ಪರಿಹಾರ ಸಾಮಗ್ರಿಗಳನ್ನು ಭುಜದ ಮೇಲೆ ಹೊತ್ತು ಸಾಗಿದ ಸಚಿವ- ಇತ್ತ ಬಿಸ್ಕೆಟ್ ಎಸೆದ ರೇವಣ್ಣ!

Public TV
1 Min Read
KERALA REVANNA

ತಿರುವನಂತಪುರ: ಕೇರಳದ ಶಿಕ್ಷಣ ಸಚಿವರಾದ ರವೀಂದ್ರನಾಥ್‍ರವರು ಪರಿಹಾರ ಸಾಮಗ್ರಿಗಳನ್ನು ಸ್ವತಃ ಹೆಗಲ ಮೇಲೆ ಹೊತ್ತುಕೊಂಡು ನಿರಾಶ್ರಿತ ಕೇಂದ್ರಗಳಿಗೆ ಸಾಗಿಸಿದ್ದಾರೆ.

ತುರ್ತು ಪರಿಸ್ಥಿತಿ ಅಥವಾ ಪ್ರವಾಹ ಪರಿಸ್ಥಿತಿ ಸಂದರ್ಭಗಳಲ್ಲಿ ಅಧಿಕಾರಿಗಳು ಹಾಗೂ ಸಚಿವರು ಯಾವ ರೀತಿ ಜನರ ಕಷ್ಟಕ್ಕೆ ಸ್ಪಂದಿಸುತ್ತಾರೆ ಎನ್ನುವುದು ಮುಖ್ಯ. ಇದೇ ರೀತಿ ಪ್ರಕೃತಿ ವಿಕೋಪ ಸಂಭವಿಸಿದ ಸಂದರ್ಭಗಳಲ್ಲಿ ಆಳುವ ಮಂದಿ ಹೇಗೆ ನಡ್ಕೋತಾರೆ ಅನ್ನೋದಕ್ಕೆ ಎರಡು ಉದಾಹರಣೆಗಳು ನಮ್ಮ ಮುಂದಿವೆ.

ಕೇರಳದ ತ್ರಿಶೂರ್ ಜಿಲ್ಲೆಯ ನಿರಾಶ್ರಿತ ಕೇಂದ್ರದಲ್ಲಿ ನೆಲೆಸಿದ್ದ ನಿರಾಶ್ರಿತರಿಗೆ ಪರಿಹಾರ ಸಾಮಗ್ರಿಗಳು ಸಿಗದೇ ಜನ ನರಕ ಯಾತನೇ ಅನುಭವಿಸುತ್ತಿದ್ದರು. ಇದರ ಮಾಹಿತಿ ಪಡೆದ ರವೀಂದ್ರನಾಥ್‍ರವರು ಖುದ್ದು ಸ್ಥಳಕ್ಕೆ ಪರಿಹಾರ ಸಾಮಗ್ರಿಗಳ ಸಮೇತ ಭೇಟಿ ನೀಡಿದ್ದರು. ಈ ವೇಳೆ ಆಹಾರ ಸಾಮಾಗ್ರಿಗಳನ್ನು ತಮ್ಮ ಹೆಗಲ ಮೇಲೆಯೇ ಇಟ್ಟುಕೊಂಡು ನಿರಾಶ್ರಿತ ಕೇಂದ್ರಕ್ಕೆ ತಲುಪಿಸುವ ಕೆಲಸ ಮಾಡಿದ್ದಾರೆ. ಜನರ ಕಷ್ಟಕ್ಕೆ ಸಚಿವರು ಹೆಗಲು ಕೊಟ್ಟಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದು, ಸಚಿವರನ್ನು ಜನ ಬಾಹುಬಲಿಯಂದೇ ಕರೆಯುತ್ತಿದ್ದಾರೆ.

ಆದರೆ ಇದಕ್ಕೆ ಭಿನ್ನವಾದ ಘಟನೆ ನಮ್ಮ ರಾಜ್ಯದಲ್ಲಿ ನಡೆದಿದ್ದು ದುರಾದೃಷ್ಟವೇ ಸರಿ, ಕಳೆದ ವಾರ ಲೋಕೋಪಯೋಗಿ ಸಚಿವರಾದ ಎಚ್.ಡಿ.ರೇವಣ್ಣನವರು ಹಾಸನ ಜಿಲ್ಲೆಯ ರಾಮನಾಥಪುರ ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿದ್ದಾಗ, ನಿರಾಶ್ರಿತರಿಗೆ ಪ್ರಾಣಿಗಳಿಗೆ ಎಸೆಯುವ ರೀತಿ ಬಿಸ್ಕೆಟ್ ಪ್ಯಾಕ್‍ಗಳನ್ನು ಎಸೆಯುವ ಮೂಲಕ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಎಂತಹುದೇ ಅನಿವಾರ್ಯ ಪರಿಸ್ಥಿತಿಯಲ್ಲಿದ್ದರು, ಆ ರೀತಿ ನಡೆದುಕೊಳ್ಳಬಾರದಿತ್ತೆಂದು ಸಾರ್ವಜನಿಕರು ಸಚಿವರ ನಡೆಗೆ ಭಾರೀ ವಿರೋಧ ವ್ಯಕ್ತಪಡಿಸಿದ್ದರು.  ಇದನ್ನೂ ಓದಿ: ಅಧಿಕಾರದ ಮದದಲ್ಲಿ ಅಮಾನವೀಯ ಕೆಲಸ- ಕೊಡಗು ಸಂತ್ರಸ್ತರಿಗೆ ಬಿಸ್ಕೆಟ್ ಎಸೆದ ಸೂಪರ್ ಸಿಎಂ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
1 Comment

Leave a Reply

Your email address will not be published. Required fields are marked *