Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ವೈದ್ಯಕೀಯ, ಎಂಜಿನಿಯರಿಂಗ್ – ಒಟ್ಟಿಗೇ ಕೌನ್ಸೆಲಿಂಗ್; ನೀಟ್ ಫಲಿತಾಂಶದ ನಂತರ ದಿನಾಂಕ ನಿಗದಿ – ಕೆಇಎ

Public TV
Last updated: June 2, 2024 8:36 pm
Public TV
Share
3 Min Read
KEA
SHARE

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ರ‍್ಯಾಂಕ್‌ (Rank) ತಡೆಹಿಡಿದಿರುವ ಅಥವಾ ರ‍್ಯಾಂಕ್‌ ನೀಡದಿರುವ ಅಭ್ಯರ್ಥಿಗಳು ಆತಂಕಪಡುವ ಅಗತ್ಯ ಇಲ್ಲ. ಅಂತಹವರು ನಾಳೆಯಿಂದಲೇ ಕೆಇಎ ಬಿಡುಗಡೆ ಮಾಡುವ ಪೋರ್ಟಲ್‌ನಲ್ಲಿ ತಮ್ಮ ಅಂಕಗಳನ್ನು ದಾಖಲಿಸಿ ರ‍್ಯಾಂಕ್‌ ಪಡೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದರು.

KCET

ಸಿಇಟಿ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಇಟಿಗೆ ಒಟ್ಟು 3.49 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 3.10 ಲಕ್ಷ ಅಭ್ಯರ್ಥಿಗಳು 737 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು. ಪಿಯುಸಿಯಲ್ಲಿ ನೀಡಿದ್ದ ಯೂನಿಕ್‌ ಸಂಖ್ಯೆಯನ್ನು ಸಿಇಟಿಗೆ ಅರ್ಜಿ ಸಲ್ಲಿಸುವಾಗ ಕೆಲವರು ತಪ್ಪಾಗಿ ನಮೂದಿಸಿದ್ದ ಪಕ್ಷದಲ್ಲಿ ರ‍್ಯಾಂಕ್‌ (Rank Holder) ಪ್ರಕಟ ಆಗಿರುವುದಿಲ್ಲ. ಅಂತಹ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಸರಿ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು. ಈ ರೀತಿ ರ‍್ಯಾಂಕ್‌ ತಡೆಹಿಡಿದಿರುವ ಸುಮಾರು 3,000 ಅಭ್ಯರ್ಥಿಗಳು ಇದ್ದಾರೆ. ಈ ತೀರ್ಮಾನದಿಂದ ಅಂತಹವರೆಲ್ಲರಿಗೂ ಅನುಕೂಲ ಆಗಲಿದೆ. ಪ್ರತಿಬಾರಿಯೂ ಈ ರೀತಿಯ ಒಂದಷ್ಟು ಮಂದಿ ತಪ್ಪುಗಳನ್ನು ಮಾಡುವ ಕಾರಣ ಹಾಗೆ ಆಗಿದೆ ಎಂದು ಅವರು ಸಮಜಾಯಿಷಿ ನೀಡಿದರು.

CET

ಜಂಟಿ ಕೌನ್ಸೆಲಿಂಗ್‌:
ನೀಟ್‌ ಫಲಿತಾಂಶದ ನಂತರ ಹಾಗೂ ಅದರ ಕೌನ್ಸೆಲಿಂಗ್‌ ವೇಳಾಪಟ್ಟಿಯನ್ನು ನೋಡಿಕೊಂಡು ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಒಟ್ಟಿಗೇ ಕೌನ್ಸೆಲಿಂಗ್‌ ಮಾಡಲಾಗುವುದು. ಇದರಿಂದ ಅನಗತ್ಯ ಗೊಂದಲ ತಪ್ಪಿಸಬಹುದು. ಹೀಗಾಗಿ ಕೌನ್ಸೆಲಿಂಗ್‌ ದಿನಾಂಕಗಳನ್ನು ನಂತರದ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ವಿವರಿಸಿದರು.

