಕ್ತಿ ಇತ್ತು. ಹಠ ಯೋಗವನ್ನೂ ಅವರು ಸಾಧಿಸಿದ್ದರು. ಅವರ ಯೋಗ ಗುರುಗಳಾದ ನಾಯ್ಕರ್ ಅವರ ಗುರುಗಳ ಮೇಲೆ ಶಿಶುನಾಳ ಶರೀಫರ ಪ್ರಭಾವವಿತ್ತು ಎಂದು ನಾಡೋಜ ಡಾ.ಮಹೇಶ ಜೋಶಿಯವರು ನೆನಪು ಮಾಡಿಕೊಂಡರು.

Dr. Rajkumar 2

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕರಾದ ಎನ್.ಎಸ್.ಶ್ರೀಧರ ಮೂರ್ತಿಯವರು ಮಾತನಾಡಿ ಸರಳತೆಯನ್ನು ಮೌಲ್ಯವಾಗಿ ಮಾಡಿದ ರಾಜ್ ಕುಮಾರ್ ಚಲನಚಿತ್ರಕ್ಕೆ ಸೀಮಿತವಾಗದೆ ನಮ್ಮ ಕಾಲದ ಸಾಂಸ್ಕೃತಿಕ ರೂಪಕವಾಗಿ ಬೆಳೆದಿದ್ದು ದೊಡ್ಡ ಕೌತಕವೇ ಸರಿ, ಎಲ್ಲಾ ತಲೆಮಾರಿನವರೂ ತಮ್ಮ ಪಾಲಿನ ಆದರ್ಶವನ್ನು ರಾಜ್ ಕುಮಾರ್ ಎನ್ನುವ ಕನ್ನಡಿಯಲ್ಲಿ ಕಂಡರು. ಅವರ ಶೈಲಿಯಲ್ಲಿ ‘ಅಮ್ಮ’ ಎಂದು ಕರೆಸಿ ಕೊಳ್ಳಲು ಎಷ್ಟೋ ಮಹಿಳೆಯರು ಇಂದಿಗೂ ಹಂಬಲಿಸುತ್ತಾರೆ. ಅಣ್ಣ-ತಮ್ಮಂದಿರು ಹೇಗಿರ ಬೇಕು? ಗಂಡ-ಹೆಂಡತಿ ಒಡನಾಟ ಹೇಗಿರ ಬೇಕು? ತಂದೆ-ಮಕ್ಕಳ ಸಂಬಂಧದ ಸ್ವರೂಪ ಯಾವುದೂ ಎಲ್ಲಾ ಪ್ರಶ್ನೆಗಳಿಗೂ  ಅವರ ಚಿತ್ರದಲ್ಲಿ ಉತ್ತರವಿದೆ. ‘ಕನ್ನಡದ ಜನ ನನ್ನನ್ನು ರಾಜನನ್ನಾಗಿ ನೋಡಿದ್ದಾರೆ, ಮಂತ್ರಿ ಸ್ಥಾನ ಏಕೆ ಬೇಕು’ ಎಂದು ರಾಜಕೀಯದಿಂದ ದೂರವಿದ್ದ ರಾಜ್ ಕುಮಾರ್ ತಮ್ಮ ಚಿತ್ರಗಳಲ್ಲಿ ಇಂದಿಗೂ ರಾಜಕಾರಣಿ ಪಾತ್ರವಿರಲಿ ಜಮೀನ್ದಾರ, ಊರ ಗೌಡರ ಪಾತ್ರಗಳನ್ನು ಮಾಡಲಿಲ್ಲ ಮೇಯರ್ ಮುತ್ತಣ್ಣ ಚಿತ್ರದಲ್ಲಿ ಅವರು ಮೇಯರ್ ಆದರೂ ಅದಕ್ಕೆ ಸಂಬಂಧಿಸಿದ ಸನ್ನಿವೇಶಗಳಿಲ್ಲ ಎಂದು ವಿಶ್ಲೇಷಿಸಿದರು. ತಾವೊಮ್ಮೆ ಅವರನ್ನು ‘ನೀವು ನಿರ್ವಹಿಸಲು ಬಯಸಿ ಸಿಕ್ಕದೆ ಹೋದ ಪಾತ್ರ ಯಾವುದು?’ ಎಂದಾಗ ‘ಬಸ್ ಕಂಡೆಕ್ಟರ್’ಎಂದು ಹೇಳಿದ್ದನ್ನು ನೆನಪು ಮಾಡಿಕೊಂಡ ಶ್ರೀಧರ ಮೂರ್ತಿ ರಾಜ್ ಕುಮಾರ್ ಎಲ್ಲಾ ವೃತ್ತಿಗಳಿಗೂ ಘನತೆ ತಂದು ಕೊಟ್ಟ ಮಹಾನ್ ಕಲಾವಿದರು ಎಂದು ಹೇಳಿ ಅವರ ಜೊತೆಗಿನ ಒಡನಾಟದ ಅನೇಕ ಘಟನೆಗಳನ್ನು ನೆನಪು ಮಾಡಿಕೊಂಡರು.

ಕನ್ನಡ ಹೋರಾಟ ಗಾರ ರಾ.ನಂ.ಚಂದ್ರಶೇಖರ್ ಮಾತನಾಡಿ ಗೋಕಾಕ್ ಚಳುವಳಿ ಸಂದರ್ಭದಲ್ಲಿ ಕನ್ನಡಿಗರಿಗೆ ದೊಡ್ಡ ಭರವಸೆಯಾಗಿ ಬಂದವರು ಡಾ.ರಾಜ್ ಕುಮಾರ್, ಅವರು ಯಾವತ್ತೇ ಹೋರಾಟಕ್ಕೆ ಇಳಿದರೂ ಸರ್ಕಾರ ನಡುಗುತ್ತಿತ್ತು ಎಂದು ಹೇಳಿ ಎಂ.ವಿ.ಸೀಯವರ ಅಂತಿಮ ದರ್ಶನ ಪಡೆಯಲು ನಾರು ಮಡಿ ಉಟ್ಟು ಬಂದಿದ್ದ ರಾಜ್ ಕುಮಾರ್ ನಮ್ಮ ನಡುವಿನ ಸಂತ.. ಲೌಕಿಕದಲ್ಲಿ ಇದ್ದೂ ಅವರು ಅಲೌಕಿಕದ ನಡೆಯನ್ನು ಸಾಧಿಸಿದ್ದರು ಎಂದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗ ಶೆಟ್ಟಿ,ಡಾ.ಪದ್ಮಿನಿ ನಾಗರಾಜು, ಕೋಶಾಧ್ಯಕ್ಷರಾದ ಪಟೇಲ್ ಪಾಂಡು, ಹಿರಿಯ ಪತ್ರಕರ್ತ ಪ್ರಶಾಂತ್ ಹೆಬ್ಬಾರ್ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿಗಳು ಭಾಗವಹಿಸಿದ್ದರು.

TAGGED:Kasapamahesh joshiRaj Kumarಕಸಾಪಮಹೇಶ್ ಜೋಶಿರಾಜ್ ಕುಮಾರ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
28 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
48 minutes ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
1 hour ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
1 hour ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?