Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾರೀ ಕೇರಳ ನರ್ಸ್‌ ನಿಮಿಷಾ ಪ್ರಿಯಾ; ಯೆಮನ್‌ನಲ್ಲಿ ಗಲ್ಲುಶಿಕ್ಷೆಯೇ ಯಾಕೆ – ಏನಿದು ಸ್ಟೋರಿ!?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯಾರೀ ಕೇರಳ ನರ್ಸ್‌ ನಿಮಿಷಾ ಪ್ರಿಯಾ; ಯೆಮನ್‌ನಲ್ಲಿ ಗಲ್ಲುಶಿಕ್ಷೆಯೇ ಯಾಕೆ – ಏನಿದು ಸ್ಟೋರಿ!?

Latest

ಯಾರೀ ಕೇರಳ ನರ್ಸ್‌ ನಿಮಿಷಾ ಪ್ರಿಯಾ; ಯೆಮನ್‌ನಲ್ಲಿ ಗಲ್ಲುಶಿಕ್ಷೆಯೇ ಯಾಕೆ – ಏನಿದು ಸ್ಟೋರಿ!?

Public TV
Last updated: July 20, 2025 12:09 pm
Public TV
Share
6 Min Read
nimisha priya
SHARE

ಯೆಮನ್‌ನಲ್ಲಿ (Yemen) ಗಲ್ಲುಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ (Nimisha Priya) ಅವರ ಎದುರು ನೇಣಿನ ಕುಣಿಕೆ ತೂಗಾಡುತ್ತಿದೆ. ಈ ಕುಣಿಕೆ ಹಿಂದೆ ಸ್ವಾರಸ್ಯಕರ ಕಥೆಯೇ ಇದೆ. ಜೀವನ ಕಟ್ಟಿಕೊಳ್ಳಲು ದೇಶ ಬಿಟ್ಟು ಮತ್ತೊಂದು ದೇಶಕ್ಕೆ ಹೋಗಿದ್ದಾಕೆಯ ಬದುಕಲ್ಲಿ ದುರಂತವೇ ನಡೆದುಬಿಟ್ಟಿತು. ತನಗೆ ಎದುರಾದ ಸಂಕಷ್ಟದಿಂದ ಪಾರಾಗಲು ಆತುರದ ಕೈಗೆ ಬುದ್ದಿ ಕೊಟ್ಟರು ನಿಮಿಷಾ. ಯೆಮನ್ ದೇಶದ ಪ್ರಜೆಯ ಕೊಲೆ ಕೇಸಲ್ಲಿ ಈಗ ಮರಣದಂಡನೆಯಂತಹ ಘೋರ ಶಿಕ್ಷೆಗೆ ಗುರಿಯಾಗಿದ್ದಾರೆ. ಇಡೀ ಭಾರತ ದೇಶದ ಗಮನ ಈಗ ಆಕೆಯ ಕಡೆ ನೆಟ್ಟಿದೆ. ಪ್ರಿಯಾ ಶಿಕ್ಷೆಯಿಂದ ಪಾರಾಗಲೆಂಬ ಪ್ರಾರ್ಥನೆಗಳು ಕೇಳಿಬಂದಿವೆ. ಭಾರತ ಸರ್ಕಾರ ಕೂಡ ಆಕೆಯನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲು ಶತಪ್ರಯತ್ನ ನಡೆಸುತ್ತಿದೆ. ಮುಂದೇನಾಗುತ್ತದೋ ಎಂಬುದು ಸದ್ಯದ ಕುತೂಹಲವಾಗಿದೆ.

