Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೈದ್ಯಕೀಯ, ಎಂಜಿನಿಯರಿಂಗ್ – ಒಟ್ಟಿಗೇ ಕೌನ್ಸೆಲಿಂಗ್; ನೀಟ್ ಫಲಿತಾಂಶದ ನಂತರ ದಿನಾಂಕ ನಿಗದಿ – ಕೆಇಎ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವೈದ್ಯಕೀಯ, ಎಂಜಿನಿಯರಿಂಗ್ – ಒಟ್ಟಿಗೇ ಕೌನ್ಸೆಲಿಂಗ್; ನೀಟ್ ಫಲಿತಾಂಶದ ನಂತರ ದಿನಾಂಕ ನಿಗದಿ – ಕೆಇಎ

Bengaluru City

ವೈದ್ಯಕೀಯ, ಎಂಜಿನಿಯರಿಂಗ್ – ಒಟ್ಟಿಗೇ ಕೌನ್ಸೆಲಿಂಗ್; ನೀಟ್ ಫಲಿತಾಂಶದ ನಂತರ ದಿನಾಂಕ ನಿಗದಿ – ಕೆಇಎ

Public TV
Last updated: June 2, 2024 8:36 pm
Public TV
Share
3 Min Read
KEA
SHARE

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ರ‍್ಯಾಂಕ್‌ (Rank) ತಡೆಹಿಡಿದಿರುವ ಅಥವಾ ರ‍್ಯಾಂಕ್‌ ನೀಡದಿರುವ ಅಭ್ಯರ್ಥಿಗಳು ಆತಂಕಪಡುವ ಅಗತ್ಯ ಇಲ್ಲ. ಅಂತಹವರು ನಾಳೆಯಿಂದಲೇ ಕೆಇಎ ಬಿಡುಗಡೆ ಮಾಡುವ ಪೋರ್ಟಲ್‌ನಲ್ಲಿ ತಮ್ಮ ಅಂಕಗಳನ್ನು ದಾಖಲಿಸಿ ರ‍್ಯಾಂಕ್‌ ಪಡೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದರು.

KCET

ಸಿಇಟಿ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಇಟಿಗೆ ಒಟ್ಟು 3.49 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 3.10 ಲಕ್ಷ ಅಭ್ಯರ್ಥಿಗಳು 737 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು. ಪಿಯುಸಿಯಲ್ಲಿ ನೀಡಿದ್ದ ಯೂನಿಕ್‌ ಸಂಖ್ಯೆಯನ್ನು ಸಿಇಟಿಗೆ ಅರ್ಜಿ ಸಲ್ಲಿಸುವಾಗ ಕೆಲವರು ತಪ್ಪಾಗಿ ನಮೂದಿಸಿದ್ದ ಪಕ್ಷದಲ್ಲಿ ರ‍್ಯಾಂಕ್‌ (Rank Holder) ಪ್ರಕಟ ಆಗಿರುವುದಿಲ್ಲ. ಅಂತಹ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಸರಿ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು. ಈ ರೀತಿ ರ‍್ಯಾಂಕ್‌ ತಡೆಹಿಡಿದಿರುವ ಸುಮಾರು 3,000 ಅಭ್ಯರ್ಥಿಗಳು ಇದ್ದಾರೆ. ಈ ತೀರ್ಮಾನದಿಂದ ಅಂತಹವರೆಲ್ಲರಿಗೂ ಅನುಕೂಲ ಆಗಲಿದೆ. ಪ್ರತಿಬಾರಿಯೂ ಈ ರೀತಿಯ ಒಂದಷ್ಟು ಮಂದಿ ತಪ್ಪುಗಳನ್ನು ಮಾಡುವ ಕಾರಣ ಹಾಗೆ ಆಗಿದೆ ಎಂದು ಅವರು ಸಮಜಾಯಿಷಿ ನೀಡಿದರು.

