Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಕನಸಿನ ಯೋಜನೆ ಕಾಶಿ ವಿಶ್ವನಾಥ ಕಾರಿಡಾರ್ ವಿಶೇಷತೆ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಕನಸಿನ ಯೋಜನೆ ಕಾಶಿ ವಿಶ್ವನಾಥ ಕಾರಿಡಾರ್ ವಿಶೇಷತೆ ಏನು?

Latest

ಮೋದಿ ಕನಸಿನ ಯೋಜನೆ ಕಾಶಿ ವಿಶ್ವನಾಥ ಕಾರಿಡಾರ್ ವಿಶೇಷತೆ ಏನು?

Public TV
Last updated: December 13, 2021 2:48 pm
Public TV
Share
3 Min Read
Kashi Vishwanath Temple Varanasi 3
SHARE

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಆಗಿರುವ ಕಾಶಿ ವಿಶ್ವನಾಥ ಕಾರಿಡಾರ್‌ನನ್ನು ಇಂದು ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಿದ್ದಾರೆ. ಈ ಯೋಜನೆಯಿಂದಾಗಿ ಪ್ರವಾಸೋದ್ಯಮ ಚೇತರಿಕೆ ಕಾಣಲಿದೆ.

 

ಈಗಾಗಲೇ ಮೋದಿ ಅವರು ಕಾಲಭೈರವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಾರಾಣಿಸಿಯ ಜನರು ಹೂ ಮಳೆ ಸುರಿಸಿ, ಮೋದಿ, ಮೋದಿ, ಹರ್ ಹರ್ ಮಹಾದೇವ್ ಎಂದು ಘೋಷಣೆ ಕೂಗುತ್ತಾ ಅದ್ಧೂರಿಯಾಗಿ ಪ್ರಧಾನಿಯವರನ್ನು ಸ್ವಾಗತಿಸಿದ್ದಾರೆ. ಮೋದಿಯವರು ಕಾವಿ ವಸ್ತ್ರವನ್ನು ಧರಿಸಿ ಗಂಗಾ ನದಿಯಲ್ಲಿ ಮುಳುಗಿ ಪುಣ್ಯ ಸ್ನಾನ ಮಾಡಿ, ಜಪ ಮಾಲೆ ಹಿಡಿದು ಜಪ ಮಾಡಿದ್ದಾರೆ.

Kashi Vishwanath Temple Varanasi 4

ಕಾಶಿ ವಿಶ್ವನಾಥ ಕಾರಿಡಾರ್ ವಿಶೇಷತೆ:
ಕಾಶಿ ವಿಶ್ವನಾಥ ಕಾರಿಡಾರ್ ವಿಶ್ವನಾಥ ದೇಗುಲ ಮತ್ತು ಪವಿತ್ರ ಗಂಗಾ ನದಿಯನ್ನು ನೇರವಾಗಿ ಸಂಪರ್ಕಿಸುತ್ತದೆ. ಈ ಮೊದಲು ದೇಗುಲ ಮತ್ತು ಪವಿತ್ರ ಗಂಗಾ ನದಿಗೆ ನೇರವಾದ ಸಂಪರ್ಕವಿರಲಿಲ್ಲ. ದೇಗುಲದ ಮೂರು ದಿಕ್ಕುಗಳಲ್ಲಿ ಮನೆಗಳು, ಕಟ್ಟಡಗಳು, ಆವರಿಸಿದ್ದವು. ಇದೀಗ ಕಿಕ್ಕಿರಿದ ಪ್ರದೇಶ, ಜನಸಂದಣಿಯಿಂದ ಯಾವುದೇ ಅಡೆತಡೆಗಳಿಲ್ಲದೆ ಗಂಗೆಯ ಲಲಿತಾ ಘಾಟ್‍ಗೆ ಭಕ್ತರು ಮಂದಿರದಿಂದ ಭೇಟಿ ನೀಡಬಹುದು. ದೇಗುಲದಲ್ಲಿ ನಿಂತೇ ಪ್ರಸಿದ್ಧ ಗಂಗಾರತಿಯನ್ನು ಕಣ್ತುಂಬಿಕೊಳ್ಳಬಹುದಾಗಿದೆ.

