– FIRನಲ್ಲಿರೋ 74 ಆರೋಪಿಗಳ ಪೈಕಿ ಇಬ್ಬರು ಕೇರಳದವರು!
ಮಂಡ್ಯ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟದಿಂದ (Nagamangala Violence) ನಿಗಿನಿಗಿ ಕೆಂಡವಾಗಿದ್ದ ನಾಗಮಂಗಲ ಈಗ ಸಹಜ ಸ್ಥಿತಿಗೆ ಮರಳಿದೆ. ಸಚಿವ ಚಲುವನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆದ ಶಾಂತಿಸಭೆ ಯಶಸ್ವಿಯಾಗಿದೆ. ಅಲ್ಲದೇ ಭಾನುವಾರ (ಇಂದು) ನಿಷೇಧಾಜ್ಞೆ ತೆರವಾಗಿದೆ. ಈ ನಡುವೆ ಕೋಮು ಗಲಭೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬೆಳಿಗೆ ಬಂದಿದೆ.
ನಾಗಮಂಗಲದ ಕೋಮು ಗಲಭೆಗೆ ಕೇರಳ ಲಿಂಕ್ (Kerala Link) ಇರೋದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೇ ನಿಷೇಧಿತ ಪಿಎಫ್ಐ (PFI) ಸಂಘಟನೆ ಸದಸ್ಯರೂ ಈ ಗಲಭೆ ಹಿಂದಿದ್ದಾರೆ, ಕೃತ್ಯಕ್ಕೆ ಮೊದಲೇ ಪ್ಲ್ಯಾನ್ ಮಾಡಿದ್ದರು ಎಂಬ ಶಂಕೆಯೂ ವ್ಯಕ್ತವಾಗಿದೆ. ಇದನ್ನೂ ಓದಿ: ಭಾನುವಾರದ ಬಾಡೂಟ; ಆಂಧ್ರ ಶೈಲಿಯ ತಲೆಮಾಂಸದ ಸಾಂಬಾರ್ ಮಾಡೋದು ಹೇಗೆ?
- Advertisement
ಈ ಅನುಮಾನಕ್ಕೆ ಎಫ್ಐಆರ್ನಲ್ಲಿ ಉಲ್ಲೇಖವಾಗಿರುವ ಆ ಎರಡು ಹೆಸರುಗಳು ಕಾರಣವಾಗಿದೆ. ಹೌದು. ಎಫ್ಐಆರ್ನಲ್ಲಿರುವ 74 ಆರೋಪಿಗಳ ಪೈಕಿ ಇಬ್ಬರು ಕೇರಳದವರಾಗಿದ್ದಾರೆ. ಪ್ರಕರಣದ 44ನೇ ಆರೋಪಿ ಯೂಸೂಫ್, 61ನೇ ಆರೋಪಿ ನಾಸೀರ್ ಇಬ್ಬರೂ ಕೇರಳ ರಾಜ್ಯದ ಮಲ್ಲಪುರಂ ನಿವಾಸಿಗಳು ಎಂದು ತಿಳಿದುಬಂದಿದೆ. ಇದನ್ನೂ ಓದಿ: Kolkata Horror | ಸಾಕ್ಷಿ ನಾಶ, FIR ದಾಖಲಿಸಲು ವಿಳಂಬ; ಸಂದೀಪ್ ಘೋಷ್ ಸೇರಿ ಸಿಬಿಐನಿಂದ ಇಬ್ಬರ ಬಂಧನ
- Advertisement
ಈ ನಡುವೆ ಆರೋಪಿಗಳಿಬ್ಬರೂ ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯರು ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ. ಗಲಭೆ ನಡೆಸಲು ಪೂರ್ವ ತಯಾರಿ ನಡೆದಿದೆ. ಗಲಾಟೆ ನಡೆದ ದಿನ ಮೆಡಿಕಲ್ನಲ್ಲಿ 200 ಮಾಸ್ಕ್ ಖರೀದಿ ಮಾಡಲಾಗಿದೆ. ಪೆಟ್ರೋಲ್ ಬಾಂಬ್ ಬಳಕೆಯಲ್ಲೂ ಕೇರಳ ಮುಸ್ಲಿಮರ ಕೈವಾಡದ ಇದೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನ ಎನ್ಐಎ ನಡೆಸಬೇಕು ಎಂದು ವಿಹೆಚ್ಪಿ ಆಗ್ರಹಿಸಿದೆ. ಇದನ್ನೂ ಓದಿ: ಪ್ರಧಾನಿ ಹುದ್ದೆಗೆ ಬೆಂಬಲಿಸುವ ಆಫರ್ ಬಂದಿತ್ತು, ನಾನೇ ತಿರಸ್ಕರಿಸಿದೆ: ನಿತಿನ್ ಗಡ್ಕರಿ