ಅಷ್ಟಕ್ಕೂ ಯಾರು ಈ ನಿಮಿಷಾ ಪ್ರಿಯಾ? ಯೆಮನ್‌ನಲ್ಲಿ ಏನಾಯಿತು? ಮರಣದಂಡನೆ ಶಿಕ್ಷೆಗೆ ಆಕೆ ಗುರಿಯಾಗಿದ್ಯಾಕೆ? ಯೆಮನ್ ಕಾನೂನು ಏನು ಹೇಳುತ್ತೆ? ಭಾರತ ಸರ್ಕಾರದ ಪ್ರಯತ್ನಗಳೇನು? ಪ್ರಕರಣ ಈಗ ಯಾವ ಹಂತದಲ್ಲಿದೆ ಎಂಬ ಪ್ರಶ್ನೆಗಳಿಗೆ ವಿವರ ಇಲ್ಲಿದೆ. ಇದನ್ನೂ ಓದಿ: ನಿಮಿಷಾ ಪ್ರಿಯಾರನ್ನ ಸುರಕ್ಷಿತವಾಗಿ ವಾಪಸ್ ಕರೆತರಲು ಶಕ್ತಿಮೀರಿ ಪ್ರಯತ್ನ – ‘ಸುಪ್ರೀಂ’ಗೆ ಕೇಂದ್ರದಿಂದ ಮಾಹಿತಿ

ನಿಮಿಷಾ ಪ್ರಿಯಾ ಯಾರು?
ನಿಮಿಷಾ ಪ್ರಿಯಾ ಯೆಮನ್‌ನಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ನರ್ಸ್. ಯೆಮನ್ ನಾಗರಿಕ ತಲಾಲ್ ಅಬ್ದೋ ಮೆಹದಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ನಿಮಿಷಾ, 2017 ರಲ್ಲಿ ಕೊಲೆ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅದಕ್ಕೂ ಮುನ್ನ ಅವರು ಹಲವಾರು ವರ್ಷಗಳ ಕಾಲ ಆ ದೇಶದಲ್ಲಿ ನರ್ಸ್ ಆಗಿ ಕೆಲಸ ಮಾಡಿದ್ದರು.

Kerala Nurse Nimisha Priya

ಯೆಮನ್ ಪ್ರಜೆಯ ಕೊಲೆ ಏಕಾಯ್ತು?
ತಲಾಲ್ ಅವರ ಬೆಂಬಲದೊಂದಿಗೆ, ನಿಮಿಷಾ 2015ರ ಏಪ್ರಿಲ್‌ನಲ್ಲಿ ವಿದೇಶದಲ್ಲಿ ತನ್ನ ಕನಸಿನ ಚಿಕಿತ್ಸಾಲಯವನ್ನು ತೆರೆದರು. ಅಲ್ಲಿ ಅವರು ಮಾನಸಿಕ, ದೈಹಿಕ ಮತ್ತು ಆರ್ಥಿಕ ಕಿರುಕುಳವನ್ನು ಅನುಭವಿಸಿದ್ದಾರೆಂದು ಆರೋಪಿಸಲಾಗಿದೆ. ತಲಾಲ್ ಕ್ಲಿನಿಕ್‌ನಲ್ಲಿ ಶೇ.33 ರಷ್ಟು ಪಾಲನ್ನು ಪಡೆಯಲು ಸುಳ್ಳು ದಾಖಲೆ ಸೃಷ್ಟಿಸಿದ್ದ. ಆಕೆಯ ಪಾಸ್‌ಪೋರ್ಟ್ ಅನ್ನು ವಶಪಡಿಸಿಕೊಂಡಿದ್ದ. ಕಾನೂನುಬದ್ಧವಾಗಿ ಮದುವೆಯಾಗಿದ್ದಾವೆಂದು ಸೂಚಿಸಲು ವಿವಾಹ ಪ್ರಮಾಣಪತ್ರವನ್ನು ಸಹ ನಕಲಿ ಮಾಡಿದ್ದ. ಮಹ್ದಿ ತನ್ನ ಮೇಲೆ ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನಿಮಿಷಾ ಆರೋಪಿಸಿದ್ದರು.

