ತಿರುವನಂತಪುರಂ: ಕೇರಳವು ಮಾತೃಭಾಷೆ ವಿಚಾರದಲ್ಲಿ ಸದಾ ಒಂದು ಹೆಜ್ಜೆ ಮುಂದಿರುತ್ತದೆ. ಆದರೆ ಅಲ್ಲಿನ ವಿಧಾನಸಭೆಯಲ್ಲಿ ಇಂದು ಕನ್ನಡ ಕೇಳಿಬಂದಿದ್ದು ಎಲ್ಲರ ಗಮನ ಸೆಳೆಯುವಂತೆ ಮಾಡಿದೆ.
ಕೇರಳದ 5 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ನಡೆದ ಉಪ ಚುನಾವಣೆ ನಡೆಯಿತು. ಅಕ್ಟೋಬರ್ 24ರಂದು ಬಂದ ಫಲಿತಾಂಶದಲ್ಲಿ ಕಾಂಗ್ರೆಸ್ ಹಾಗೂ ಸಿಪಿಐ ತಲಾ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಇಂಡಿಯನ್ ಯುಬಿಯನ್ ಮುಸ್ಲಿಂ ಲೀಗ್ 1 ಕ್ಷೇತ್ರದಲ್ಲಿ ಜಯ ಗಳಿಸಿದೆ.
- Advertisement 2
- Advertisement 3
ಐದು ಜನ ನೂತನ ಶಾಸಕರು ಸೋಮವಾರ ಆರಂಭವಾದ ವಿಧಾನಸಭೆಯ ಕಲಾಪದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಮಂಜೇಶ್ವರ ಕ್ಷೇತ್ರದ ಶಾಸಕ ಎಂ.ಸಿ.ಖಮರುದ್ದೀನ್ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ.
- Advertisement 4
ಇಂಡಿಯನ್ ಯುಬಿಯನ್ ಮುಸ್ಲಿಂ ಲೀಗ್ನಿಂದ ಸ್ಪರ್ಧಿಸಿದ್ದ ಎಂ.ಸಿ.ಖಮರುದ್ದೀನ್ ಅವರು 7,923 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ವಿಜೇತ ಖಮರುದ್ದೀನ್ 65,407 ಮತಗಳನ್ನು ಪಡೆದಿದ್ದರೆ, ಪರಾಜಿತ ಬಿಜೆಪಿ ಅಭ್ಯರ್ಥಿ ರವೀಶ್ ತಂತ್ರಿ ಕುಂಟಾರ್ 57,484 ಮತಗಳನ್ನು ಗಳಿಸಿದ್ದಾರೆ.