ಚಾಮರಾಜನಗರ: ಕರ್ನಾಟಕದ ಕಾಡಾನೆ (Karnataka Elephant) ದಾಳಿಗೆ ಬಲಿಯಾಗಿದ್ದ ಕೇರಳದ ವ್ಯಕ್ತಿಯ (Kerala Man) ಪ್ರಕರಣದಲ್ಲಿ, ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರವನ್ನು ಸಂತ್ರಸ್ತ ಕುಟುಂಬ ತಿರಸ್ಕರಿಸಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ (Eshwara Khandre) ತಿಳಿಸಿದ್ದಾರೆ.
ಬಂಡೀಪುರದಲ್ಲಿ (Bandipur) ಮಾತನಾಡಿದ ಅವರು, ನಾವು ಮಾನವೀಯತೆಯಿಂದ ಪರಿಹಾರ ಘೋಷಣೆ ಮಾಡಿದ್ದೆವು. ಆದರೆ ಸಂತ್ರಸ್ತ ಕುಟುಂಬವು ಪರಿಹಾರ ಬೇಡವೆಂದು ತಿರಸ್ಕರಿಸಿದೆ ಎಂದು ಖಂಡ್ರೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಆನೆ ತುಳಿತಕ್ಕೆ ವ್ಯಕ್ತಿ ಬಲಿ; ಕರ್ನಾಟಕ ಸರ್ಕಾರದಿಂದ ಪರಿಹಾರ – ಈಶ್ವರ್ ಖಂಡ್ರೆ ಹೇಳಿದ್ದೇನು?
ನಾವು ಮಾನವೀಯತೆಯಿಂದ ಪರಿಹಾರ ಘೋಷಿಸಿದ್ದೆವು. ಆದರೆ ಪರಿಹಾರ ನೀಡಲು ಬಿಜೆಪಿ ವಿರೋಧ ಮಾಡಿತ್ತು. ಬಿಜೆಪಿ ವಿರೋಧ ಮಾಡಿದ್ದರಿಂದ ನಮಗೆ ಪರಿಹಾರ ಬೇಕಿಲ್ಲ ಅಂತಾ ಸಂತ್ರಸ್ತನ ಕುಟುಂಬ ತಿರಸ್ಕರಿಸಿದೆ ಎಂದು ಹೇಳಿದ್ದಾರೆ.
ಪ್ರಕರಣ ಏನು?
ಕೇರಳದಲ್ಲಿ (Kerala) ಆನೆ ತುಳಿತದಿಂದಾಗಿ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದರು. ಕೇರಳದ ವ್ಯಕ್ತಿ ಮೃತಪಟ್ಟಿರುವುದಕ್ಕೆ ಕರ್ನಾಟಕ ಸರ್ಕಾರದಿಂದ ಪರಿಹಾರ ಘೋಷಿಸಲಾಗಿತ್ತು. ಈ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ (Eswhar Khandre) ಸ್ಪಷ್ಟನೆ ನೀಡಿದ್ದರು. ಇದನ್ನೂ ಓದಿ: ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿ 2 ವರ್ಷದಲ್ಲಿ ಪೂರ್ಣ – ಜೋಶಿ ವಿಶ್ವಾಸ
ನಮ್ಮ ಆನೆಗೆ ನಾವು ರೇಡಿಯೋ ಕಾಲರ್ ಹಾಕಿದ್ದೆವು. ಆ ಆನೆ ಬಂಡೀಪುರದಿಂದ ಕೇರಳದ ವೈನಾಡಿಗೆ ಹೋಗಿತ್ತು. ಅಲ್ಲಿ ಆನೆ ತುಳಿತಕ್ಕೆ ಅಜೀಶ್ ಎಂಬ ವ್ಯಕ್ತಿಯ ಸಾವಾಗಿದೆ. ನಮ್ಮ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ಮೇರೆಗೆ ಸಿಎಂ ಸಿದ್ದರಾಮಯ್ಯನವರ ಅನುಮೋದನೆ ಪಡೆದು ಕೇರಳದ ವ್ಯಕ್ತಿಗೆ ಪರಿಹಾರ ನೀಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದ್ದರು.