CET

ಜಂಟಿ ಕೌನ್ಸೆಲಿಂಗ್‌:
ನೀಟ್‌ ಫಲಿತಾಂಶದ ನಂತರ ಹಾಗೂ ಅದರ ಕೌನ್ಸೆಲಿಂಗ್‌ ವೇಳಾಪಟ್ಟಿಯನ್ನು ನೋಡಿಕೊಂಡು ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಒಟ್ಟಿಗೇ ಕೌನ್ಸೆಲಿಂಗ್‌ ಮಾಡಲಾಗುವುದು. ಇದರಿಂದ ಅನಗತ್ಯ ಗೊಂದಲ ತಪ್ಪಿಸಬಹುದು. ಹೀಗಾಗಿ ಕೌನ್ಸೆಲಿಂಗ್‌ ದಿನಾಂಕಗಳನ್ನು ನಂತರದ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ವಿವರಿಸಿದರು.

ಮತ್ತೊಂದು ಅವಕಾಶ:
ನೀಟ್‌ ಪರೀಕ್ಷೆ ತೆಗೆದುಕೊಂಡಿದ್ದರೂ ರಾಜ್ಯದ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಬೇಕಾದರೆ ಕೆಇಎಗೆ ಅರ್ಜಿ ಸಲ್ಲಿಸುವುದು ಕಡ್ಡಾಯ. ಆದರೆ, ಕೆಲವರು ಈ ರೀತಿ ಅರ್ಜಿ ಸಲ್ಲಿಸಿಲ್ಲ ಎಂದು ಹೇಳುತ್ತಿದ್ದು, ಅಂತಹವರಿಗೆ ಅನುಕೂಲ ಮಾಡಿಕೊಡಲು ನೀಟ್‌ ಫಲಿತಾಂಶದ ನಂತರ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದರು.

ಸರ್ಕಾರಿ ಕೋಟಾ ಸೀಟು ಎಲ್ಲೂ ಹೋಗಲ್ಲ:
ವೃತ್ತಿಪರ ಕೋರ್ಸ್‌ಗಳಲ್ಲಿ ಸರ್ಕಾರಿ ಕೋಟಾದ ಸೀಟುಗಳನ್ನು ಕೆಇಎ ಮೂಲಕವೇ ಹಂಚಿಕೆ ಮಾಡಲಾಗುತ್ತದೆ. ಈ ವಿಷಯದಲ್ಲಿ ಗೊಂದಲ ಬೇಡ. ಫಲಿತಾಂಶ ತಡವಾಯಿತು. ಹೀಗಾಗಿ ಎಲ್ಲಾ ಸೀಟುಗಳನ್ನು ಖಾಸಗಿ ಕಾಲೇಜು ಆಡಳಿತ ಮಂಡಳಿಗಳು ಹೆಚ್ಚಿನ ಡೊನೇಷನ್‌ ಪಡೆದು ಭರ್ತಿ ಮಾಡಿಕೊಳ್ಳುತ್ತೇವೆ ಎಂದು ಕೆಲವರು ಗೊಂದಲ ಸೃಷ್ಟಿಸುತ್ತಿದ್ದು, ಅಂತಹ ಊಹಾಪೋಹಗಳಿಗೆ ಕಿವಿಗೊಡಬೇಡಿ. ಕೆಇಎ ಮೂಲಕವೇ ಮೆರಿಟ್‌ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುತ್ತದೆ. ಹೀಗಾಗಿ ಇಂತಹ ಸುಳ್ಳುಸುದ್ದಿಗಳಿಗೆ ಪೋಷಕರಾಗಲಿ/ ವಿದ್ಯಾರ್ಥಿಗಳಾಗಲಿ ಗಮನ ನೀಡಬಾರದು ಎಂದು ಪ್ರಸನ್ನ ಮನವಿ ಮಾಡಿದರು.

