Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಕೇರಳದಲ್ಲಿ ನಿಯಂತ್ರಣಕ್ಕೆ ಬಂದ ಕೊರೊನಾ- 63ನೇ ವಯಸ್ಸಿನಲ್ಲಿ ಶೈಲಜಾ ಕಾರ್ಯಕ್ಕೆ ಜನಮೆಚ್ಚುಗೆ

Public TV
Last updated: May 11, 2020 11:03 am
Public TV
Share
4 Min Read
KK Shailaja
SHARE

– ಹಾಟ್‍ಸ್ಟಾಟ್ ಕೇರಳದಲ್ಲಿ ಸೋಂಕು ಹಿಡಿತಕ್ಕೆ ಬರಲು ಕಾರಣವೇನು?
– ಕೇರಳದ 8 ಜಿಲ್ಲೆಗಳು ಕೊರೊನಾ ರಹಿತ

ತಿರುವನಂತಪುರಂ: ಭಾರತದಲ್ಲಿ ಮೊದಲ ಕೊರೊನಾ ಪ್ರಕರಣ ದಾಖಲಾಗಿದ್ದ ಕೇರಳದಲ್ಲಿ ಈಗ ಕೊರೊನಾ ಹಿಡಿತಕ್ಕೆ ಬಂದಿದೆ. ಕೊರೊನಾ ವೈರಸ್ ನ ಹಾಟ್‍ಸ್ಟಾಟ್ ಆಗಿದ್ದ ಕೇರಳ ಅಲ್ಲಿನ ಆರೋಗ್ಯ ಸಚಿವೆ ಕೆಕೆ ಶೈಲಜಾ ಅವರ ದಿಟ್ಟ ಕಾರ್ಯದಿಂದ ಕೊರೊನಾ ಮುಕ್ತವಾಗುತ್ತಿದೆ.

ಕಳೆದ ವರ್ಷ ಡಿಸೆಂಬರ್ ನಲ್ಲಿ ಚೀನಾದ ವುಹಾನ್ ಪ್ರದೇಶದಲ್ಲಿ ಕಾಣಿಸಿಕೊಂಡ ಕೊರೊನಾ ಇಂದು ವಿಶ್ವಕ್ಕೆ ಮಹಾಮಾರಿಯಾಗಿ ಕಾಡುತ್ತಿದೆ. ಭಾರತದಲ್ಲಿ ಈ ಸೋಂಕು ಮೊದಲಿಗೆ ಕಾಣಿಸಿಕೊಂಡಿದ್ದು ಕೇರಳದಲ್ಲಿ, ಚೀನಾದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗೆ ಈ ಸೋಂಕು ಜನವರಿ 30ರಂದು ಭಾರತದಲ್ಲಿ ಮೊದಲಿಗೆ ಪತ್ತೆಯಾಗಿತ್ತು. ಇದಾದ ನಂತರ ಕೇರಳ ಕೊರೊನಾ ಹಾಟ್‍ಸ್ಟಾಟ್ ಆಗಿತ್ತು.

Corona Virus 2

ಈ ಹಿಂದೆಯಿಂದಲೂ ಈ ರೀತಿಯ ಪರಿಸ್ಥಿತಿಯನ್ನು ಬಹಳ ಎದುರಿಸಿದ್ದ ಕೇರಳ, ನಿಫಾ, ಹೆಚ್1ಎನ್1, ಚಿಕನ್‍ಗುನ್ಯಾನಂತಹ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಿ ಗೆದ್ದಿತ್ತು. ಈ ಅನುಭವದಿಂದಲೇ ಕೇರಳ ಜನವರಿ 24ರಂದೇ ಕೊರೊನಾ ಕಂಟ್ರೋಲ್ ರೂಂ ಅನ್ನು ಓಪನ್ ಮಾಡಿತ್ತು. ಭಾರತದಲ್ಲಿ ಕೊರೊನಾ ಪ್ರಭಾವ ಹೆಚ್ಚಾಗುವುದಕ್ಕೂ ಮುನ್ನವೇ ಜನರನ್ನು ಐಸೋಲೇಟ್ ಮಾಡಲು ಶುರು ಮಾಡಿತ್ತು. ಜೊತೆಗೆ ಎನ್ 95 ಮಾಸ್ಕ್ ಗಳು ಮತ್ತು ಪಿಪಿಇ ಕಿಟ್‍ಗಳ ಖರೀದಿಗೆ ಮುಂದಾಗಿತ್ತು.

