ಚಿನ್ನ ಕಳ್ಳಸಾಗಣೆ ಪ್ರಕರಣ- 15 ತಿಂಗಳ ಬಳಿಕ ಸ್ವಪ್ನಾ ಸುರೇಶ್‌ಗೆ ಜಾಮೀನು, ಜೈಲಿನಿಂದ ರಿಲೀಸ್‌

Public TV
1 Min Read
Kerala gold Swapna Suresh 7

ತಿರುವನಂತಪುರ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸ್ವಪ್ನಾ ಸುರೇಶ್‌ ಅವರಿಗೆ 15 ತಿಂಗಳ ಬಳಿಕ ಜಾಮೀನು ಮಂಜೂರಾಗಿದ್ದು, ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

Kerala gold Swapna Suresh 5

ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ದಾಖಲಿಸಿದ್ದ ಯುಎಪಿಎ (ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ) ಪ್ರಕರಣದಲ್ಲಿ ಆರೋಪಿ ಸ್ವಪ್ನಾ ಅವರಿಗೆ ನವೆಂಬರ್‌ 2 ರಂದು ಕೇರಳ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. 25 ಲಕ್ಷ ರೂ. ಬಾಂಡ್‌ ಹಾಗೂ ಶೂರಿಟಿಯೊಂದಿಗೆ ಜಾಮೀನು ನೀಡಿತ್ತು. ಇದನ್ನೂ ಓದಿ: ಒಬ್ಬ ಡ್ಯಾನ್ಸರ್ ಬರಬಹುದು, ಫೈಟರ್ ಬರಬಹುದು, ಆದ್ರೆ ಅಪ್ಪು ಬರಲ್ಲ: ರಮೇಶ್ ಅರವಿಂದ್

Kerala gold Swapna Suresh 1

ಸ್ವಪ್ನಾ ಅವರೊಂದಿಗೆ ಇತರೆ 7 ಆರೋಪಿಗಳಾದ ಮೊಹಮ್ಮದ್ ಶಫಿ ಪಿ, ಜಲಾಲ್ ಎ.ಎಂ., ರಾಬಿನ್ಸ್ ಹಮೀದ್, ರಮೀಸ್ ಕೆ.ಟಿ., ಶರಫುದ್ದೀನ್ ಕೆ.ಟಿ., ಸರಿತಾ ಪಿ.ಎಸ್ ಮತ್ತು ಮೊಹಮ್ಮದ್ ಅಲಿ ಅವರಿಗೂ ನ.2ರಂದು ಕೋರ್ಟ್‌ ಜಾಮೀನು ನೀಡಿತ್ತು. ಇದನ್ನೂ ಓದಿ: ಸಾರ್ವಜನಿಕರ ಆಸ್ತಿಗೆ ಹಾನಿಗೊಳಿಸಿದ್ರೆ ಪ್ರತಿಭಟನಾಕಾರರಿಂದಲೇ ವಸೂಲಿ- ಮಸೂದೆ ಜಾರಿಗೆ ಮಧ್ಯಪ್ರದೇಶ ಚಿಂತನೆ

Kerala gold Swapna Suresh 8

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ.ವಿನೋದ್‌ ಚಂದ್ರನ್‌ ಮತ್ತು ಜಯಚಂದ್ರನ್‌ ಅವರಿದ್ದ ಪೀಠವು, ಆರೋಪಿಗಳು ಭಯೋತ್ಪಾದನೆ ಕೃತ್ಯಗಳಲ್ಲಿ ತೊಡಗಿದ್ದರು ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರ ಲಭ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿತ್ತು.

Share This Article
Leave a Comment

Leave a Reply

Your email address will not be published. Required fields are marked *