ಕೇರಳ, ಕೊಡಗು ಭಾಗದಲ್ಲಿ ಮಳೆ- ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ಜೀವಕಳೆ

Public TV
1 Min Read
mkd rain

ಕೊಡಗು/ಬೆಂಗಳೂರು: ಕೇರಳ, ಕೊಡಗಿನ ಭಾಗದಲ್ಲಿ ಭಾರೀ ಮಳೆಯಾಗ್ತಿರೋ ಕಾರಣ ಕಾವೇರಿ ಕೊಳ್ಳದ ಡ್ಯಾಮ್‍ಗಳಲ್ಲಿ ಜೀವಕಳೆ ತುಂಬಿದ್ದು, ಪಾತಾಳ ಸೇರಿದ್ದ ನೀರಿನ ಮಟ್ಟ ನಿಧಾನವಾಗಿ ಮೇಲೇರುತ್ತಿದೆ.

ಕೆಆರ್‍ಎಸ್‍ನಲ್ಲಿ ನೀರಿನ ಮಟ್ಟ 90 ಅಡಿ ದಾಟಿದ್ದು, ಈ ಹಿನ್ನೆಲೆಯಲ್ಲಿ, ತಮಿಳುನಾಡಿಗೆ ನೀರು ಹರಿಸಲಾಗಿದೆ. ಅಣೆಕಟ್ಟೆಯಿಂದ 7 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದ್ದು, 5 ಸಾವಿರ ಕ್ಯೂಸೆಕ್ ಮೆಟ್ಟೂರು ಡ್ಯಾಮ್‍ಗೂ, 2 ಸಾವಿರ ಕ್ಯೂಸೆಕ್ ನೀರು ರೈತರ ನಾಲೆಗಳಿಗೂ ಹರಿಸಲಾಗುತ್ತಿದೆ.

vlcsnap 2019 07 20 20h15m22s156

ಒಂದೆಡೆ ಹರಿವು ಹೆಚ್ಚಾಗಿದೆ ಎಂದು ರೈತರು ಸಂತಸ ಪಡುತ್ತಿದ್ದರೆ, ಕಾವೇರಿ ನೀರು ನಿರ್ವಹಣಾ ಮಂಡಳಿ ಸೂಚನೆಯಂತೆ ತಮಿಳುನಾಡಿಗೆ ನೀರು ಬಿಡಲಾಗಿದೆ. ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಇಂಡುವಾಳು ಗ್ರಾಮಸ್ಥರು ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ರೆಸಾರ್ಟ್‍ನಲ್ಲಿರುವ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.

vlcsnap 2019 07 20 20h04m52s223

ಕಾವೇರಿ ನೀರಿನಲ್ಲಿ ವ್ಯತ್ಯಯ:
ಕಾವೇರಿಕೊಳ್ಳಕ್ಕೆ ಹೆಚ್ಚು ನೀರು ಹರಿಯುತ್ತಿದ್ದರೂ ಸಹ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ 2 ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *