ಬೆಂಗಳೂರು: ಕೆಂಗಲ್ ಹನುಮಂತಯ್ಯನವರು (Kengal Hanumanthaiah) ದಕ್ಷ ಆಡಳಿತಗಾರ, ಕರ್ನಾಟಕವನ್ನು ಅತ್ಯಂತ ದಕ್ಷತೆಯಿಂದ ಸುಮಾರು ನಾಲ್ಕೂವರೆ ವರ್ಷ ಆಳಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಜಿ ಸಿಎಂ ದಿ.ಕೆಂಗಲ್ ಹನುಮಂತಯ್ಯ ಅವರ ಜನ್ಮದಿನಾಚಾರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ಕೆಂಗಲ್ ಹನುಮಂತಯ್ಯನವರ ಜನ್ಮ ದಿನದಂದು ಅವರ ಸ್ಮರಣೆ ಮಾಡಿ ಗೌರವ ಸಲ್ಲಿಸಿದ್ದೇವೆ. ರಾಮನಗರ ಜಿಲ್ಲೆಯವರಾದ ಅವರು ಸಂವಿಧಾನ ಜಾರಿಯಾದ ನಂತರ ಮುಖ್ಯಮಂತ್ರಿಯಾದವರು. ಅವರ ಕಾಲದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯ ಮಂತ್ರಿಯಾದವರು. ವಿಧಾನಸೌಧ ಕಟ್ಟಿಸಿದ್ದು ಅವರು. ದುರ್ದೈವ, ಅದನ್ನು ಅವರು ಉದ್ಘಾಟಿಸಲು ಬಿಡಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ವೀಕೆಂಡ್ನಲ್ಲಿ ಭಕ್ತಸಾಗರ- VIP ಗೇಟ್ ತೆರೆದ ಆಡಳಿತ ಮಂಡಳಿ
ವಿಧಾನಸೌಧದ ಪೂರ್ವದಿಕ್ಕಿನಲ್ಲಿ ಸರ್ಕಾರಿ ಕೆಲಸ ದೇವರ ಕೆಲಸ ಎಂದು ಬರೆಸಿದ್ದು, ಜನಸೇವೆಯೇ ಜನಾರ್ದನ ಸೇವೆ ಎಂದು ಅದರ ಅರ್ಥವಾಗಿದೆ. ಅವರು ಬದ್ಧತೆ, ನಿಷ್ಠುರತೆಯಿಂದ ಸರ್ಕಾರದ ಕೆಲಸ ಮಾಡಿದ್ದರು. ಹಳೇ ಮೈಸೂರು ಭಾಗದವರಾದರೂ ವಿಶಾಲ ಕರ್ನಾಟಕವಾಗಬೇಕೆಂದು ಕರ್ನಾಟಕ ಏಕೀಕರಣದಲ್ಲಿ ಭಾಗವಹಿಸಿದ್ದರು. ಅವರ ತತ್ವ ಆದರ್ಶಗಳು, ಆಡಳಿತ ನಮಗೆ ಮಾದರಿ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಮುನ್ನ ಸಿಎಎ ಜಾರಿ: ಅಮಿತ್ ಶಾ ಘೋಷಣೆ