2017ರ ಜುಲೈನಲ್ಲಿ ನಿಮಿಷಾ ಜೈಲಿಗೆ ಭೇಟಿ ನೀಡಿದಾಗ, ತನ್ನ ಪಾಸ್‌ಪೋರ್ಟ್ ಅನ್ನು ಮರಳಿ ಪಡೆಯಲು ಮಹ್ದಿಗೆ ನಿದ್ರಾಜನಕ ಇನ್‌ಜೆಕ್ಷನ್ ಚುಚ್ಚಿದರು. ಪ್ರಮಾಣ ಅತಿಯಾದ್ದರಿಂದ ವ್ಯಕ್ತಿ ಮೃತಪಟ್ಟಿದ್ದ. ಮತ್ತೊಬ್ಬ ನರ್ಸ್ ಸಹಾಯ ಪಡೆದು ಮೃತದೇಹ ವಿಲೇವಾರಿಗೆ ಮುಂದಾಗಿದ್ದರು. ದೇಹವನ್ನು ಕತ್ತರಿಸಿ ನೀರಿನ ಟ್ಯಾಂಕ್‌ನಲ್ಲಿ ಭಾಗಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಿದ್ದ. ಇಬ್ಬರೂ ತಲೆಮರೆಸಿಕೊಂಡಿದ್ದರು. ಕೊನೆಗೆ ಅವರನ್ನು ಪೊಲೀಸರು ಬಂಧಿಸಿದರು.

ಯೆಮನ್ ನ್ಯಾಯಾಲಯ ತೀರ್ಪೇನು?
ಕೊಲೆ ಪ್ರಕರಣದಲ್ಲಿ ಪ್ರಿಯಾಳನ್ನು ಬಂಧಿಸಿ ಯೆಮನ್‌ನಲ್ಲಿ ವಿಚಾರಣೆ ನಡೆಸಲಾಯಿತು. 2020 ರಲ್ಲಿ, ಸ್ಥಳೀಯ ನ್ಯಾಯಾಲಯವು ಆಕೆಗೆ ಒಮ್ಮೆ ಅಲ್ಲ, ಮೂರು ಬಾರಿ ಮರಣದಂಡನೆ ವಿಧಿಸಿತು. ನಂತರ ಮೇಲ್ಮನವಿ ನ್ಯಾಯಾಲಯವು ಒಂದು ಶಿಕ್ಷೆಯನ್ನು ರದ್ದುಗೊಳಿಸಿತು. ಆದಾಗ್ಯೂ, ದೇಶದ ಸುಪ್ರೀಂ ಕೋರ್ಟ್ ಉಳಿದ ಎರಡು ಶಿಕ್ಷೆಯನ್ನು ಎತ್ತಿಹಿಡಿಯಿತು. ಯೆಮನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ, ಕಳೆದ ವರ್ಷ ಆಕೆಗೆ ಮರಣದಂಡನೆಯನ್ನು ಅನುಮೋದಿಸಿದರು. ಪ್ರಿಯಾ ಪ್ರಸ್ತುತ ಸನಾ ಕೇಂದ್ರ ಜೈಲಿನಲ್ಲಿದ್ದಾರೆ. ಈ ವರ್ಷದ ಜನವರಿಯಲ್ಲಿ, ಹೌತಿ ನಿಯಂತ್ರಿತ ಸುಪ್ರೀಂ ಪೊಲಿಟಿಕಲ್ ಕೌನ್ಸಿಲ್‌ನ ಅಧ್ಯಕ್ಷ ಮಹ್ದಿ ಅಲ್-ಮಶಾತ್ ಅವರು ಮರಣದಂಡನೆಯನ್ನು ಅನುಮೋದಿಸಿದರು.

