ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ (Liquor Policy Case) ಬಂಧನಕ್ಕೊಳಗಾಗಿ ಸದ್ಯ ನ್ಯಾಯಂಗ ಬಂಧನದಡಿ ತಿಹಾರ್ ಜೈಲಿನಲ್ಲಿರುವ (Tihar Jail) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ನೇರ ಭೇಟಿ ಮಾಡಲು ಪತ್ನಿ ಸುನೀತಾ (Sunita) ಅವರಿಗೆ ಅನುಮತಿ ನಿರಾಕರಿಸಲಾಗಿದೆ. ಕೇವಲ ಕಿಟಕಿಯ ಮೂಲಕ ಭೇಟಿಗೆ ಅವಕಾಶ ನೀಡಲಾಗಿದೆ. ಇದು ಅಮಾನವೀಯ ನಡೆ ಎಂದು ಆಮ್ ಆದ್ಮಿ ಪಕ್ಷದ (AAP) ನಾಯಕ ಸಂಜಯ್ ಸಿಂಗ್ ಶನಿವಾರ ಆರೋಪಿಸಿದ್ದಾರೆ.
ಕಳೆದ ಅಕ್ಟೋಬರ್ನಲ್ಲಿ ಇದೇ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಂತರ ತಿಹಾರ್ನಲ್ಲಿ ಆರು ತಿಂಗಳು ಕಳೆದು ಈ ತಿಂಗಳ ಆರಂಭದಲ್ಲಿ ಜಾಮೀನು ಪಡೆದ ಸಂಜಯ್ ಸಿಂಗ್ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಅಪರಾಧಿಗಳು ಕುಟುಂಬಸ್ಥರನ್ನು ಭೇಟಿಯಾಗಲು ಜೈಲಿನಲ್ಲಿ ಅನುಮತಿ ಇದೆ. ಆದರೆ ಕೇಜ್ರಿವಾಲ್ ಭೇಟಿಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅರ್ಜಿ – ಸೋಮವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್
ಅರವಿಂದ್ ಕೇಜ್ರಿವಾಲ್ ಮೂರು ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿದ್ದವರು ತಮ್ಮ ಪತ್ನಿಯನ್ನು ನಡುವೆ ಗಾಜಿನಿಂದ ಕಿಟಕಿಯ ಮೂಲಕ ಭೇಟಿಯಾಗುವಂತೆ ಮಾಡುತ್ತಿದ್ದಾರೆ. ಇಂತಹ ಅಮಾನವೀಯ ವರ್ತನೆ ಏಕೆ? ಎಂದು ಸಂಜಯ್ ಸಿಂಗ್ ಪ್ರಶ್ನಿಸಿದರು. ನಮ್ಮನ್ನು ಅವಮಾನಿಸಲು ಮತ್ತು ನೈತಿಕತೆ ಸ್ಥೈರ್ಯ ಕುಗ್ಗಿಸಲು ಇದನ್ನು ಮಾಡಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಚುನಾವಣಾ ಪ್ರಚಾರದ ವೇಳೆ ಬೇಕರಿಯಲ್ಲಿ ಗುಲಾಬ್ ಜಾಮೂನು ಖರೀದಿಸಿದ ರಾಹುಲ್ ಗಾಂಧಿ
ಕೇಂದ್ರ ಸರ್ಕಾರ ಮತ್ತು ಪ್ರಧಾನಿಯವರ ಒತ್ತಾಯದ ಮೇರೆಗೆ ಅರವಿಂದ್ ಕೇಜ್ರಿವಾಲ್ ಅವರಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಜೈಲಿನಲ್ಲಿ ಅವರು ಮೂಲಭೂತ ಹಕ್ಕುಗಳಿಂದ ವಂಚಿತರಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪಂಜಾಬ್ ಸಿಎಂ ಭಗವಂತ್ ಮಾನ್ ನಡುವಿನ ಸಭೆಯನ್ನು ಕೊನೆಯ ಕ್ಷಣದಲ್ಲಿ ಅಧಿಕಾರಿಗಳು ರದ್ದುಗೊಳಿಸಿದ್ದಾರೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: 6 ವರ್ಷಗಳ ಮುನಿಸು ಮರೆತು ಶ್ರೀನಿವಾಸ್ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ
ಸಹಾರಾ ಇಂಡಿಯಾದ ದಿವಂಗತ ಸಂಸ್ಥಾಪಕ ಮತ್ತು ಅಧ್ಯಕ್ಷ ಸುಬ್ರತಾ ರಾಯ್ ಅವರು ತಿಹಾರ್ನಲ್ಲಿ ಇಂಟರ್ನೆಟ್, ಫೋನ್ ಮತ್ತು ಕಚೇರಿ ಸೌಲಭ್ಯಗಳನ್ನು ಹೊಂದಿದ್ದರು. ಚಂದ್ರ ಬ್ರದರ್ಸ್ಗೆ ಜೈಲು ಆವರಣದಲ್ಲಿ ನಿಯಮಿತ ಸಭೆಗಳನ್ನು ನಡೆಸಲು ಮತ್ತು ಫೈಲ್ಗಳಿಗೆ ಸಹಿ ಹಾಕಲು ಅವಕಾಶವಿದೆ. ಆದರೆ ಅರವಿಂದ್ ಕೇಜ್ರಿವಾಲ್ ಬಗ್ಗೆ ನೀವು ಯಾಕೆ ಹೆದರುತ್ತೀರಿ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ರಾಜಸ್ಥಾನದಲ್ಲಿ ಕಾಂಗ್ರೆಸ್ ತೊರೆದ 400 ಕಾರ್ಯಕರ್ತರು