KK Shailaja 2

ದಿಟ್ಟ ನಿರ್ಧಾರ ತೆಗೆದುಕೊಂಡ ಶೈಲಜಾ:
ಇಂದು ಕೇರಳದಲ್ಲಿ ಕೊರೊನಾ ಹಿಡಿತಕ್ಕೆ ಬರಲು ಕಾರಣ ಅಲ್ಲಿನ ಕೊರೊನಾ ವಾರಿಯರ್ಸ್ ಮತ್ತು ಆರೋಗ್ಯ ಸಚಿವೆ ಕೆಕೆ ಶೈಲಜಾ ಅವರ ದಿಟ್ಟ ನಿರ್ಧಾರಗಳು. ಮೊದಲ ಕೊರೊನಾ ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತಿದ್ದ ಶೈಲಜಾ ಅವರು, ಮೂರು ಕಾರ್ಯಸೂಚಿಗಳನ್ನು ಜಾರಿಗೆ ತಂದಿದ್ದರು. ಸರ್ಕಾರಿ ಆಸ್ಪತ್ರೆಗಳು ರೋಗಿಗಳ ಸ್ನೇಹಿಯಾಗಿರಬೇಕು. ಹೈಟೆಕ್ ಆಗಿರಬೇಕು. ಹಣವಿಲ್ಲದ ಅಥವಾ ಕಡಿಮೆ ದುಡ್ಡಿಗೆ ಚಿಕಿತ್ಸೆ ನೀಡಬೇಕು ಎಂದು ಮೂರು ಕಾರ್ಯಸೂಚಿಗಳನ್ನು ಮಾಡಿಕೊಂಡಿದ್ದರು.

KK Shailaja 3

ಈ ವಿಚಾರದ ಬಗ್ಗೆ ಮಾತನಾಡಿರುವ ಶೈಲಜಾ ಅವರು, ಈ ಸಮಯದಲ್ಲಿ ಪ್ರಾಥಮಿಕ ಆರೋಗ್ಯ ಘಟಕಗಳು ಬಹಳ ಮುಖ್ಯ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ, ಈಗ ನಮ್ಮಲ್ಲಿ ಗ್ರಾಮೀಣ ಪ್ರದೇಶದಲ್ಲೂ ಪರೀಕ್ಷಾ ಪ್ರಯೋಗಾಲಯಗಳನ್ನು ಮಾಡಲಾಗಿದೆ. ಅವು ವಿವಿಧ ರೋಗಗಳನ್ನು ಆರಂಭಿಕವಾಗಿಯೇ ಕಂಡುಹಿಡಿಯಲು ಸಮರ್ಥವಾಗಿವೆ. ನಮ್ಮಲ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಹೊಸ ಉಪಕರಣಗಳನ್ನು ಹೊಂದಿವೆ ಮತ್ತು ಉತ್ತಮ ಮೂಲಸೌಕರ್ಯಗಳನ್ನು ಹೊಂದಿವೆ ಎಂದು ತಿಳಿಸಿದ್ದಾರೆ.

