Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮನ್ನು ಕೊಂದು ಸೇಡು ತೀರಿಸಿಕೊಳ್ಳುತ್ತೇವೆ – ಕೇರಳ ಸಿಎಂಗೆ ಮಾವೋವಾದಿಗಳಿಂದ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಿಮ್ಮನ್ನು ಕೊಂದು ಸೇಡು ತೀರಿಸಿಕೊಳ್ಳುತ್ತೇವೆ – ಕೇರಳ ಸಿಎಂಗೆ ಮಾವೋವಾದಿಗಳಿಂದ ಪತ್ರ

Latest

ನಿಮ್ಮನ್ನು ಕೊಂದು ಸೇಡು ತೀರಿಸಿಕೊಳ್ಳುತ್ತೇವೆ – ಕೇರಳ ಸಿಎಂಗೆ ಮಾವೋವಾದಿಗಳಿಂದ ಪತ್ರ

Public TV
Last updated: November 15, 2019 9:09 pm
Public TV
Share
2 Min Read
pinarayi vijayan
SHARE

ತಿರುವನಂತಪುರಂ: ತಮ್ಮ ಗುಂಪಿನ ಕೆಲ ನಕ್ಸಲರನ್ನು ಕೊಂದಿದ್ದಕ್ಕೆ ಕೇರಳದ ಸಿಎಂ ಪಿಣರಾಯಿ ವಿಜಯನ್‍ಗೆ ಮಾವೋವಾದಿಗಳು ಜೀವ ಬೆದರಿಕೆ ಪತ್ರ ರವಾನಿಸಿದ್ದಾರೆ.

ಕೆಳೆದ ಅಕ್ಟೋಬರ್ ತಿಂಗಳಲ್ಲಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಅಗಾಲಿ ಕಾಡುಗಳಲ್ಲಿ ಮಾವೋವಾದಿಗಳು ಮತ್ತು ಕೇರಳ ವಿಶೇಷ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳು ಮೃತಪಟ್ಟಿದ್ದರು. ಈ ಸಾವಿನ ಪ್ರತೀಕಾರವನ್ನು ತೀರಿಸಿಕೊಳ್ಳಲು ಮುಖ್ಯಮಂತ್ರಿ ಅವರನ್ನು ಕೊಲ್ಲುತ್ತೇವೆ ಎಂದು ಪತ್ರ ಬರೆಯಲಾಗಿದೆ.

maoists forest express 1

ಈ ಪತ್ರವನ್ನು ಕೇರಳದ ವಡಕಾರ ಪೊಲೀಸ್ ಠಾಣೆಗೆ ಕಳುಹಿಸಿದ್ದು, ಹತ್ಯೆಗೀಡಾದ ಮಾವೋವಾದಿಗಳಿಗೆ ಬಂದ ಪರಿಸ್ಥಿತಿಯನ್ನೇ ಸಿಎಂ ವಿಜಯನ್ ಮುಂದೆ ಎದುರಿಸಬೇಕಾಗುತ್ತದೆ ಎಂದು ನಕ್ಸಲರ ತಂಡದ ಕಬಿನಿಡಾಲ್ ಕ್ರಿಯಾ ಸಮಿತಿಯ ಉಪಾಧ್ಯಕ್ಷ ಬೇಡರ್ ಮೂಸಾ ಸಹಿ ಮಾಡಿದ ಪತ್ರದಲ್ಲಿ ತಿಳಿಸಲಾಗಿದೆ. ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳನ್ನು ಒಳಗೊಂಡಂತೆ ಕಳೆದ ತಿಂಗಳು ದಟ್ಟ ಕಾಡುಗಳಲ್ಲಿ ತಮ್ಮ ನಾಲ್ವರು ಸ್ನೇಹಿತರು ಸಾವನ್ನಪ್ಪಿದ ನಂತರ ಮಾವೋವಾದಿಗಳು ವಿಜಯನ್ ಸರ್ಕಾರದಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

