Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತ ಸಾಗರ – ಡೆಡ್ಲಿ ಅಮೀಬಾ ಸೋಂಕಿನ ಆತಂಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತ ಸಾಗರ – ಡೆಡ್ಲಿ ಅಮೀಬಾ ಸೋಂಕಿನ ಆತಂಕ

Latest

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತ ಸಾಗರ – ಡೆಡ್ಲಿ ಅಮೀಬಾ ಸೋಂಕಿನ ಆತಂಕ

Public TV
Last updated: November 19, 2025 8:27 am
Public TV
Share
3 Min Read
Sabarimala Ayyappa Temple Rush
SHARE

– ಲಕ್ಷಾಂತರ ಭಕ್ತರ ನಿಯಂತ್ರಣಕ್ಕೆ ಹರಸಾಹಸ

ತಿರುವನಂತಪುರಂ: ಕಳೆದ ಭಾನುವಾರದಿಂದ ಅಯ್ಯಪ್ಪ ಸ್ವಾಮಿ ದೇವಸ್ಥಾನ ತೆರೆಯಲಾಗಿದ್ದು, ಮುಂದಿನ 2 ತಿಂಗಳು ಭಕ್ತರಿಗೆ ದರ್ಶನ ಲಭ್ಯವಾಗಲಿದೆ. ಈ ಬೆನ್ನಲ್ಲೇ ಸ್ವಾಮಿಯ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಇದೇ ಸಂದರ್ಭದಲ್ಲಿ ಕೇರಳದಲ್ಲಿ (Kerala) ಮೆದುಳು ತಿನ್ನುವ ಅಮೀಬಾ (Brain Eating Amoeba) ರೋಗದ ಹಾವಳಿ ಜೋರಾಗಿದೆ.

ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ (Sabarimala Ayyappa Temple) ಮಂಡಲ ಪೂಜೆ ಆರಂಭವಾಗಿದೆ. ಕಳೆದ ಭಾನುವಾರದಿಂದ ಅಯ್ಯಪ್ಪ ಸ್ವಾಮಿ ದೇವಸ್ಥಾನ ತೆರೆಯಲಾಗಿದ್ದು, ಮುಂದಿನ 2 ತಿಂಗಳು ಭಕ್ತರಿಗೆ ದರ್ಶನ ಲಭ್ಯವಾಗಲಿದೆ. ಈ ಬೆನ್ನಲ್ಲೇ ಸ್ವಾಮಿಯ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಒಂದೂವರೆ ದಿನದಲ್ಲಿ ಒಂದೂವರೆ ಲಕ್ಷ ಭಕ್ತರು ದರ್ಶನ ಪಡೆದುಕೊಂಡಿದ್ದಾರೆ. ಭಾರೀ ಭಕ್ತಸಾಗರದಿಂದಾಗಿ ಪಂಪಾ ನದಿಯಿಂದ ದೇಗುಲ ತಲುಪಲು 7 ಗಂಟೆಗಳೇ ಬೇಕಾಗಿದೆ. ಕಣ್ಣು ಹಾಯಿಸಿದ ದೂರವೂ ಸ್ವಾಮಿ ಭಕ್ತರೇ ಇದ್ದಾರೆ. ಭಕ್ತರ ನಿಯಂತ್ರಣಕ್ಕೆ ಕೇಂದ್ರಕ್ಕೆ ಕೇರಳ ಸರ್ಕಾರ ಮನವಿ ಮಾಡಿದೆ. ಕೇಂದ್ರ ತಂಡ ಆಗಮಿಸಲು ಇನ್ನೆರಡು ದಿನ ಬೇಕಾಗಿದ್ದು, ಭಕ್ತರನ್ನು ನಿಯಂತ್ರಿಸುವುದೇ ಹರಸಾಹಸವಾಗಿದೆ. ಇದನ್ನೂ ಓದಿ: ಬೆಳಗಾವಿ | ಚಳಿಗೆ ಇದ್ದಿಲಿನಿಂದ ಬೆಂಕಿ ಹಾಕಿ ನಿದ್ರೆ; ಉಸಿರುಗಟ್ಟಿ ಚಿರನಿದ್ರೆಗೆ ಜಾರಿದ ಮೂವರು ಯುವಕರು

