ತಿರುವನಂತಪುರಂ: ಮೌಲ್ವಿಯೊಬ್ಬ 19 ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಕೊಟ್ಟ ಅಮಾನವೀಯ ಘಟನೆ ಕೇರಳದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಲುವಾ ಜಿಲ್ಲೆಯ ಯುಸುಫ್ (63) ಬಂಧಿತ ಮೌಲ್ವಿ. ಯುಸುಫ್ ಕೊಟ್ಟಾಯಂ ಜಿಲ್ಲೆಯ ಮಸೀದಿಯೊಂದರಲ್ಲಿ ಶಿಕ್ಷಕನಾಗಿದ್ದ. ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಲೇ ಬಂದಿದ್ದ.
Kerala: Police has arrested a 63-year-old Madrassa teacher from Kottayam after he was charged for sexually abusing several children for years. pic.twitter.com/2pPH5mjRyT
— ANI (@ANI) June 2, 2019
ಇಂತಹ ಪ್ರಕರಣಗಳಲ್ಲಿ ಆರೋಪಿಯನ್ನು ಸಾರ್ವಜನಿಕವಾಗಿ ಗಲ್ಲಿಗೆ ಏರಿಸಬೇಕು ಎಂದು ಇಸ್ಲಾಮಿಕ್ ನಿಯಮ ತಿಳಿಸುತ್ತದೆ. ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕನೆ ಇಂತಹ ಹೀನ ಕೃತ್ಯ ಎಸಗಿದ್ದು ಅಮಾನವೀಯ. ಆರೋಪಿಕ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅನಿಲ ಭಾರತ ಮುಸ್ಲಿಂ ಮಹಿಳೆಯರ ವೈಯಕ್ತಿಕ ಕಾನೂನು ಮಂಡಳಿ ಅಧ್ಯಕ್ಷೆ ಶೈಸ್ತಾ ಅಂಬರ್ ಹೇಳಿದ್ದಾರೆ.
ಯುಸುಫ್ ನಿರಂತರ ಪ್ರಾರ್ಥನೆ ಹಾಗೂ ಭಾಷಣದ ಮೂಲಕ ಸ್ಥಳೀಯ ಜನತೆಯ ವಿಶ್ವಾಸ ಗಳಿಸಿದ್ದ. ಅಷ್ಟೇ ಅಲ್ಲದೆ ಮಸೀದಿಯ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿ, ಪ್ರತ್ಯೇಕ ರೂಂ ಪಡೆದಿದ್ದ. ಅಲ್ಲಿಯೇ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವರದಿಯಾಗಿದೆ. ಆರೋಪಿ ಯುಸುಫ್ನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.