Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಶ್ಮೀರ ಭಾರತದ ಮುಕುಟ ಮಣಿ, ಭಯೋತ್ಪಾದನೆ ಮೂಲಕ ಸತ್ಯ ಮುಚ್ಚಿಹಾಕಲು ಸಾಧ್ಯವಿಲ್ಲ: ಕ್ಯಾ.ಬ್ರಿಜೇಶ್ ಚೌಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಕಾಶ್ಮೀರ ಭಾರತದ ಮುಕುಟ ಮಣಿ, ಭಯೋತ್ಪಾದನೆ ಮೂಲಕ ಸತ್ಯ ಮುಚ್ಚಿಹಾಕಲು ಸಾಧ್ಯವಿಲ್ಲ: ಕ್ಯಾ.ಬ್ರಿಜೇಶ್ ಚೌಟ

Dakshina Kannada

ಕಾಶ್ಮೀರ ಭಾರತದ ಮುಕುಟ ಮಣಿ, ಭಯೋತ್ಪಾದನೆ ಮೂಲಕ ಸತ್ಯ ಮುಚ್ಚಿಹಾಕಲು ಸಾಧ್ಯವಿಲ್ಲ: ಕ್ಯಾ.ಬ್ರಿಜೇಶ್ ಚೌಟ

Public TV
Last updated: April 24, 2025 7:37 am
Public TV
Share
4 Min Read
Brijesh Chowta
SHARE

ಮಂಗಳೂರು: ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ಅಮಾಯಕ ಪ್ರವಾಸಿಗರ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿ ನನ್ನ ಮನಸ್ಸಿಗೆ ತೀವ್ರ ನೋವು ನೀಡುವ ಜೊತೆಗೆ ಬಹಳ ಆಕ್ರೋಶವನ್ನುಂಟುಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ (Captain Brijesh Chowta) ಹೇಳಿದ್ದಾರೆ.

ಉಗ್ರರು ಮುಗ್ಧ ಜನರ ಮೇಲೆ ನಡೆಸಿರುವ ಈ ದಾಳಿಯನ್ನು ಕಟುವಾಗಿ ಖಂಡಿಸಿರುವ ಅವರು, ಈ ದಾಳಿಯಲ್ಲಿ ಶಿವಮೊಗ್ಗ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ದೇಶದ ಹಲವೆಡೆಯಿಂದ ಕಾಶ್ಮೀರಕ್ಕೆ ಬಂದಿದ್ದ ಕುಟುಂಬಗಳು ತಮ್ಮ ಪ್ರೀತಿ-ಪಾತ್ರರನ್ನು ಕಳೆದುಕೊಂಡಿರುವುದು ಹೃದಯ ಮಿಡಿಯುವಂತೆ ಮಾಡಿದೆ. ಇದು ಕೇವಲ ಒಂದು ಪ್ರದೇಶ ಅಥವಾ ಗುಂಪಿನ ಮೇಲೆ ನಡೆದ ದಾಳಿಯಲ್ಲ. ಬದಲಿಗೆ ಇದು ಪ್ರತಿ ಭಾರತೀಯರ ಮನೆಯ ಮೇಲೆ ನಡೆದಿರುವ ದಾಳಿಯಾಗಿದೆ ಎಂದು ಅತೀವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರಕ್ಕೆ ತೆರಳಿದ್ದ 180 ಕನ್ನಡಿಗರು ಸೇಫ್ – ಸ್ವಂತ ಹಣದಲ್ಲೇ ಎಲ್ಲರನ್ನು ಕರೆತರುತ್ತಿರೋ ಸಂತೋಷ್ ಲಾಡ್

ಕಾಶ್ಮೀರ ಶಾರದಾ ದೇಶ, ಅದು ಅನಾದಿ ಕಾಲದ ದೇವಾಲಯಗಳನ್ನು ಮಡಿಲಲ್ಲಿ ಹೊತ್ತುಕೊಂಡ ಪವಿತ್ರ ಜ್ಞಾನದ ಭೂಮಿ. ಅಷ್ಟೇ ಅಲ್ಲ ಅದು ನಮ್ಮ ಭಾರತದ ಮುಕುಟ ಮಣಿ ಎಂಬುವುದನ್ನು ಬಹಳ ಸ್ಪಷ್ಟ ಹಾಗೂ ಗಟ್ಟಿ ಧ್ವನಿಯಿಂದ ಹೇಳಬೇಕು. ಆದರೆ ಈ ಸತ್ಯ ಶತ್ರುಗಳನ್ನು ಕಂಗೆಡಿಸುತ್ತಿದೆ. ಹೀಗಾಗಿ ಈ ಹೇಡಿ ಭಯೋತ್ಪಾದಕರು ನಿರಾಯುಧ ನಾಗರಿಕರನ್ನು ಕೊಂದು ಭಯ ಹುಟ್ಟಿಸುವ ಯತ್ನ ನಡೆಸುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: Pahalgam Terrorist Attack | ಗುರುವಾರ ಸರ್ವಪಕ್ಷ ಸಭೆ ಕರೆದ ಕೇಂದ್ರ

ಈ ಉಗ್ರರು ಹಾಗೂ ಅವರ ಹಿಂದಿನ ದುಷ್ಟರಿಗೆ ಮುಖ್ಯ ಆಯುಧ ಬಂದೂಕುಗಳಲ್ಲ, ಬದಲಿಗೆ ಜನರಲ್ಲಿ ಭಯ ಹುಟ್ಟಿಸುವುದೇ ಅವರ ಗುರಿ. ಕಾಶ್ಮೀರದ ಬೀದಿಗಳು ಬಿಕೋ ಎನ್ನಬೇಕು, ಅಲ್ಲಿ ವ್ಯಾಪಾರ ವಹಿವಾಟು- ಆರ್ಥಿಕತೆ ಹಾಳಾಗಬೇಕು, ಜನರು ನಿರಾಶರಾಗಬೇಕು ಎಂಬುವುದೇ ಅವರ ಮುಖ್ಯ ಉದ್ದೇಶ. ಭಾರತ ವಿರೋಧಿ ಶಕ್ತಿಗಳು ದೇಶದ ಒಳಗೆ ಮತ್ತು ಹೊರಗಿದ್ದುಕೊಂಡು ಒಂದು ಪ್ರದೇಶದಲ್ಲಿ ಅಭಾವವನ್ನು ಸೃಷ್ಟಿಸಿ, ಆರ್ಥಿಕತೆಯನ್ನು ಹಾಳುಗೆಡವಿ, ಜನರಲ್ಲಿ ಹತಾಶೆಯನ್ನು ತುಂಬುತ್ತಾರೆ. ಆ ನಿರ್ಜನತೆ ಮತ್ತು ಹತಾಶೆಯ ವಾತಾವರಣವನ್ನು ಬಳಸಿಕೊಂಡು ಇಡೀ ಪ್ರದೇಶವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಾರೆ. ಇದು ಅವರ ಕಾರ್ಯತಂತ್ರ ಹಾಗೂ ಒಳಸಂಚಿನ ಒಂದು ಮುಖ್ಯ ಭಾಗವಾಗಿದೆ ಎಂದು ಗುಡುಗಿದರು. ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ – 65 ಸಾವಿರಕ್ಕೇರಿಸಿದ್ದ ಪ್ರಯಾಣ ದರ 15,000ಕ್ಕೆ ಇಳಿಕೆ