Nimisha Priya

ಅಂದಿನಿಂದ ಆದೇಶವು ಪ್ರಾಸಿಕ್ಯೂಟರ್ ಬಳಿಯೇ ಇತ್ತು. ಪ್ರಕರಣ ಮತ್ತಷ್ಟು ಸೂಕ್ಷ್ಮತೆ ಪಡೆದುಕೊಂಡಿದೆ. ಭಾರತೀಯ ಅಧಿಕಾರಿಗಳು ಅವರೊಂದಿಗೆ ಮತ್ತು ಯೆಮನ್‌ನಲ್ಲಿರುವ ಪ್ರಾಸಿಕ್ಯೂಟರ್ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದಾರೆ. ಭಾರತದಲ್ಲಿರುವ ಮುಸ್ಲಿಂ ಧರ್ಮಗುರುಗಳು ಸಹ ಯೆಮನ್ ಮುಖಂಡರನ್ನು ಸಂಪರ್ಕಿಸಿ ಶಿಕ್ಷೆ ರದ್ದುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಸ್ಥಳೀಯ ಅಧಿಕಾರಿಗಳು ಪ್ರಿಯಾರ ಮರಣದಂಡನೆಯನ್ನು ಮುಂದೂಡಿದರು. ಇದನ್ನೂ ಓದಿ: ಕೇರಳ ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ ಮುಂದೂಡಿಕೆ

ನಿಮಿಷಾಳ ಕುಟುಂಬ ಗೋಳಾಟ
ಕೊಚ್ಚಿಯಲ್ಲಿ ಮನೆಕೆಲಸ ಮಾಡುತ್ತಿರುವ ನಿಮಿಷಾಳ ತಾಯಿ ಪ್ರೇಮಾ ಕುಮಾರಿ, ಸಂಘರ್ಷಪೀಡಿತ ಯೆಮನ್‌ಗೆ ಪ್ರಯಾಣ ನಿಷೇಧದಿಂದ ವಿನಾಯಿತಿ ಪಡೆಯಲು ಕಳೆದ ವರ್ಷ ಡಿಸೆಂಬರ್‌ನಲ್ಲಿ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಿದರು. ಮಹ್ದಿ ಅವರ ಕುಟುಂಬದೊಂದಿಗೆ ಮನವಿ ಮಾಡಲು ಅವರು 2024 ರಲ್ಲಿ ಅಂತಿಮ ಪ್ರಯತ್ನವಾಗಿ ಯೆಮನ್‌ಗೆ ಪ್ರಯಾಣ ಬೆಳೆಸಿದರು. ಯೆಮನ್‌ನ ರಾಜಧಾನಿ ಸನಾಗೆ ತೆರಳಿದ್ದು, ಕಳೆದ ವರ್ಷದಿಂದ ಶಿಬಿರದಲ್ಲಿದ್ದಾರೆ. ಜೈಲಿನಲ್ಲಿ ಮಗಳನ್ನು ಭೇಟಿಯಾಗಿದ್ದಾರೆ. ಮಗಳನ್ನು ಶಿಕ್ಷೆಯಿಂದ ಪಾರು ಮಾಡಲು ಪ್ರಯತ್ನ ನಡೆಸುತ್ತಿದ್ದಾರೆ.

