-ಇದೇ ಮೊದಲ ಬಾರಿಗೆ ಕ್ಯೂಆರ್ ಸ್ಕ್ಯಾನ್ ತಂತ್ರಜ್ಞಾನ ಬಳಕೆ
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಸಿಇಟಿ (CET) ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಇದೇ ಮೊದಲ ಬಾರಿಗೆ ನಕಲಿ ಅಭ್ಯರ್ಥಿಗಳ ಕಡಿವಾಣಕ್ಕಾಗಿ ಕ್ಯೂ ಆರ್ ಸ್ಕ್ಯಾನ್ (QR Scan) ಕಣ್ಗಾವಲಿನಲ್ಲಿ ಪರೀಕ್ಷೆ ನಡೆಸಲಿದೆ.
ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಕೆಇಎ, ಮೊದಲ ಬಾರಿಗೆ ಪರೀಕ್ಷಾ ಅಕ್ರಮ ತಡೆಗೆ ಹೊಸ ತಂತ್ರಜ್ಞಾನ ಬಳಕೆ ಮಾಡಿಕೊಂಡು ಕ್ರಮಕ್ಕೆ ಮುಂದಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕ್ಯೂಆರ್ ಸ್ಕ್ಯಾನ್ ಮಾಡಿದ ನಂತರವೇ ವಿದ್ಯಾರ್ಥಿಗಳನ್ನು ಎಕ್ಸಾಂ ಹಾಲ್ಗೆ ಕಳುಹಿಸಲಾಗುವುದು. ಈ ಮೂಲಕ ಡೂಪ್ಲಿಕೇಟ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ತಪ್ಪಿಸಲು ಮಾಸ್ಟರ್ ಪ್ಲ್ಯಾನ್ ಮಾಡಿದೆ.ಇದನ್ನೂ ಓದಿ: ಸ್ನೇಹಿತರ ಕ್ರೆಡಿಟ್ ಕಾರ್ಡ್ನಿಂದ ಲಕ್ಷ ಲಕ್ಷ ಸಾಲ – ಲೋನ್ ಕಟ್ಟು ಎಂದ್ರೆ ಲಾಸ್ಟ್ ಆಪ್ಷನ್ ಅಂತ ವಿಷ ಕುಡಿದ!
ಸಿಇಟಿ ಪರೀಕ್ಷೆಯಿಂದ ಹಿಡಿದು ದಾಖಲಾತಿಯಾಗುವವರೆಗೂ ಕೆಇಎ ಕಣ್ಗಾವಲಿನಲ್ಲಿ ವಿದ್ಯಾರ್ಥಿಗಳು ಇರಲಿದ್ದು, ಸೀಟ್ ಬ್ಲಾಕ್ ಸೇರಿದಂತೆ ಇನ್ನಿತರ ಅಕ್ರಮ ತಡೆಗೆ ಹೊಸ ತಂತ್ರಜ್ಞಾನ ಬಳಸಲು ನಿರ್ಧರಿಸಿದೆ.
ಏನಿದು ಕ್ಯೂಆರ್ ಸ್ಕ್ಯಾನ್?
> ಪ್ರತಿ ಕೇಂದ್ರದಲ್ಲೂ ವಿದ್ಯಾರ್ಥಿಗಳಿಗೆ ಕ್ಯೂಆರ್ ಸ್ಕ್ಯಾನ್ ಮೂಲಕ ತಪಾಸಣೆ.
> ಪ್ರತಿ ಕೇಂದ್ರದ ಮುಖ್ಯಸ್ಥರಿಗೆ ಕ್ಯೂಆರ್ ಸ್ಕ್ಯಾನ್ ಮಾಡಲು ಆಪ್ ವ್ಯವಸ್ಥೆ ಮಾಡಲಾಗಿರುತ್ತದೆ.
> ಕ್ಯೂಆರ್ ಸ್ಕ್ಯಾನ್ನಲ್ಲಿ ಮೊದಲೇ ವಿದ್ಯಾರ್ಥಿ ಮಾಹಿತಿಯನ್ನು ಕೆಇಎ ಅಪ್ಲೋಡ್ ಮಾಡಿರುತ್ತದೆ.
> ವಿದ್ಯಾರ್ಥಿಗಳನ್ನ ಸ್ಕ್ಯಾನ್ ಮಾಡಿದ ಕೂಡಲೇ ವಿದ್ಯಾರ್ಥಿಯ ಸಂಪೂರ್ಣ ಮಾಹಿತಿ ಕೆಇಎಗೆ ತಲುಪುತ್ತದೆ.
> ಒಂದು ವೇಳೆ ಬೇರೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮುಂದಾದರೆ ಇದರಿಂದ ಪತ್ತೆ ಹಚ್ಚಬಹುದು.
> ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಸ್ಕ್ಯಾನ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗುತ್ತದೆ.
> ಯಾರದ್ದೋ ಪರೀಕ್ಷೆಯನ್ನು ಇನ್ಯಾರೋ ಬರೆಯುವುದನ್ನು ತಡೆಯುವ ಉದ್ದೇಶದಿಂದ ಈ ವ್ಯವಸ್ಥೆ ಜಾರಿ ಮಾಡಲಾಗಿದೆ.
> ಸೀಟು ಹಂಚಿಕೆಯಾಗಿ ಕಾಲೇಜುಗಳಿಗೆ ಪ್ರವೇಶ ಆಗುವ ಸಂದರ್ಭದಲ್ಲಿ ಕೂಡ ಅಭ್ಯರ್ಥಿಯ ಭಾವಚಿತ್ರವನ್ನು ಹೋಲಿಕೆ ಮಾಡಿಯೇ ಪ್ರವೇಶ ನೀಡುವ ವ್ಯವಸ್ಥೆ.
> ನಕಲಿ ಅಭ್ಯರ್ಥಿಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಈ ವ್ಯವಸ್ಥೆ ಜಾರಿಗೆ ಕೆಇಎ ಕ್ರಮ.ಇದನ್ನೂ ಓದಿ: ವಕ್ಫ್ ಸದ್ಬಳಕೆ ಆಗಿದ್ದರೆ ಮುಸ್ಲಿಮರು ಪಂಕ್ಚರ್ ಹಾಕುತ್ತಿರಲಿಲ್ಲ: ಮೋದಿ