Kashi Vishwanath Temple Varanasi 2

ಕಾರಿಡಾರ್ ದೇಗುಲ ಮತ್ತು ಲಲಿತಾ ಘಾಟ್‍ಗೆ ಸಂಪರ್ಕ ಕಲ್ಪಿಸುವುದು ಮಾತ್ರವಲ್ಲದೇ ದೇಗುಲ ಚೌಕ, ವಾರಾಣಸಿ ನಗರ ಗ್ಯಾಲರಿ, ಮ್ಯೂಸಿಯಂ, ವಿವಿಧ ಉದ್ದೇಶಿತ ಸಭಾಂಗಣ, ಹಾಲ್, ಭಕ್ತರಿಗೆ ಸೌಲಭ್ಯ ಒದಗಿಸುವ ಕೇಂದ್ರವಾಗಿದೆ. ಸಾರ್ವಜನಿಕ ತಂಗುದಾಣ, ಅರ್ಚಕರಿಗೆ ವಸತಿ ಮತ್ತು ಆಧ್ಯಾತ್ಮ ಗ್ರಂಥಾಲಯ ಮುಂತಾದ ಸೌಕರ್ಯಗಳನ್ನು ಕಾರಿಡಾರ್ ಒಳಗೊಂಡಿದೆ.

kashi vishwanath Narendra Modi 3

ಕಾರಿಡಾರ್‌ನಲ್ಲಿ ಏನಿದೆ?:
* ಯೋಜನೆಯಡಿ 24 ಕಟ್ಟಡ ನಿರ್ಮಾಣ
* ಸುಮಾರು 50 ಅಡಿ ಉದ್ದ ಕಾರಿಡಾರ್ ಗಂಗಾ ಮಣಿಕರ್ಣಿಕಾ, ಲಲಿತಾ ಘಾಟ್ ಮತ್ತು ಕಾಶಿ ವಿಶ್ವನಾಥ ಜ್ಯೋತಿರ್ಲಿಂಗ ದೇಗುಲವನ್ನು ಸಂಪರ್ಕಿಸುತ್ತದೆ. ಯಾತ್ರಾರ್ಥಿಗಳಿಗೆ ವಿಶ್ರಾಂತಿ ಕೊಠಡಿ ವ್ಯವಸ್ಥೆಯನ್ನು ಮಾಡಲಾಗಿದೆ.
* ವಾರಾಣಸಿ ಸಂಸ್ಕ್ರತಿ ಪ್ರತಿಬಿಂಬಿಸುವ ಮ್ಯೂಸಿಯಂ ಮತ್ತು ಸಭಾಂಗಣ ಮತ್ತು ಹೋಮ ಹವನದಂತಹ ಧಾರ್ಮಿಕ ಕಾರ್ಯ ನಡೆಸಲು ಯೋಗಶಾಲೆಗಳು ಇವೆ.
* ಆರ್ಚಕರು, ಸ್ವಯಂ ಸೇವಕರು ಮತ್ತು ಯಾತ್ರಾರ್ಥಿಗಳಿಗೆ ವಿಶೇಷ ವಸತಿಯನ್ನು ಮಾಡಲಾಗಿದೆ.

narendra modi kashi vishwanath temple 1

* ಗಂಗಾ ನದಿ ಕಣ್ತುಂಬಿಕೊಳ್ಳುವ ಗ್ಯಾಲರಿ ಇದ್ದು, ದೇಗುಲದ 7000 ಚದರ ಮೀ. ಪ್ರದೇಸ 10,000 ಜನರಿಗೆ ಧ್ಯಾನಕ್ಕೆ ಮೀಸಲು ಇಡಲಾಗಿದೆ. 7 ದ್ವಾರ ಕೆಫೆಟೇರಿಯಾ, ಆಧ್ಯಾತ್ಮ ಗ್ರಂಥಾಲಯ, ಫುಡ್ ಸ್ಟ್ರೀಟ್ ವ್ಯವಸ್ಥೆ ಇದೆ. ಇದನ್ನೂ ಓದಿ:  ಪ್ರಧಾನಿ ಮೋದಿಗೆ ದೃಷ್ಟಿ ನಿವಾರಿಸಿದ ಅರ್ಚಕ