ಮರಣದಂಡನೆಗೆ ಭಾರತ ಸರ್ಕಾರ ಪ್ರತಿಕ್ರಿಯೆ ಏನು?
ಕಳೆದ ವರ್ಷ ಯೆಮನ್ ಅಧ್ಯಕ್ಷರು ಮರಣದಂಡನೆಯನ್ನು ಅನುಮೋದಿಸಿದಾಗ, ದೆಹಲಿಯಲ್ಲಿರುವ ವಿದೇಶಾಂಗ ಸಚಿವಾಲಯವು ಆಕೆ ಮತ್ತು ಆಕೆಯ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಹೇಳಿತ್ತು. ಭಾರತದ ಸುಪ್ರೀಂ ಕೋರ್ಟ್ ಕಳೆದ ವಾರ ಜುಲೈ 14 ರಂದು ನಿಮಿಷಾ ಪ್ರಕರಣವನ್ನು ವಿಚಾರಣೆ ನಡೆಸಲು ಒಪ್ಪಿಕೊಂಡಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ತಾನು ತೆಗೆದುಕೊಂಡಿರಬಹುದಾದ ಯಾವುದೇ ಕ್ರಮಗಳ ಬಗ್ಗೆ ಕೇಂದ್ರಕ್ಕೆ ತಿಳಿಸುವಂತೆ ಕೇಳಿತು. ಭಾರತ ಸರ್ಕಾರವು ಇತರ ಪಕ್ಷದೊಂದಿಗೆ ಪರಸ್ಪರ ಒಪ್ಪಬಹುದಾದ ಪರಿಹಾರವನ್ನು ತಲುಪಿಸಲು ಕುಟುಂಬಕ್ಕೆ ಹೆಚ್ಚಿನ ಸಮಯವನ್ನು ಕೋರಲು ಸಂಘಟಿತ ಪ್ರಯತ್ನಗಳನ್ನು ಮಾಡಿತು. ಇದು ಅಂತಿಮವಾಗಿ ಮರಣದಂಡನೆಯನ್ನು ಮುಂದೂಡಲು ಕಾರಣವಾಯಿತು.

indian flag economy e1658827415328

ಸುಪ್ರೀಂ ಕೋರ್ಟ್‌ಗೆ ಕೇಂದ್ರ ಏನು ಹೇಳಿದೆ?
ಕೇರಳ ನರ್ಸ್ ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ಶತಪ್ರಯತ್ನ ಮಾಡಿದೆ. ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ವಾದ ಮಂಡಿಸಿ, ತನ್ನ ಪ್ರಜೆಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದ್ದು, ನಿಮಿಷಾ ಪ್ರಿಯಾ ವಿಚಾರದಲ್ಲಿ ಏನೆಲ್ಲಾ ಮಾಡಬಹುದೋ ಅದನ್ನೆಲ್ಲ ಮಾಡುತ್ತಿದೆ. ಸದ್ಯದ ಮಟ್ಟಿಗೆ ಗಲ್ಲು ಶಿಕ್ಷೆ ಜಾರಿಯನ್ನು ಅಮಾನತಿನಲ್ಲಿಡಲು ಸಾಧ್ಯವಾಗುವಂತಹ ದಾರಿಯನ್ನು ಪತ್ತೆ ಮಾಡುವಂತೆ ಆ ಪ್ರದೇಶದ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಸರ್ಕಾರ ಪತ್ತೆ ಬರೆದಿತ್ತು. ಯೆಮನ್‌ನಲ್ಲಿ ಹೆಚ್ಚು ಪ್ರಭಾವ ಹೊಂದಿರುವ ಕೆಲವು ಶೇಖ್‌ಗಳ ಜೊತೆಗೆ ಮಾತುಕತೆಯನ್ನೂ ನಡೆಸಿದೆ ಎಂದು ಮಾಹಿತಿ ನೀಡಿದ್ದಾರೆ.

ಕೇರಳ ಸರ್ಕಾರ ಏನು ಹೇಳುತ್ತೆ?
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಪ್ರಧಾನಿ ಮೋದಿಯವರಿಗೆ ಪತ್ರದಲ್ಲಿ ವಿಜಯನ್ ಹೀಗೆ ಬರೆದಿದ್ದಾರೆ, ‘ಕೇರಳ ಸರ್ಕಾರವು ಪ್ರಿಯಾರ ಸುರಕ್ಷಿತ ವಾಪಸಾತಿಗಾಗಿ ಶ್ರಮಿಸುತ್ತಿರುವ ಎಲ್ಲರೊಂದಿಗೂ ದೃಢವಾಗಿ ನಿಲ್ಲುತ್ತದೆ. ಈ ಪ್ರಕರಣವು ಸಹಾನುಭೂತಿಗೆ ಅರ್ಹವಾಗಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಕೇರಳ ನರ್ಸ್‌ ತಪ್ಪಿಗೆ ಕ್ಷಮೆಯಿಲ್ಲ, ಗಲ್ಲಿಗೇರಿಸಲೇಬೇಕು: ಕೊಲೆಯಾದ ಯೆಮನ್‌ ವ್ಯಕ್ತಿ ಸಹೋದರ ಪ್ರತಿಕ್ರಿಯೆ