ಭಾರತ ಬದಲಾಗಿದ್ದು, ಜಗತ್ತು ಕೂಡ ಬದಲಾಗಿದೆ. ಇಂದು, ವಾಷಿಂಗ್ಟನ್‌ನಿಂದ ಪಶ್ಚಿಮ ಏಷ್ಯಾದವರೆಗೆ ಜಾಗತಿಕ ಸಮುದಾಯ ಭಾರತದೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ. ಪ್ರಪಂಚದಾದ್ಯಂತ ಬಲಿಷ್ಠ ರಾಷ್ಟ್ರಗಳು ಈ ಭಯೋತ್ಪಾದಕ ಕೃತ್ಯವನ್ನು ಸ್ಪಷ್ಟವಾಗಿ ಖಂಡಿಸಿ ಭಾರತಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿವೆ. ಆಧುನಿಕ ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ. ಭಾರತದಲ್ಲೂ ಇದಕ್ಕೆ ಕಿಂಚಿತ್ತೂ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್‌ ಪ್ರಜೆಗಳಿಗೆ ಭಾರತ ವಾರ್ನಿಂಗ್‌ – ಪಾಕ್‌ ಸಂಬಂಧಕ್ಕೆ ಎಳ್ಳುನೀರು

ಮೋಸ್ಟ್ ವಾಂಟೆಡ್ ಉಗ್ರ ತಹಾವ್ವೂರ್ ರಾಣಾ ಭಾರತದಲ್ಲಿ ಕಾನೂನಿನಡಿ ಕ್ರಮ ಎದುರಿಸಿಬೇಕಾಗಿರುವುದು, ದಶಕಗಳ ಕಾಲದ ಅನಿಯಂತ್ರಿತ ದುರ್ಬಳಕೆಯನ್ನು ಕೊನೆಗೊಳಿಸುವ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿರುವುದು, ಕಾಶ್ಮೀರದಲ್ಲಿ ಜನರನ್ನು ಭಯದ ವಾತಾವರಣದಲ್ಲಿಡುವ 370ನೇ ವಿಧಿಯನ್ನು ರದ್ದುಗೊಳಿಸಿರುವುದು, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಹೆಮ್ಮೆಯ ನವ ಭಾರತದ ಉದಯ ಮತ್ತು ಹಿಂಸೆಯನ್ನು ಸೃಷ್ಟಿಸುವ ಹೇಡಿಗಳಿಗೆ ದೊರಕುತ್ತಿರುವ ಮರೆಯಲಾಗದ ತಕ್ಕ ಉತ್ತರ. ಆದರೆ, ಇಂಥಹ ದಾಳಿಯನ್ನು ಎಂದಿಗೂ ಕ್ಷಮಿಸಲಾಗದು ಮತ್ತು ಮರೆಯಲಾಗದು. ಇದಕ್ಕೆ ಪ್ರತಿಕಾರವನ್ನು ತೀರಿಸಲೇಬೇಕು ಎಂದು ಕಿಡಿಕಾರಿದರು. ಇದನ್ನೂ ಓದಿ: ಪಹಲ್ಗಾಮ್ ದಾಳಿಯಲ್ಲಿ ಸಾವನ್ನಪ್ಪಿದ 26 ಮಂದಿ ಯಾರು? – ಸಂಪೂರ್ಣ ಮಾಹಿತಿ ಇಲ್ಲಿದೆ

