ಶಬರಿಮಲೆಯಲ್ಲಿ ನಟ ದಿಲೀಪ್‌ಗೆ VIP ದರ್ಶನ – ಪೊಲೀಸ್, TDB ನಡೆಗೆ ಹೈಕೋರ್ಟ್ ಕ್ಲಾಸ್

Public TV
1 Min Read
DILEEP

ಕೊಚ್ಚಿ: ಶಬರಿಮಲೆಯ (Sabarimala) ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ಸಾಲಿನಲ್ಲಿ ನಿಂತ ಭಕ್ತರನ್ನು ಕಡೆಗಣಿಸಿ ಮಾಲಿವುಡ್ ನಟ ದಿಲೀಪ್‌ಗೆ (Dileep) ದರ್ಶನ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕೇರಳದ ಹೈಕೋರ್ಟ್ ಪೊಲೀಸ್ ಇಲಾಖೆ ಮತ್ತು ಟ್ರಾವಂಕೂರ್ ದೇವಸ್ವಂ ಬೋರ್ಡ್ (TDB) ಅನ್ನು ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ:ಹಸೆಮಣೆ ಏರಿದ ‘ಸಿಂಗಾರ ಸಿರಿಯೇ’ ಖ್ಯಾತಿಯ ಪ್ರಮೋದ್ ಮರವಂತೆ

dileep

ನ್ಯಾ. ಅನಿಲ್ ಕೆ. ನರೇಂದ್ರನ್ ಮತ್ತು ನ್ಯಾ. ಮುರಳಿ ಕೃಷ್ಣ ಎಸ್ ಅವರಿಂದ ದ್ವಿಸದಸ್ಯ ಪೀಠ, ನಟನಿಗೆ ಯಾವ ಆಧಾರದ ಮೇಲೆ ವಿಶೇಷ ದರ್ಶನ ಅವಕಾಶ ನೀಡಲಾಯಿತು ಎಂದು ಪ್ರಶ್ನಿಸಿದೆ. ದಿಲೀಪ್ (Dileep) ದರ್ಶನ ಪಡೆದ ದಿನದ ಸಿಸಿಟಿವಿ ದೃಶ್ಯಾವಳಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು ಎಂದು ಪೊಲೀಸರಿಗೆ ಆದೇಶಿಸಿದೆ.

malayalam actor dileep 3

ನಟನಿಗೆ ವಿಶೇಷ ಸೌಲಭ್ಯ ನೀಡಿರುವುದರಿಂದ ಬೇರೇ ಭಕ್ತರಿಗೆ ದರ್ಶನಕ್ಕೆ ಅಡ್ಡಿಯಾಗುವುದಿಲ್ಲವೇ? ಭಕ್ತರ ಸಾಲಿನಲ್ಲಿ ಮಕ್ಕಳು ಮತ್ತು ವೃದ್ಧರು ಇರುತ್ತಾರೆ. ಅವರು ಗಂಟೆಗಟ್ಟಲೇ ಸರದಿ ಸಾಲಿನಲ್ಲಿ ನಿಲ್ಲಲ್ಲು ಸಾಧ್ಯವೇ? ಅನೇಕರು ದರ್ಶನ ಪಡೆಯದೇ ಹಾಗೆಯೇ ತೆರಳಿದ್ದಾರೆ. ಅವರೆಲ್ಲಾ ಯಾರ ಬಳಿ ದೂರು ಸಲ್ಲಿಸಬೇಕು ಎಂದು ಪ್ರಶ್ನಿಸಿ ಕೇರಳ ಹೈಕೋರ್ಟ್ ಚಾಟಿ ಬೀಸಿದೆ.

Dileep

ನ್ಯಾಯಾಲಯದ ಆದೇಶದಂತೆ ಸಾಂವಿಧಾನಿಕ ಅಧಿಕಾರ ಹೊಂದಿರುವವರು ಮಾತ್ರ ಈ ರೀತಿಯ ವಿಶೇಷ ಸವಲತ್ತುಗಳನ್ನು ಶಬರಿಮಲೆಯಲ್ಲಿ ಪಡೆಯಬಹುದು. ಡಿ.5ರಂದು ನಟ ದಿಲೀಪ್‌ಗೆ ನೀಡಿದ ವಿಶೇಷ ದರ್ಶನದಿಂದ ಕಾನೂನು ಉಲ್ಲಂಘನೆ ಆಗಿದೆ ಎಂದು ಅಭಿಪ್ರಾಯಪಟ್ಟಿದೆ.

malayalam actor dileep 1

ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ದೇವರ ದರ್ಶನಕ್ಕಾಗಿ ಡಿ.5ರಂದು ಹಲವು ಗಂಟೆಗಳ ಕಾಲ ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ಕಾಯುತ್ತಿದ್ದರು. ಈ ವೇಳೆ ಸೇರಿದ್ದ ಭಕ್ತರನ್ನು ತಡೆದು ದಿಲೀಪ್‌ಗೆ ವಿಶೇಷ ಪೂಜೆ ಸಲ್ಲಿಸಲು ದೇವಸ್ಥಾನದ ಆಡಳಿತ ಮಂಡಳಿ ಅವಕಾಶ ನೀಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಸುದ್ದಿಯೊಂದನ್ನು ಆಧರಿಸಿ ಹೈಕೋರ್ಟ್, ಸ್ವಯಂ ಪ್ರೇರಿತವಾಗಿ ಈ ಪ್ರಕರಣವನ್ನು ಕೈಗೆತ್ತಿಕೊಂಡು ಸರ್ಕಾರಕ್ಕೆ ಚಾಟಿ ಬೀಸಿದೆ.

Share This Article