ಸಮುದಾಯದ ಮುಖಂಡರು ತೆಗೆದುಕೊಂಡ ಕ್ರಮಗಳೇನು?
ನಿಮಿಷಾ ಪ್ರಿಯಾರ ಜೀವ ಉಳಿಸಲು ಯೆಮನ್‌ನಲ್ಲಿ ವಿವಿಧ ಹಂತಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಆಕೆ ಜೀವ ಉಳಿಸುವ ಚರ್ಚೆಗಳು ನಿರ್ಣಾಯಕ ಹಂತದಲ್ಲಿವೆ. ಸಕಾರಾತ್ಮಕ ಫಲಿತಾಂಶದ ಬಗ್ಗೆ ನಮಗೆ ಭರವಸೆ ಇದೆ. ಭಾರತೀಯ ಕಾರ್ಯಾಚರಣೆಯೊಂದಿಗೆ ಸಂಬAಧ ಹೊಂದಿರುವ ಇಬ್ಬರು ಯೆಮನ್ ನಾಗರಿಕರು ಮತ್ತು ಸಮಾಲೋಚಕ ಸ್ಯಾಮ್ಯುಯೆಲ್ ಜೆರೋಮ್ ಭಾಸ್ಕರನ್ ಚರ್ಚೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಮೂಲವೊಂದು ತಿಳಿಸಿದೆ.

pinarayi vijayan

ಮರಣದಂಡನೆಯನ್ನು ಮುಂದೂಡಿದ ಬಗ್ಗೆ ಯೆಮನ್ ಅಧಿಕಾರಿಗಳೊಂದಿಗೆ ಚರ್ಚೆಗಳನ್ನು ನಡೆಸುತ್ತಿದ್ದ ಸಂಧಾನಕಾರ ಭಾಸ್ಕರನ್, ‘ಯೆಮನ್ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಿದೇಶಾಂಗ ಸಚಿವಾಲಯಕ್ಕೆ ನಾನು ಧನ್ಯವಾದ ಹೇಳುತ್ತೇನೆ’ ಎಂದು ತಿಳಿಸಿದ್ದಾರೆ. ಪ್ರಮುಖ ಮುಸ್ಲಿಂ ನಾಯಕ ಮತ್ತು ಅಖಿಲ ಭಾರತ ಸುನ್ನಿ ಜಮಿಯ್ಯತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಕೂಡ ನಿಮಿಷಾರ ಬಿಡುಗಡೆಗೆ ಪ್ರಯತ್ನಿಸಲು ಮಧ್ಯಸ್ಥಿಕೆ ವಹಿಸಿದ್ದಾರೆ. ತಲಾಲ್ ಕುಟುಂಬವು ಮಹಿಳೆಗೆ ಕ್ಷಮೆ ನೀಡುವುದನ್ನು ಖಚಿತಪಡಿಸಿಕೊಳ್ಳಲು ಯೆಮನ್‌ನ ಪ್ರಮುಖ ಸೂಫಿ ವಿದ್ವಾಂಸರೊಬ್ಬರು ತಲಾಲ್ ಅವರ ಕುಟುಂಬ ಮತ್ತು ಸ್ಥಳೀಯ ನಾಯಕತ್ವದೊಂದಿಗೆ ಚರ್ಚೆ ನಡೆಸಬೇಕೆಂದು ಮುಸ್ಲಿಯಾರ್ ಒತ್ತಾಯಿಸಿದ್ದಾರೆ.

ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್ ಎಂದರೇನು?
2020 ರಲ್ಲಿ ರಚಿಸಲಾದ ಗ್ರೂಪ್ ಇದು. ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್, ನರ್ಸ್ ಜೀವ ಉಳಿಸುವ ಪ್ರಯತ್ನಗಳನ್ನು ಮುನ್ನಡೆಸಿದೆ. ದೇಣಿಗೆ ಮತ್ತು ಕ್ರೌಡ್‌ಫಂಡಿಂಗ್ ಮೂಲಕ, ಕೌನ್ಸಿಲ್ 1 ಮಿಲಿಯನ್ ಡಾಲರ್ ಸಂಗ್ರಹಿಸಿದೆ. ಮೃತ ವ್ಯಕ್ತಿಯ ಕುಟುಂಬದೊಂದಿಗೆ ಮಾತುಕತೆ ನಡೆಸಲು ಯೆಮನ್ ಮೂಲದ ಸಾಮಾಜಿಕ ಕಾರ್ಯಕರ್ತ ಸ್ಯಾಮ್ಯುಯೆಲ್ ಜೆರೋಮ್ ಭಾಸ್ಕರನ್ ಅವರನ್ನು ನಾಮನಿರ್ದೇಶನ ಮಾಡಿದೆ. ಇದನ್ನೂ ಓದಿ: ಕೇರಳದ ನರ್ಸ್‌ಗೆ ಜು.16ರಂದು ಯೆಮೆನ್‌ನಲ್ಲಿ ನೇಣು; ಮರಣದಂಡನೆ ತಡೆಯಲು ಸಾಧ್ಯವಿಲ್ಲ – ಸುಪ್ರೀಂಗೆ ಕೇಂದ್ರ ಮಾಹಿತಿ

ಕಿಸಾಸ್‌ ಕಾನೂನು ಏನು ಹೇಳುತ್ತೆ?
ಯೆಮನ್‌ ದೇಶದಲ್ಲಿ ಇಸ್ಲಾಮಿಕ್‌ ಕಾನೂನು ಇದೆ. ಕಿಸಾಸ್‌ ಎಂದರೆ, ಕೊಲೆಯಾದ ವ್ಯಕ್ತಿಯನ್ನು ಅಪರಾಧಿ ಸ್ಥಾನದಲ್ಲಿರುವವರು ಯಾವ ರೀತಿ ಕೊಂದಿದ್ದಾರೋ ಅದೇ ರೀತಿಯ ಶಿಕ್ಷೆಯನ್ನು ನೀಡಬೇಕೆಂದು ಹೇಳುತ್ತದೆ. ಸಾಮಾನ್ಯವಾಗಿ ಇದು ಮರಣದಂಡನೆಯಾಗಿರುತ್ತದೆ.

ಶಿಕ್ಷೆ ತಪ್ಪಿಸಲು ಇರೋದೊಂದೇ ದಾರಿ
ಪ್ರಿಯಾ ಅವರು ಯೆಮನ್‌ನಲ್ಲಿದ್ದು ಸಾಮಾಜಿಕ ಕಾರ್ಯಕರ್ತರೊಬ್ಬರೊಂದಿಗೆ ಕ್ಷಮಾ ಪರಿಹಾರ ಮೊತ್ತದ (ಬ್ಲಡ್ ಮನಿ) ವಿಚಾರವಾಗಿ ಮೃತಪಟ್ಟ ವ್ಯಕ್ತಿಯ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಆತನ ಕುಟುಂಬವು ಕ್ಷಮಾ ಪರಿಹಾರ ಮೊತ್ತವನ್ನು ಸ್ವೀಕರಿಸಲು ಒಪ್ಪಿದರೆ ಮಾತ್ರ ಮರಣ ದಂಡನೆಯನ್ನು ತಪ್ಪಿಸಲು ಸಾಧ್ಯ.