ಆನ್‌ಲೈನ್‌ ದಾಖಲೆ ಪರಿಶೀಲನೆ:
ಈ ಬಾರಿ ವಿಶೇಷ ಮಕ್ಕಳ ವೈದ್ಯಕೀಯ ತಪಾಸಣೆ ಬಿಟ್ಟರೆ ಬಹುತೇಕ ಎಲ್ಲ ದಾಖಲೆಗಳ ಪರಿಶೀಲನೆ ಆನ್‌ಲೈನ್‌ನಲ್ಲಿ ನಡೆಯುತ್ತದೆ. ಯಾರೂ ಕೆಇಎ ಕಚೇರಿಗೆ ಬರುವ ಅಗತ್ಯ ಇರುವುದಿಲ್ಲ. ಅಭ್ಯರ್ಥಿಗಳು ಅಪ್ಲೋಡ್ ಮಾಡಿರುವ ಶೈಕ್ಷಣಿಕ ದಾಖಲೆಗಳನ್ನು (ವ್ಯಾಸಂಗ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ, ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ, ಧಾರ್ಮಿಕ ಅಲ್ಪಸಂಖ್ಯಾತ ಮೀಸಲಾತಿ, ಭಾಷಾ ಅಲ್ಪಸಂಖ್ಯಾತ ಮೀಸಲಾತಿ) ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆನ್‌ಲೈನ್‌ನಲ್ಲಿ ಪರಿಶೀಲನೆ ನಡೆಸಿ, ಮಂಜೂರಾತಿ ನೀಡುತ್ತಿದ್ದು, ಯಾವುದೇ ಗೊಂದಲ ಇಲ್ಲದೆ ಸಾಗಿದೆ. ಸೋಮವಾರಕ್ಕೆ ಇದು ಪೂರ್ಣವಾಗಲಿದೆ ಎಂದು ಹೇಳಿದರು.

ಸೀಟ್ ಮ್ಯಾಟ್ರಿಕ್:
ಪ್ರಸಕ್ತ ಸಾಲಿನ ಸೀಟ್ ಮ್ಯಾಟ್ರಿಕ್ ಇನ್ನೂ ಸರ್ಕಾರದಿಂದ ಬಂದಿಲ್ಲ. ಬಂದ ನಂತರ ಕಾಲೇಜು ಅಥವಾ ಕೋರ್ಸ್ ವಾರ ಸೀಟ್ ಮ್ಯಾಟ್ರಿಕ್ಸ್ ಅನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಅದೇ ರೀತಿ ಕೋರ್ಸ್‌ಗಳ ಶುಲ್ಕ ನಿಗದಿ ಸಂಬಂಧ ಒಂದು ಸಭೆ ನಡೆದಿದ್ದು, ಸದ್ಯದಲ್ಲೇ ಆ ಕುರಿತು ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಲಿದೆ ಎಂದರು.

TAGGED:bengaluruCETcounsellingKEANEETNEET examಕೆಇಎನೀಟ್‌ ಕೌನ್ಸೆಲಿಂಗ್‌ನೀಟ್ ಪರೀಕ್ಷೆಸಿಇಟಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Husband who killed wife with axe surrenders to police Mysuru
Crime

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

Public TV
By Public TV
21 minutes ago
Weather 1
Bengaluru City

ಇಂದೂ ಸಹ ಬೆಂಗಳೂರಲ್ಲಿ ಆರ್ಭಟಿಸಲಿದ್ದಾನೆ ವರುಣ – ಮೇ 1ರವರೆಗೂ ಮಳೆ ಮುನ್ಸೂಚನೆ

Public TV
By Public TV
23 minutes ago
Groom dies in an accident while going for a pre wedding shoot sakleshpur hassan
Crime

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು

Public TV
By Public TV
26 minutes ago
Earthquake General Photo
Latest

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ

Public TV
By Public TV
57 minutes ago
West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರು ಮತದಾನ

Public TV
By Public TV
1 hour ago
Heavy Rain in Bengaluru Fear again at KR Circle Underpass A major tragedy was avoided by a few minutes
Bengaluru City

ಕೆ.ಆರ್. ಸರ್ಕಲ್ ಅಂಡರ್ ಪಾಸ್‌ನಲ್ಲಿ ಮತ್ತೆ ಭೀತಿ – ಕೆಲ ನಿಮಿಷಗಳ ಅಂತರದಲ್ಲಿ ತಪ್ಪಿತು ಭಾರೀ ದುರಂತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?