– ಪೈಲೆಟ್ಗೆ ಗಾಯ, ಪ್ರಯಾಣಿಕರು ಸೇಫ್
ಡೆಹ್ರಾಡೂನ್: ಟೇಕ್ ಆಫ್ ವೇಳೆ ತಾಂತ್ರಿಕ ದೋಷ ಉಂಟಾದ ಪರಿಣಾಮ ಕೇದಾರನಾಥಕ್ಕೆ (Kedarnath) ತೆರಳುತ್ತಿದ್ದ ಹೆಲಿಕಾಪ್ಟರ್ (Helicopter) ಹೆದ್ದಾರಿಯಲ್ಲೇ ತುರ್ತು ಭೂಸ್ಪರ್ಶ ಮಾಡಿದ ಘಟನೆ ಉತ್ತರಾಖಂಡದ (Uttarakhand) ರುದ್ರಪ್ರಯಾಗದಲ್ಲಿ ನಡೆದಿದೆ.
#WATCH | Uttarakhand | A private helicopter en route to Kedarnath Dham made an emergency landing in Guptkashi of Rudraprayag district due to a technical fault. All the people on board the helicopter are safe: Uttarakhand ADG Law and Order Dr V Murugeshan
CEO of UCADA has… pic.twitter.com/Zj1SLluZ7N
— ANI (@ANI) June 7, 2025
ಘಟನೆಯಲ್ಲಿ ಪೈಲೆಟ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಲಿಕಾಪ್ಟರ್ನಲ್ಲಿ ಪೈಲೆಟ್ ಹಾಗೂ ಐದು ಮಂದಿ ಪ್ರಯಾಣಿಕರಿದ್ದರು. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಈ ಹೆಲಿಕಾಪ್ಟರ್ ಕ್ರೆಸ್ಟೆಲ್ ವಿಮಾನಯಾನ ಸಂಸ್ಥೆಗೆ ಸೇರಿದೆ. ಇದನ್ನೂ ಓದಿ: ಮಂಗಳೂರು| ಸೆಮಿನಾರ್ ತಪ್ಪಿಸಲು ವಿದ್ಯಾರ್ಥಿನಿಯಿಂದಲೇ ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ
ಈ ಹೆಲಿಕಾಪ್ಟರ್ ರುದ್ರಪ್ರಯಾಗ (Rudraprayag) ಜಿಲ್ಲೆಯ ಬಡಾಸು ಪ್ರದೇಶದ ಹೆಲಿಪ್ಯಾಡ್ನಿಂದ ಮಧ್ಯಾಹ್ನ 12:52ಕ್ಕೆ ಹೊರಟಿತ್ತು. ಆದರೆ ಟೇಕ್ ಆಫ್ ನಂತರ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಹೆದ್ದಾರಿಯಲ್ಲಿಯೇ ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ. ತುರ್ತು ಭೂಸ್ಪರ್ಶದ ವೇಳೆ ಹೆಲಿಕಾಪ್ಟರ್ನ ಹಿಂಭಾಗ ಕಾರಿಗೆ ತಾಗಿದ್ದು, ಕಾರು ಜಖಂಗೊಂಡಿದೆ. ಇದನ್ನೂ ಓದಿ: ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ 17 ವರ್ಷ ಕಳೆದ IISC ಪ್ರೊಫೆಸರ್ ಮಾಧವಿ ಲತಾ