Sabarimala Pilgrimage 2

ಪಾರ್ಕಿಂಗ್‌ನಲ್ಲೇ ಸಿಲುಕಿರುವ ಮಾಲಾಧಾರಿಗಳು:
ಕೇರಳದ ಪತ್ತಂತಿಟ್ಟ ಜಿಲ್ಲೆಯ ಬೆಟ್ಟದ ಮೇಲಿರುವ ಸ್ವಾಮಿ ಅಯ್ಯಪ್ಪನನ್ನು ನೋಡಲು ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದಿಂದ ಅತಿ ಹೆಚ್ಚು ಸಂಖ್ಯೆಯ ಭಕ್ತರು ಪ್ರತಿವರ್ಷ ಆಗಮಿಸುತ್ತಾರೆ. ಕರ್ನಾಟಕದಿಂದ ಸಾವಿರಾರು ಭಕ್ತರು ದರ್ಶನಕ್ಕೆ ತೆರಳುತ್ತಾರೆ. ಈಗಾಗಲೇ ಅಯ್ಯಪ್ಪ ದರ್ಶನಕ್ಕೆ ಕರ್ನಾಟಕದಿಂದ ತೆರಳಿರುವ ಅಯ್ಯಪ್ಪ ಭಕ್ತರು ರಾಜ್ಯದಿಂದ ಬರುವ ಭಕ್ತರಿಗೆ ಮನವಿ ಮಾಡಿದ್ದಾರೆ. ಅಲ್ಲಿನ ಪರಿಸ್ಥಿತಿ ಬಗ್ಗೆ ವಿವರಿಸಿದ್ದಾರೆ. ನೀಲ್‌ಕಲ್‌ನಲ್ಲಿ ಭಕ್ತರ ವಾಹನಗಳು ಪಾರ್ಕಿಂಗ್‌ನಲ್ಲೇ ಜಾಮ್ ಆಗಿವೆ. ವಾಹನಗಳಲ್ಲಿ ತೆರಳಿರುವ ಭಕ್ತರು ಪಾರ್ಕಿಂಗ್‌ಗಾಗಿಯೇ ಒಂದೆರಡು ತಾಸು ಹುಡುಕುವ ಪರಿಸ್ಥಿತಿ ಇದೆ. ಹೀಗಾಗಿ ಸ್ವಲ್ಪ ದಿನ ತಡವಾಗಿ ದರ್ಶನಕ್ಕೆ ಬನ್ನಿ ಅಂತ ಈಗಾಗಲೇ ತೆರಳಿರುವ ಕರ್ನಾಟಕ ಅಯ್ಯಪ್ಪ ಭಕ್ತರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಅಡುಗೆ ಮಾಡುವಾಗ ಸಿಲಿಂಡರ್ ಸ್ಫೋಟ – ಮನೆಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ

ಶಬರಿಮಲೆಯಲ್ಲಿ ಹೊಸ ವೈರಸ್ ಭೀತಿ:
ಇದೇ ಸಂದರ್ಭದಲ್ಲಿ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ರೋಗದ ಹಾವಳಿ ಜೋರಾಗಿದೆ. ಮೆದುಳು ತಿನ್ನುವ ನೇಗ್ಲೇರಿಯಾ ಪೌಲೇರಿ ಎಂಬ ಅಮಿಬಾ ವೈರಸ್ ಆತಂಕ ಹೆಚ್ಚಿಸಿದೆ. ಪಂಪಾನದಿಯಲ್ಲಿ ಸ್ನಾನ ಮಾಡುವಾಗ ಮೂಗು, ಬಾಯಿಗೆ ನೀರು ಹೋಗದಂತೆ ಎಚ್ಚರ ವಹಿಸಿ, ಬಿಸಿನೀರನ್ನೇ ಸೇವಿಸಲು ಕೇರಳ ಸರ್ಕಾರ ಸಲಹೆ ನೀಡಿದೆ. ಪಂದಳಂ, ಅಡೂರ್, ಪತ್ತನಂತಿಟ್ಟ ಮತ್ತು ವಡಸೇರಿಕ್ಕರದಲ್ಲಿ ವಿಶೇಷ ಔಷಧಾಲಯಗಳ ಸ್ಥಾಪನೆ ಮಾಡಲಾಗಿದೆ. ಸುರಕ್ಷಿತ ನೀರಿನ ಪದ್ಧತಿಗಳನ್ನು ಅನುಸರಿಸಲು ಭಕ್ತರಿಗೆ ಸೂಚನೆ ನೀಡಲಾಗಿದೆ. ಪಂಪಾದಿಂದ ಶಬರಿಮಲೆಗೆ ತೆರಳುವವರು ಉಸಿರಾಟ, ಹೃದಯ ಸಂಬಂಧಿ ಸಮಸ್ಯೆ ಇದ್ದರೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಲಹೆ ನೀಡಲಾಗಿದೆ. ಇದನ್ನೂ ಓದಿ: ಅಮಿತ್ ಶಾ ನೀಡಿದ್ದ ಡೆಡ್ ಲೈನ್‌ಗೆ 12 ದಿನ ಮೊದಲೇ ಟಾರ್ಗೆಟ್ ಮಾದ್ವಿ ಹಿಡ್ಮಾ ಹಿಟ್.!

ಕರ್ನಾಟಕಕ್ಕೂ ವೈರಸ್ ಟೆನ್ಷನ್:
ಕೇರಳದಲ್ಲಿ ನೂರಾರು ಜನರಿಗೆ ಬಾಧಿಸುತ್ತಿರುವ ವೈರಸ್, ರಾಜ್ಯದಿಂದ ಶಬರಿ ಮಲೆಗೆ ಹೋಗುವ ಭಕ್ತರ ಟೆನ್ಷನ್‌ಗೆ ಕಾರಣವಾಗಿದೆ. ಹೀಗಾಗಿ ಭಕ್ತರ ಆರೋಗ್ಯ ರಕ್ಷಣೆಗೆ ಮುಂದಾಗಿರುವ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆಗೆ ಮಾಡಿದೆ. ಇದು ಅತ್ಯಂತ ವಿಷಕಾರಿ ವೈರಸ್ ಆಗಿದ್ದು, ಬೇಗ ಹರಡುತ್ತೆ. ಯಾತ್ರೆಯ ಸಂದರ್ಭ ನಿಂತ ನೀರಿನಲ್ಲಿ ಸ್ನಾನ ಮಾಡಬೇಡಿ. ಮೂಗಿಗೆ ನೀರು ಹೋಗದಂತೆ ಕ್ಲಿಪ್ ಬಳಸಿ ಅಂತ ಎಚ್ಚರಿಸಿದೆ. ವೈರಸ್ ಸಂಪರ್ಕದ 7 ದಿನಗಳ ಒಳಗೆ ರೋಗ ಲಕ್ಷಣ ಕಾಣಿಸಿಕೊಳ್ಳಲಿದೆ. ಜ್ವರ, ತಲೆನೋವು, ವಾಕರಿಕೆ, ವಾಂತಿ, ಕುತ್ತಿಗೆ ಬಿಗಿತ, ಗೊಂದಲ, ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆ, ಅಸ್ವಸ್ಥತೆ ರೋಗ ಲಕ್ಷಣವಾಗಿದೆ. ಇದನ್ನೂ ಓದಿ: ಶಬರಿಮಲೆಯಲ್ಲಿ ಭಾರೀ ಜನಸ್ತೋಮ – ಅಯ್ಯಪ್ಪನ ದರ್ಶನಕ್ಕೆ ಬರುತ್ತಿದ್ದ ವೃದ್ಧೆ ಸಾವು!

ಒಟ್ಟಿನಲ್ಲಿ ಶಬರಿಮಲೆ ಮಾಲಾಧಾರಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮಾಲಾಧಾರಿಗಳ ನಿಯಂತ್ರಣಕ್ಕೆ ಕೇರಳ ಸರ್ಕಾರ ಇನ್ನಿಲ್ಲದ ಹರಸಾಹಸ ಪಡುತ್ತಿದೆ. ಇದನ್ನೂ ಓದಿ: ದೆಹಲಿ ಕಾರು ಸ್ಫೋಟ ಸ್ಥಳದಲ್ಲಿ 68 ಅನುಮಾನಾಸ್ಪದ ಮೊಬೈಲ್ ಫೋನ್ ಸಕ್ರಿಯ – ಪಾಕ್‌, ಟರ್ಕಿಯಿಂದ ಕರೆ

TAGGED:Amoeba VirusAyyappa devoteesAyyappa templeBrain eating amoebakeralaSabarimalaಅಮೀಬಾ ವೈರಸ್‌ಅಯ್ಯಪ್ಪ ಭಕ್ತರುಕೇರಳಶಬರಿಮಲೆ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
6 hours ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
6 hours ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
7 hours ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
7 hours ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
8 hours ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?