ತಿರುವನಂತಪುರಂ: ಕೇರಳದ ಕೊಟ್ಟಾಯಂನಲ್ಲಿ ಪೇಂಟಿಂಗ್ ಕೆಲಸಗಾರರೊಬ್ಬರು ಸರ್ಕಾರದ ಕ್ರಿಸ್ಮಸ್-ಹೊಸ ವರ್ಷದ ಲಾಟರಿಯ ಮೊದಲ ಬಹುಮಾನವಾದ 12 ಕೋಟಿ ರೂ. ಗೆದ್ದಿದ್ದಾರೆ.
ಕುಡಯಂಪಾಡಿ ಮೂಲದ ಸದಾನಂದನ್ ಅಲಿಯಾಸ್ ಸದನ್ ಅವರು ಭಾನುವಾರ ಬೆಳಗ್ಗೆ ತಿರುವನಂತಪುರದಲ್ಲಿ ಲಕ್ಕಿ ಡ್ರಾಗೆ ಕೆಲವೇ ಗಂಟೆಗಳ ಮೊದಲು 218582 ಸಂಖ್ಯೆಯ ಲಾಟರಿ ಟಿಕೆಟ್ ಖರೀದಿಸಿದ್ದಾರೆ. ಟಿಕೆಟ್ ಖರೀದಿಸಿದ ಕೆಲವೇ ಗಂಟೆಗಳಲ್ಲಿ ಬಹುಮಾನ ಅನೌನ್ಸ್ ಆಗಿದ್ದು, ಸದಾನಂದನ್ ಅವರು ಕ್ರಿಸ್ಮಸ್ ನ್ಯೂ ಇಯರ್ ಬಂಪರ್ 12 ಕೋಟಿ ರೂ. ಲಾಟರಿ ಗೆದ್ದಿದ್ದಾರೆ. ಇದನ್ನೂ ಓದಿ: ಕೋವಿಡ್-19 ಪ್ರಕರಣ ಏರಿಕೆ – ಮದುವೆ ನೋಂದಣಿ ಸೇವೆ ಸ್ಥಗಿತ!
ಈ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಇಂದು ಬೆಳಿಗ್ಗೆ ಮಾಂಸವನ್ನು ಖರೀದಿಸಲು ಹತ್ತಿರದ ಮಾರುಕಟ್ಟೆಗೆ ಹೋಗಿದ್ದೆ. ಆಗ ಲಾಟರಿ ಮಾರಾಟಗಾರ ಸೆಲ್ವನ್ ನಿಂದ ಈ ಟಿಕೆಟ್ ಖರೀದಿಸಿದೆ. ಆದರೆ ಈಗ ಟಿಕೆಟ್ ಗೆ ಬಹುಮಾನ ಬಂದಿರುವುದು ಖುಷಿಯಾಗುತ್ತಿದೆ ಎಂದು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಲಾಟರಿಯಿಂದ ಬಂದ ಹಣವನ್ನು ತನ್ನ ಮಕ್ಕಳಾದ ಸನೀಷ್ ಮತ್ತು ಸಂಜಯ್ ಅವರಿಗಾಗಿ ಬಳಸುತ್ತೇನೆ ಎಂದು ಹೇಳಿದ್ದಾರೆ. ಸದಾನಂದನ್ ಅವರು 50 ವರ್ಷಗಳಿಂದ ಪೇಂಟಿಂಗ್ ಅನ್ನು ವೃತ್ತಿ ಜೀವನವಾಗಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವಸತಿ ಶಾಲೆಗಳಿಂದ ಮಕ್ಕಳನ್ನು ಕರೆದೊಯ್ಯುತ್ತಿದ್ದಾರೆ ಪೋಷಕರು