ಮತ್ತೊಂದು ಅವಕಾಶ:
ನೀಟ್‌ ಪರೀಕ್ಷೆ ತೆಗೆದುಕೊಂಡಿದ್ದರೂ ರಾಜ್ಯದ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಬೇಕಾದರೆ ಕೆಇಎಗೆ ಅರ್ಜಿ ಸಲ್ಲಿಸುವುದು ಕಡ್ಡಾಯ. ಆದರೆ, ಕೆಲವರು ಈ ರೀತಿ ಅರ್ಜಿ ಸಲ್ಲಿಸಿಲ್ಲ ಎಂದು ಹೇಳುತ್ತಿದ್ದು, ಅಂತಹವರಿಗೆ ಅನುಕೂಲ ಮಾಡಿಕೊಡಲು ನೀಟ್‌ ಫಲಿತಾಂಶದ ನಂತರ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದರು.

ಸರ್ಕಾರಿ ಕೋಟಾ ಸೀಟು ಎಲ್ಲೂ ಹೋಗಲ್ಲ:
ವೃತ್ತಿಪರ ಕೋರ್ಸ್‌ಗಳಲ್ಲಿ ಸರ್ಕಾರಿ ಕೋಟಾದ ಸೀಟುಗಳನ್ನು ಕೆಇಎ ಮೂಲಕವೇ ಹಂಚಿಕೆ ಮಾಡಲಾಗುತ್ತದೆ. ಈ ವಿಷಯದಲ್ಲಿ ಗೊಂದಲ ಬೇಡ. ಫಲಿತಾಂಶ ತಡವಾಯಿತು. ಹೀಗಾಗಿ ಎಲ್ಲಾ ಸೀಟುಗಳನ್ನು ಖಾಸಗಿ ಕಾಲೇಜು ಆಡಳಿತ ಮಂಡಳಿಗಳು ಹೆಚ್ಚಿನ ಡೊನೇಷನ್‌ ಪಡೆದು ಭರ್ತಿ ಮಾಡಿಕೊಳ್ಳುತ್ತೇವೆ ಎಂದು ಕೆಲವರು ಗೊಂದಲ ಸೃಷ್ಟಿಸುತ್ತಿದ್ದು, ಅಂತಹ ಊಹಾಪೋಹಗಳಿಗೆ ಕಿವಿಗೊಡಬೇಡಿ. ಕೆಇಎ ಮೂಲಕವೇ ಮೆರಿಟ್‌ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುತ್ತದೆ. ಹೀಗಾಗಿ ಇಂತಹ ಸುಳ್ಳುಸುದ್ದಿಗಳಿಗೆ ಪೋಷಕರಾಗಲಿ/ ವಿದ್ಯಾರ್ಥಿಗಳಾಗಲಿ ಗಮನ ನೀಡಬಾರದು ಎಂದು ಪ್ರಸನ್ನ ಮನವಿ ಮಾಡಿದರು.

ಆನ್‌ಲೈನ್‌ ದಾಖಲೆ ಪರಿಶೀಲನೆ:
ಈ ಬಾರಿ ವಿಶೇಷ ಮಕ್ಕಳ ವೈದ್ಯಕೀಯ ತಪಾಸಣೆ ಬಿಟ್ಟರೆ ಬಹುತೇಕ ಎಲ್ಲ ದಾಖಲೆಗಳ ಪರಿಶೀಲನೆ ಆನ್‌ಲೈನ್‌ನಲ್ಲಿ ನಡೆಯುತ್ತದೆ. ಯಾರೂ ಕೆಇಎ ಕಚೇರಿಗೆ ಬರುವ ಅಗತ್ಯ ಇರುವುದಿಲ್ಲ. ಅಭ್ಯರ್ಥಿಗಳು ಅಪ್ಲೋಡ್ ಮಾಡಿರುವ ಶೈಕ್ಷಣಿಕ ದಾಖಲೆಗಳನ್ನು (ವ್ಯಾಸಂಗ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ, ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ, ಧಾರ್ಮಿಕ ಅಲ್ಪಸಂಖ್ಯಾತ ಮೀಸಲಾತಿ, ಭಾಷಾ ಅಲ್ಪಸಂಖ್ಯಾತ ಮೀಸಲಾತಿ) ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆನ್‌ಲೈನ್‌ನಲ್ಲಿ ಪರಿಶೀಲನೆ ನಡೆಸಿ, ಮಂಜೂರಾತಿ ನೀಡುತ್ತಿದ್ದು, ಯಾವುದೇ ಗೊಂದಲ ಇಲ್ಲದೆ ಸಾಗಿದೆ. ಸೋಮವಾರಕ್ಕೆ ಇದು ಪೂರ್ಣವಾಗಲಿದೆ ಎಂದು ಹೇಳಿದರು.