2016 ರಲ್ಲಿ ಪಿಣರಾಯಿ ವಿಜಯನ್ ಕೇರಳ ಸಿಎಂ ಆದ ನಂತರ ಕೇರಳ ರಾಜ್ಯದಲ್ಲಿ ಏಳು ಮಾವೋವಾದಿಗಳನ್ನು ತಟಸ್ಥಗೊಳಿಸಲಾಗಿದೆ. ಆದ್ದರಿಂದ ಮಲಯಾಳಂ ಭಾಷೆಯಲ್ಲಿ ಬರೆದಿರುವ ಪತ್ರದಲ್ಲಿ ಕೇರಳ ಸಿಎಂ ತಮ್ಮ ಏಳು ಮಂದಿ ಸ್ನೇಹಿತರ ಹತ್ಯೆಗೆ ಸೂಕ್ತ ಶಿಕ್ಷೆ ಅನುಭವಿಸಬೇಕಾಗುತ್ತದೆ. ಇವರ ಜೊತೆಗೆ ಜನರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೆರಂಬರ ಸಬ್ ಇನ್ಸ್‍ಪೆಕ್ಟರ್ ಹರೀಶ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

18VJMAOISTS 1

ಅಕ್ಟೋಬರ್ 28 ರಂದು ಬೆಳಗ್ಗೆ ಪಾಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರ ಗುಂಡಿಗೆ ನಾಲ್ವರು ಮಾವೋವಾದಿಗಳು ಹತರಾಗಿದ್ದರು. ಕೇರಳದ ಥಂಡರ್ ಬೋಲ್ಟ್ ಕಮಾಂಡೋ ತಂಡವು ಈ ಕಾರ್ಯಚರಣೆ ನಡೆಸಿದ್ದು, ಯಶಸ್ವಿಯಾಗಿ ನಾಲ್ವರನ್ನು ಹತ್ಯೆ ಮಾಡಿತ್ತು.

ಇತ್ತೀಚಿಗೆ ಮಾವೋವಾದಿಗಳ ಉಪಟಳ ಕೇರಳದಲ್ಲಿ ಜಾಸ್ತಿಯಾಗಿದ್ದು, ಇವರನ್ನು ಸದೆಬಡಿಯಲು ಕೇರಳ ಪೊಲೀಸರು ಕಾದು ಕುಳಿತಿದ್ದರು. ಅದರಂತೆ ಸೋಮವಾರ ಬೆಳಗ್ಗೆ ಮಾವೋವಾದಿಗಳು ಪಾಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದರು. ಈ ವೇಳೆ ಪಾಲಕ್ಕಾಡ್ ಅರಣ್ಯದ ಮಂಚಕತ್ತಿ ಎಂಬ ಪ್ರದೇಶದಲ್ಲಿ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿಯಾಗಿ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ.

collage

ಕಳೆದ ಕೆಲ ವರ್ಷಗಳಿಂದ ಕರ್ನಾಟಕ ತಮಿಳುನಾಡು ಮತ್ತು ಕೇರಳದಲ್ಲಿ ಮಾವೋವಾದಿಗಳು ತಮ್ಮ ಪ್ರಾಬಲ್ಯವನ್ನು ಸ್ಥಾಪಿಸಲು ಪ್ರಯತ್ನ ಪಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದ್ದರಿಂದ ಕೆಲ ಸೂಕ್ಷ್ಮ ಪ್ರದೇಶದ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು. ಆದರೆ ಕೇರಳದಲ್ಲಿ ಬಿಟ್ಟರೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮಾವೋವಾದಿಗಳು ಕಾಣಿಸಿಕೊಂಡಿರಲಿಲ್ಲ. 2014 ರಿಂದ 2017ರವರೆಗೆ ಕೇರಳದಲ್ಲಿ ಮಾವೋವಾದಿಗಳ ವಿರುದ್ಧ 23 ವಿವಿಧ ಕೇಸ್‍ಗಳು ದಾಖಲಾಗಿತ್ತು.

TAGGED:CM Pinarayi VijayankeralaletterMaoistspolicePublic TVಕೇರಳಪತ್ರಪಬ್ಲಿಕ್ ಟಿವಿಪೊಲೀಸ್ಮಾವೋವಾದಿಗಳುಸಿಎಂ ಪಿಣರಾಯಿ ವಿಜಯನ್
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
5 hours ago
18 03
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-1

Public TV
By Public TV
5 hours ago
02 12
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-2

Public TV
By Public TV
5 hours ago
03 12
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-3

Public TV
By Public TV
5 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
6 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?