ಬೆಂಗಳೂರು: ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ನಿರ್ದೇಶಕಿ ಕವಿತಾ ಲಂಕೇಶ್ ಟ್ವಿಟ್ಟರ್ ನಲ್ಲಿ ಗುಡುಗಿದ್ದಾರೆ.
ತನ್ನ ಸಹೋದರಿ ಗೌರಿ ಲಂಕೇಶ್ ಹತ್ಯೆಯನ್ನು ಸಮರ್ಥಿಸಿದ್ದ ವ್ಯಕ್ತಿ ಹಾಗೂ ಪಕ್ಷ ನಿಮ್ಮ ಕುಟುಂಬದ ಬಳಿ ಬರುತ್ತಿದೆ. ಚುನಾವಣೆಯಲ್ಲಿ ಮತ ಹಾಕುವ ಮುನ್ನ ಒಮ್ಮೆ ಯೋಚಿಸಿ ಎಂದು ಬರೆದುಕೊಂಡಿದ್ದು, ತೇಜಸ್ವಿ ಸೂರ್ಯ ಅವರ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.
ಗೌರಿ ಹತ್ಯೆ ಸಂದರ್ಭದಲ್ಲಿ ಬಿಜೆಪಿ ಕೆಲ ಕಾರ್ಯಕರ್ತರು ಹಾಗು ನಾಯಕರು ಹತ್ಯೆ ಬಗ್ಗೆ ವಿವಾದತ್ಮಾಕ ಹೇಳಿಕೆ ನೀಡಿದ್ದರು. ಅಲ್ಲದೇ ಮೋದಿ ಅವರ ಬೆಂಬಲಿಗರು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಗೌರಿ ಹತ್ಯೆಯನ್ನು ಸಮರ್ಥಿಸಿದ್ದರು. ಈ ಬಗ್ಗೆ ರಾಜ್ಯದಲ್ಲೆಡೆಗೆ ಟೀಕೆ ಕೇಳಿ ಬಂದಿತ್ತು.
This is the man who defends murderers of my dear sister Gauri Lankesh. He and his party will come to your family too soon. Think before you vote. pic.twitter.com/M6ryVNP2nu
— KavithaLankesh (@kavithalankesh) March 29, 2019
ಇತ್ತ ತೇಜಸ್ವಿ ಸೂರ್ಯ ಅವರಿಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಅಂತಿಮವಾಗುತ್ತಿದಂತೆ ರಾಜ್ಯ ಬಿಜೆಪಿಯಲ್ಲಿ ನಾಯಕರಲ್ಲಿ ಅಸಮಾಧಾನ ಮೂಡಿದೆ. ತೇಜಸ್ವಿನಿ ಅನಂತ್ಕುಮಾರ್ ಅವರಿಗೆ ಟಿಕೆಟ್ ನಿರಾಕರಿಸಿದಕ್ಕೆ ಕಾರಣವೇನು ಎಂದು ತಿಳಿದು ಬಂದಿಲ್ಲ ಎಂದು ರಾಜ್ಯ ನಾಯಕರು ಸ್ಪಷ್ಟನೆ ನೀಡಿದ್ದರು. ರಾಜ್ಯ ಬಿಜೆಪಿ ಉಸ್ತುವಾರಿ ಮುರುಳಿಧರ್ ರಾವ್ ಕೂಡ ತೇಜಸ್ವಿನಿ ಅನಂತ್ಕುಮಾರ್ ಅವರನ್ನು ಭೇಟಿ ಮಾಡಿ ಚುನಾವಣಾ ಪ್ರಚಾರಕ್ಕೆ ಆಗಮನಿಸುವಂತೆ ಮನವಿ ಮಾಡಿದ್ದರು.
ತೇಜಸ್ವಿನಿ ಅನಂತ್ಕುಮಾರ್ ಅವರು ಕೂಡ ತಮಗೆ ಬೆಂಗಳೂರು ದಕ್ಷಿಣ ಲೋಕಸಭಾ ಟಿಕೆಟ್ ತಪ್ಪಿದ್ಯಾಕೆ..? ಅಂತ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮೊದಲು ಸ್ಪಷ್ಟಪಡಿಸಬೇಕು. ಅವರ ಉತ್ತರ ಒಪ್ಪಿಗೆಯಾದರೆ ಮಾತ್ರ ನಾವು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇವೆ ಎಂದು ಮುರಳಿಧರ್ ಅವರ ಬಳಿ ಅಸಮಾಧಾನ ಹೊರಹಾಕಿದ್ದರು ಎಂಬ ಮಾಹಿತಿ ಲಭಿಸಿತ್ತು. ಇದರ ನಡುವೆಯೇ ಸ್ಪಷ್ಟನೆ ನೀಡಿದ್ದ ಬಿಎಸ್ ಯಡಿಯೂರಪ್ಪ ಅವರು, ನಮ್ಮಲ್ಲಿ ಬಿಜೆಪಿ, ಆರ್ ಎಸ್ಎಸ್ ಎಂಬ ಬೇದ ಇಲ್ಲ. ತೇಜಸ್ವಿನಿ ಅನಂತ್ಕುಮಾರ್ ಹಾಗೂ ಉಮೇಶ್ ಕತ್ತಿ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ತಿಳಿಸಿದ್ದರು.