CORONA 11

2018ರಲ್ಲಿ ನಿಫಾ ವೈರಸ್ ಬಂದಾಗಿನಿಂದ ನಮ್ಮ ಸರ್ಕಾರ ವೈದ್ಯಕೀಯ ಸಿಬ್ಬಂದಿಗೆ ನಿಯಮಿತ ತರಬೇತಿಯನ್ನು ಜಾರಿಗೆ ತಂದಿತು. ಇದು ಈಗ ಕೊರೊನಾ ತಡೆಗಟ್ಟುವಲ್ಲಿ ನಮಗೆ ಸಹಾಯವಾಯಿತು. ನಮ್ಮ ವೈದ್ಯಕೀಯ ಸಿಬ್ಬಂದಿ ಸಾಂಕ್ರಾಮಿಕ ರೋಗದ ವಿರುದ್ಧ ಏಕಾಏಕಿ ತಯಾರಿಗಾಗಿ ಅಣಕು ಡ್ರಿಲ್‍ಗಳನ್ನು ಸಹ ಮಾಡಿದ್ದರು. ಅವರ ಕಾರ್ಯದಿಂದ ನಾವು ಇಂದು ಕೊರೊನಾ ವಿರುದ್ಧ ಪ್ರಬಲವಾಗಿ ಹೋರಾಡುತ್ತಿದ್ದೇವೆ. ನಮ್ಮ ಈ ಕೆಲಸ ಖಂಡಿತವಾಗಿಯೂ ವ್ಯವಸ್ಥೆಯನ್ನು ಬಲಪಡಿಸಿತು ಎಂದು ಹೇಳಿದ್ದಾರೆ.

CORONA 11

ನಾವು ಕೆಲಸ ಮಾಡುವಾಗ ನಾವೇಲ್ಲ ಒಂದೇ ಎಂಬ ಭಾವನೆಯನ್ನು ಮೂಡಿಸಿಕೊಂಡಿದ್ದೆವು. ದಿನ ಕೆಳಮಟ್ಟದ ಆರೋಗ್ಯ ಸಿಬ್ಬಂದಿಯಿಂದ ಹಿಡಿದು ಎಲ್ಲರ ಜೊತೆ ವಿಡಿಯೋ ಕಾನ್ಫೆರೆನ್ಸ್ ಮಾಡುತ್ತಿದ್ದೇವು. ಆಶಾ ಕಾರ್ಯಕರ್ತೆಯರು ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ದಿನಲೂ ನಾನು ಮಾತನಾಡುತ್ತಿದ್ದೆ. ಮಾಹಿತಿ ಪಡೆಯುತ್ತಿದ್ದೆ. ನಾವು ಹೀಗೆ ಕೆಳಹಂತದಿಂದ ಮಾಹಿತಿ ಪಡೆದುಕೊಂಡಿದ್ದು, ಕೆಲಸ ಮಾಡಲು ನಮಗೆ ಸಲಭವಾಗತ್ತದೆ ಎಂದು ಶೈಲಜಾ ಅವರು ಅಭಿಪ್ರಾಯ ಪಟ್ಟಿದ್ದಾರೆ.

kk shailaja759

63 ವರ್ಷದ ಕೆಕೆ ಶೈಲಜಾ ಅವರಿಗೆ ಗಂಡ ಮತ್ತು ಇಬ್ಬರು ಮಕ್ಕಳು ಇದ್ದಾರೆ. ಈ ವಯಸ್ಸಿನಲ್ಲೂ ಪ್ರತಿದಿನ 8 ರಿಂದ 9 ಗಂಟೆಗಳ ಕಾಲ ಸಭೆ ಮತ್ತು ವಿಡಿಯೋ ಕಾನ್ಫೆರೆನ್ಸ್ ನಿರತರಾಗಿರುತ್ತಾರೆ. ಇದರ ಜೊತೆಗೆ ಮನೆಯಲ್ಲಿ ಇದ್ದರೆ ರಾತ್ರಿಯ ವೇಳೆಯೂ ಕೂಡ ಯಾವುದೇ ಕರೆ ಬರಲಿ ಮಾತನಾಡುತ್ತಾರೆ ಎಂದು ಅವರ ಮನೆಯವರು ಹೇಳಿದ್ದಾರೆ. 63ನೇ ವಯಸ್ಸಿನಲ್ಲೂ ತನ್ನ ರಾಜ್ಯಕ್ಕಾಗಿ ದುಡಿಯುತ್ತಿರುವ ಶೈಲಜಾ ಅವರ ಕಾರ್ಯಕ್ಕೆ ಎಲ್ಲಡೆಯಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Corona Virus New

