ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

Public TV
1 Min Read
Arif Mohammed Khan Udupi

ಉಡುಪಿ: ಇಲ್ಲಿನ ಶ್ರೀ ಕೃಷ್ಣ ಮಠದಲ್ಲಿ (Krishna Matha) ಒಂದು ತಿಂಗಳ ಕಾಲ ನಡೆದ ಶ್ರೀ ಕೃಷ್ಣ ಮಾಸೋತ್ಸವ ಸಮಾರೋಪ ಸಮಾರಂಭದಲ್ಲಿ ಕೇರಳ (Kerala) ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammed Khan) ಭಾಗವಹಿಸಿದರು. ಎರಡು ದಿನದ ಉಡುಪಿ (Udupi) ಪ್ರವಾಸ ಮಾಡಿದ ಆರಿಫ್ ಮೊಹಮ್ಮದ್ ಖಾನ್ ಕೊಲ್ಲೂರು ಮೂಕಾಂಬಿಕೆ ಹಾಗೂ ಉಡುಪಿಯ ಶ್ರೀ ಕೃಷ್ಣದೇವರ ದರ್ಶನ ಪಡೆದರು.

Arif Mohammed Khan Udupi 1

ಪರ್ಯಾಯ ಶ್ರೀ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಆರಿಫ್ ಮೊಹಮ್ಮದ್ ಖಾನ್ ಅವರನ್ನು ಸನ್ಮಾನಿಸಿದರು. ಈ ವೇಳೆ ಶ್ರೀ ಕೃಷ್ಣ ಮಠದ ಇತಿಹಾಸ ಪುರಾಣಗಳ ಬಗ್ಗೆ ಆರಿಫ್ ಮೊಹಮ್ಮದ್ ಖಾನ್ ಸ್ವಾಮೀಜಿಯವರಿಂದ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಅಂಡರ್ 19 ಕ್ರಿಕೆಟ್ ತಂಡಕ್ಕೆ ಆಯ್ಕೆ| ಎಲ್ಲಾ ಕನ್ನಡಿಗರಿಗೆ ನಮಸ್ಕಾರ : ಸಮಿತ್ ದ್ರಾವಿಡ್ ಮೊದಲ ಪ್ರತಿಕ್ರಿಯೆ

Arif Mohammed Khan Udupi 2

ಬಳಿಕ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಧರ್ಮಗಳು ಬೇರೆ ಆಗಿರಬಹುದು. ಆದರೆ ನಾವೆಲ್ಲರೂ ಭಾರತೀಯರು ಮತ್ತು ಒಂದೇ ಸಂಸ್ಕೃತಿಯವರು. ಭಿನ್ನ-ಭಿನ್ನ ಹೆಸರಿನಲ್ಲಿ ದೇವರನ್ನು ಪೂಜಿಸಿದರೂ ಕೊನೆಗೆ ನಮ್ಮೆಲ್ಲರ ಪ್ರಾರ್ಥನೆ ಕೇಶವನಿಗೆ ಸಲ್ಲುವುದು. ವಿವಿಧತೆಯಲ್ಲಿ ಏಕತೆ ನಮ್ಮ ಸಂಸ್ಕೃತಿಯ ಆತ್ಮ ಎಂದು ಬಣ್ಣಿಸಿದರು. ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ – ಹಾರಂಗಿ ಜಲಾಶಯದಿಂದ 11,800 ಕ್ಯುಸೆಕ್ ನೀರು ಹೊರಕ್ಕೆ

Share This Article