ಕಾಶಿ ದೇಗುಲ 3000 ಚದರಡಿ ವ್ಯಾಪ್ತಿಯಲ್ಲಿತ್ತು. ಮಹತ್ವಾಕಾಂಕ್ಷಿ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯೇ ಮೊದಲ ಹಂತದ ವೆಚ್ಚ399 ಕೋಟಿ ಆಗಿದ್ದು, 5 ಲಕ್ಷ ಚದರ ಅಡಿ ಪ್ರದೇಶಕ್ಕೆ ದೇಗುಲದ ವ್ಯಾಪ್ತಿ ವಿಸ್ತರಿಸಿದೆ. ಕಾರಿಡಾರ್ 320 ಮೀಟರ್ ಉದ್ದ ಮತ್ತು 20 ಮೀಟರ್ ಅಗಲ ಇದೆ. ಮೊದಲಿನಂತೆ ಕಿಕ್ಕಿರಿದ ರಸ್ತೆಗಳ ಬದಲಾಗಿ ಇದೀಗ ಸರಾಗವಾಗಿ ಕೇವಲ ಒಂದು ನಿಮಿಷದಲ್ಲಿ ದೇಗುಲದಿಂದ ಲಲಿತಾ ಘಾಟ್ ತಲುಪಬಹುದಾಗಿದೆ. ಇದನ್ನೂ ಓದಿ: ಸೂಪರ್ ಸ್ಟಾರ್ ರಜನಿಕಾಂತ್‍ಗೆ 71ನೇ ಹುಟ್ಟುಹಬ್ಬದ ಸಂಭ್ರಮ

kashi vishwanath Narendra Modi 1

ಮೋದಿ ಕಾಶಿ ಪರಿವರ್ತನೆ ಮಾಡಿದ್ದು ಹೇಗೆ?:
ಮೋದಿ ವಾರಾಣಸಿಯಿಂದ ಲೋಕಸಭೆಗೆ ಆಯ್ಕೆಯಾದ ಬೆನ್ನಲ್ಲೇ ಕಾಶಿ ಸ್ವರೂಪವನ್ನೇ ಬದಲಿಸಿದರು. ಈ ಹಿಂದಿನ ಹಳೆಯ ಕಾಶಿಯಲ್ಲಿ ಕಿರಿದಾದ ರಸ್ತೆಗಳಿದ್ದವು. ಅಸ್ವಚ್ಛತೆ ಎಲ್ಲಾ ಕಡೆ ಎದ್ದು ಕಾಣುತ್ತಿತ್ತು. ಇದನ್ನು ಬದಲಿಸಿದ ಅವರು ರಸ್ತೆಗಳ ಅಗಲೀಕರಣ ಮಾಡಿಸಿದರು. ನೈರ್ಮಲೀಕರಣಕ್ಕೆ ಕ್ರಮ ಕೈಗೊಂಡರು. ಮಲಿನವಾಗಿದ್ದ ಗಂಗಾ ನದಿಯನ್ನು “ನಮಾಮಿ ಗಂಗೆ” ಯೋಜನೆ ಅಡಿ ಸ್ವಚ್ಛಗೊಳಿಸಿದಉ. ಈಗ ‘ವಿಶ್ವನಾಥ ಕಾರಿಡಾರ್’ ಯೋಜನೆ ಜಾರಿಗೊಳಿಸಿ ದೇಗುಲದ ಗತವೈಭವ ಮರುಕಳಿಸಿದ್ದಾರೆ.

TAGGED:kashi vishwanathkashi vishwanath corridornarendra modiVaranasiಕಾಶಿ ವಿಶ್ವನಾಥ ಕಾರಿಡಾರ್ದೇವಸ್ಥಾನನರೇಂದ್ರ ಮೋದಿಲಕ್ನೋ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
31 minutes ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
32 minutes ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
33 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
52 minutes ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
1 hour ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?