ಶೈಲಜಾ ಅವರ ಕಾರ್ಯಕ್ಷಮತೆಯಿಂದ ಇಂದು ಕೇರಳದ 8 ಜಿಲ್ಲೆಗಳು ಕೊರೊನಾ ಮುಕ್ತವಾಗಿವೆ. ಕೇರಳದಲ್ಲಿ ಕೊರೊನಾ ಹಾಟ್‍ಸ್ಟಾಟ್ ಆಗಿದ್ದ ಕಾಸರಗೋಡು, ಕೋಜಿಕೋಡ್, ಪಾಲಕ್ಕಾಡ್, ಅಲಾಪ್ಪುಜಾ, ಕೊಟ್ಟಾಯಂ, ಇಡುಕ್ಕಿ, ಪಥನಮತ್ತತ್ತ ಮತ್ತು ತಿರುವನಂತಪುರಂ ಜಿಲ್ಲೆಗಳು ಕೊರೊನಾ ರಹಿತ ಜಿಲ್ಲೆಗಳಾಗಿವೆ. ಜೊತೆಗೆ ಕೇರಳದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಕಮ್ಮಿ ಆಗುತ್ತಿದ್ದು, ಸೋಂಕಿನಿಂದ ಗಣಮುಖರಾಗುತ್ತಿರುವವರ ಸಂಖ್ಯೆ ಜಾಸ್ತಿಯಾಗಿದೆ.

ಕೇರಳದಲ್ಲಿ ಕೊರೊನಾ ಕಾಣಿಸಿಕೊಂಡದಿಂದ ಇಲ್ಲಿಯವರೆಗೆ ಸುಮಾರು 512 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕೇವಲ ಮೂರು ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಈಗ ಕೇವಲ 20 ಜನರು ಕೊರೊನಾ ಚಿಕತ್ಸೆ ಪಡೆಯುತ್ತಿದ್ದು, ಇನ್ನುಳಿದ 488 ಜನರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಚ್ ಆಗಿದ್ದಾರೆ. ಇಲ್ಲಿಯವರೆಗೂ ಸುಮಾರು 37,464 ಸ್ಯಾಂಪಲ್‍ಗಳನ್ನು ಪರೀಕ್ಷೆ ಮಾಡಿದ್ದು, ಅದರಲ್ಲಿ 36,630 ಸ್ಯಾಂಪಲ್ಸ್ ಗಳು ನೆಗೆಟಿವ್ ಬಂದಿವೆ.

Corona A 2

ಇದರ ಜೊತೆಗೆ ಕೆಕೆ ಶೈಲಜಾ ಅವರು, ಬೇರೆ ಪ್ರದೇಶದಿಂದ ಕೇರಳಕ್ಕೆ ಬಂದವರು ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಬೇಕು. ಪರೀಕ್ಷೆಯಲ್ಲಿ ಕೊರೊನಾದ ಒಂದು ಲಕ್ಷಣ ಕಂಡುಬಂದರೂ ಅವರು ಕೋವಿಡ್ ಆಸ್ಪತ್ರೆಗೆ ದಾಖಲಾಗಬೇಕು. ಒಂದು ವೇಳೆ ಪರೀಕ್ಷೆಯಲ್ಲಿ ಲಕ್ಷಣ ಕಂಡುಬಾರದೆ ಇದ್ದರೇ ಅವರು 14 ದಿನಗಳ ಕಾಲ ಹೋಂ ಕ್ವಾರಂಟೈನ್‍ನಲ್ಲಿ ಇರಬೇಕು ಎಂದು ನಿಯಮ ಮಾಡಿದ್ದಾರೆ.

TAGGED:Coronahealth ministerkeralaKK ShailajaPublic TVRulesಆರೋಗ್ಯ ಸಚಿವೆಕೆಕೆ ಶೈಲಾಜಕೇರಳಕೊರೊನಾನಿಯಮಗಳುಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
8 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
10 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
10 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
12 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
5 hours ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
5 hours ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
5 hours ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
6 hours ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
6 hours ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?