ಸೀಟ್ ಮ್ಯಾಟ್ರಿಕ್:
ಪ್ರಸಕ್ತ ಸಾಲಿನ ಸೀಟ್ ಮ್ಯಾಟ್ರಿಕ್ ಇನ್ನೂ ಸರ್ಕಾರದಿಂದ ಬಂದಿಲ್ಲ. ಬಂದ ನಂತರ ಕಾಲೇಜು ಅಥವಾ ಕೋರ್ಸ್ ವಾರ ಸೀಟ್ ಮ್ಯಾಟ್ರಿಕ್ಸ್ ಅನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಅದೇ ರೀತಿ ಕೋರ್ಸ್‌ಗಳ ಶುಲ್ಕ ನಿಗದಿ ಸಂಬಂಧ ಒಂದು ಸಭೆ ನಡೆದಿದ್ದು, ಸದ್ಯದಲ್ಲೇ ಆ ಕುರಿತು ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಲಿದೆ ಎಂದರು.

TAGGED:bengaluruCETcounsellingKEANEETNEET examಕೆಇಎನೀಟ್‌ ಕೌನ್ಸೆಲಿಂಗ್‌ನೀಟ್ ಪರೀಕ್ಷೆಸಿಇಟಿ
Share This Article
Facebook Whatsapp Whatsapp Telegram

Cinema Updates

Sanjay Dutt 4
ನಮ್ಮ ದೇಶದ ತಾಕತ್ ಏನಂತ ಪ್ರಪಂಚಕ್ಕೆ ಗೊತ್ತಾಗಿದೆ: ಸಂಜಯ್ ದತ್
12 hours ago
narendra modi with sudeep
‘ಆಪರೇಷನ್ ಸಿಂಧೂರ’ ಮೆಚ್ಚಿ ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್ ಪತ್ರ
16 hours ago
ravi mohan kenishaa
ಡಿವೋರ್ಸ್ ಘೋಷಿಸಿದ ಬೆನ್ನಲ್ಲೇ ಗಾಯಕಿ ಜೊತೆ ಕಾಣಿಸಿಕೊಂಡ ರವಿ ಮೋಹನ್
1 day ago
rajamouli
ಆರ್ಮಿಗೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಬೇಡಿ: ರಾಜಮೌಳಿ ಮನವಿ
2 days ago

You Might Also Like

ajit doval wang yi
Latest

ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನು ಚೀನಾ ಖಂಡಿಸುತ್ತದೆ: ಅಜಿತ್‌ ದೋವಲ್‌ಗೆ ಫೋನ್‌ ಕರೆಯಲ್ಲಿ ಚೀನಾ ಸ್ಪಷ್ಟನೆ

Public TV
By Public TV
6 hours ago
nagrota indian army
Latest

ನಾಗ್ರೋಟಾದಲ್ಲಿ ಭಾರತೀಯ ಸೇನೆ & ಶಂಕಿತ ಉಗ್ರರ ನಡುವೆ ಗುಂಡಿನ ಚಕಮಕಿ

Public TV
By Public TV
7 hours ago
wang yi pakistan
Latest

ಉಗ್ರರ ಪೋಷಕ ಪಾಕಿಸ್ತಾನಕ್ಕೆ ಮತ್ತೆ ಬೆಂಬಲ ಘೋಷಿಸಿದ ಚೀನಾ

Public TV
By Public TV
7 hours ago
Capture 1
Latest

ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ: ವಿಕ್ರಂ ಮಿಸ್ರಿ

Public TV
By Public TV
8 hours ago
BSF Sub Inspector Mohammed Imteyaz
Crime

ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ – BSF ಯೋಧ ಹುತಾತ್ಮ

Public TV
By Public TV
9 hours ago
Omar Abdullah drone attack
Latest

ಕದನ ವಿರಾಮಕ್ಕೆ ಏನಾಯಿತು?: ಶ್ರೀನಗರದಲ್ಲಿ ಸ್ಫೋಟದ ಸದ್ದು ಕೇಳಿ ಜಮ್ಮು ಸಿಎಂ ಆತಂಕ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?