ಈ ಹಿಂದೆ ದೇಶ ಸೇವೆಗೈದ ಓರ್ವ ಯೋಧನಾಗಿ ಹಾಗೂ ಇಂದು ನಿಮ್ಮ ಜನಪ್ರತಿನಿಧಿಯಾಗಿ ನಾನು ಹೇಳುವುದೇನೆಂದರೆ, ಪ್ರತಿಯೊಬ್ಬ ಭಾರತೀಯನೂ ಮಾನಸಿಕವಾಗಿ ಸೈನಿಕನಾಗಬೇಕಾದ ಸಮಯವಿದು. ನಮ್ಮ ದೇಶದ ಪ್ರತಿಯೊಂದು ಮನೆಯಿಂದಲೂ ಒಗ್ಗಟ್ಟಿನ ಶಕ್ತಿ ಹೊರಹೊಮ್ಮಲಿ. ಏಕೆಂದರೆ ಈ ಹೋರಾಟ ಕೇವಲ ಕಾಶ್ಮೀರಕ್ಕೆ ಸೀಮಿತವಾಗಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದವರ ವಿಕೃತ ಮನಸ್ಥಿತಿಗಳು, ವಕ್ಫ್ ಸುಧಾರಣೆಯನ್ನು ವಿರೋಧಿಸಿದ ಅದೇ ಗುಂಪು ಈ ಕೃತ್ಯಗಳ ಹಿಂದೆಯೂ ಇದೆ. ನಮ್ಮ ಬಲಿಷ್ಠ, ಸ್ವತಂತ್ರ ಮತ್ತು ಸಂಸ್ಕೃತಿಯನ್ನು ಗೌರವಿಸುವ ಭಾರತವನ್ನು ಕಂಡು ಭಯಪಡುವ ಶಕ್ತಿಗಳೇ ಇವೆಲ್ಲವನ್ನೂ ಮಾಡುತ್ತಿವೆ ಎಂದರು. ಇದನ್ನೂ ಓದಿ: ಏ.16ಕ್ಕೆ ಮದುವೆ, 22ಕ್ಕೆ ಪತಿ ಸಾವು – ಮದ್ವೆಯಾಗಿ ವಾರ ಕಳೆದಿಲ್ಲ, ಮೆಹಂದಿ ಬಣ್ಣ ಮಾಸಿಲ್ಲ: ಇದು ವಿನಯ್ ನರ್ವಾಲ್ – ಹಿಮಾಂಶಿ ದುರಂತ ಕಥೆ

ಪಹಲ್ಗಾಮ್‌ನಲ್ಲಿ ಹತ್ಯೆಯಾದ ಶಿವಮೊಗ್ಗದ ಮಂಜುನಾಥ್ ಇರಬಹುದು, ದಾಂಪತ್ಯ ಜೀವನಕ್ಕೆ ಕಾಲಿಟ್ಟು ಹೊಸ ಜೀವನವನ್ನು ಆರಂಭಿಸುತ್ತಿದ್ದ ನವ ದಂಪತಿಗಳಿರಬಹುದು ಮತ್ತು ರಜೆಯ ಖುಷಿ ಅನುಭವಿಸಬೇಕಾದ ಮುದ್ದು ಮಗು ಇರಬಹುದು, ಅವರೆಲ್ಲರೂ ನಮ್ಮಂತೆಯೇ ಇದ್ದರು. ಅವರಿಗೂ ಕನಸುಗಳಿದ್ದವು, ಭವಿಷ್ಯವಿತ್ತು. ಈ ದಾಳಿ ಕೇವಲ ಒಂದು ಪ್ರದೇಶಕ್ಕೆ ಆದ ಗಾಯವಲ್ಲ. ಇದು ಇಡೀ ದೇಶಕ್ಕೆ ಆದ ನೋವು. ಈ ದುರಂತ ನಮ್ಮೆಲ್ಲರ ಹೃದಯವನ್ನು ತಟ್ಟಿದೆ. ಭಾರತವು ಈ ನೋವಿಗೆ ಒಗ್ಗಟ್ಟಿನಿಂದ, ತನ್ನೆಲ್ಲಾ ಶಕ್ತಿಯಿಂದ ಮತ್ತು ದೃಢವಾದ ನಿರ್ಧಾರದಿಂದ ಉತ್ತರಿಸುತ್ತದೆ. ನಾವು ಈ ದಾಳಿಯನ್ನು ಎಂದಿಗೂ ಮರೆಯುವುದಿಲ್ಲ ಮತ್ತು ನಮ್ಮೆಲ್ಲರ ಏಕತೆಯೇ ಇದಕ್ಕೆ ಪ್ರಬಲವಾದ ಉತ್ತರವಾಗಲಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ

TAGGED:jammu kashmirMangaluruPahalgam Attackterrorismterrorist attackಕ್ಯಾ.ಬ್ರಿಜೇಶ್‌ ಚೌಟಜಮ್ಮು ಕಾಶ್ಮೀರಪಹಲ್ಗಾಮ್‌ಭಯೋತ್ಪಾದನೆಮಂಗಳೂರು
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
6 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
7 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
7 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
8 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
9 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?