TAGGED:Death penaltyindiakerala nursenimisha priyaYemenಕೇರಳ ನರ್ಸ್ನಿಮಿಷಾ ಪ್ರಿಯಾಭಾರತಮರಣದಂಡನೆಯೆಮನ್
Share This Article
Facebook Whatsapp Whatsapp Telegram

Cinema news

Dhurandhar Movie
ದುರಂಧರ್ ಚಿತ್ರ ಕಂಡು ಕಣ್ಣು ಕೆಂಪು ಮಾಡಿಕೊಂಡ ಪಾಕಿಸ್ತಾನ..ಏನ್ ಕಾರಣ?
Cinema Latest Top Stories
Premi Movie 2
`ಪ್ರೇಮಿ’ಗಾಗಿ ಮೊದಲ ಹಾಡು ಬಿಡುಗಡೆ
Cinema Latest Sandalwood
MB Khazima
ವಿಶ್ವ ಚಾಂಪಿಯನ್ ಖಾಜಿಮಾ ಬಯೋಪಿಕ್‌ಗೆ ಚಾಲನೆ
Cinema Latest Sandalwood South cinema Top Stories
Dhruva sarja
ರಂಗನತಿಟ್ಟು ಪಕ್ಷಿಧಾಮದ ಕಾರ್ಮಿಕರಿಗೆ ಧ್ರುವ ಸಹಾಯಹಸ್ತ – ರಿಯಲ್‌ ಹೀರೋ ಅಂದ್ರು ಫ್ಯಾನ್ಸ್‌
Cinema Latest Sandalwood Top Stories

You Might Also Like

DK Shivakumar 4
Bengaluru City

Video | ದೆಹಲಿಗೆ ಬಂದಿಳಿದ ಡಿಕೆಶಿ – ಸೋನಿಯಾ ಗಾಂಧಿ ಭೇಟಿ ಬಗ್ಗೆ ಗುಟ್ಟು ಬಿಟ್ಟುಕೊಡದ ಡಿಸಿಎಂ

Public TV
By Public TV
7 hours ago
New Year
Bengaluru City

ನ್ಯೂ ಇಯರ್‌ ಪಾರ್ಟಿಗೆ ಪಬ್‌ ಬುಕ್‌ ಮಾಡೋ ಮುನ್ನ ಎಚ್ಚರ – ಏಕೆ ಗೊತ್ತೇ?

Public TV
By Public TV
7 hours ago
Lionel Messi 2 1
Latest

ರಾಹುಲ್‌ ಗಾಂಧಿಗೆ ತನ್ನ ಜೆರ್ಸಿ ಗಿಫ್ಟ್‌ – ಸಿಎಂ ರೆಡ್ಡಿ ಜೊತೆ ಫುಟ್ಬಾಲ್ ಆಡಿದ ಮೆಸ್ಸಿ

Public TV
By Public TV
7 hours ago
Lionel Messi
Latest

1 ಗಂಟೆಯ ಕಾರ್ಯಕ್ರಮ, 22 ನಿಮಿಷಕ್ಕೆ ಮೆಸ್ಸಿ ಹೊರಟಿದ್ದೇಕೆ? – ಇಲ್ಲಿದೆ ಅಸಲಿ ಕಾರಣ

Public TV
By Public TV
8 hours ago
MB Patil
Bengaluru City

ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಎಂಬಿ ಪಾಟೀಲ್

Public TV
By Public TV
9 hours ago
UDF vs BJP
Latest

ತಿರುವನಂತಪುರಂ ಪಾಲಿಕೆಯಲ್ಲಿ ಬಿಜೆಪಿ ಕಮಾಲ್ – ಗ್ರಾಪಂ, ಬ್ಲಾಕ್‌, ಪುರಸಭೆಯಲ್ಲಿ ಯುಡಿಎಫ್‌ ಮೈತ್ರಿಕೂಟಕ್ಕೆ ದೊಡ್ಡ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?