ತಿರುವನಂತಪುರಂ: ಕೇರಳದ ಕಣ್ಣೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ADM) ನವೀನ್ ಬಾಬು (Naveen Babu) ತಮ್ಮ ಪಲ್ಲಿಕುನ್ನುನಲ್ಲಿರುವ ಮನೆಯಲ್ಲಿ ಮಂಗಳವಾರ (ಅ.15) ಶವವಾಗಿ ಪತ್ತೆಯಾಗಿದ್ದಾರೆ.
ತಮ್ಮ ತವರೂರು ಪತ್ತನಂತಿಟ್ಟದಲ್ಲಿ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಹಿಂದಿನ ದಿನ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆ – ಜನಜೀವನ ಅಸ್ತವ್ಯಸ್ತ, ಎಲ್ಲಿ ಏನಾಗಿದೆ?
- Advertisement -
- Advertisement -
ಘಟನೆಯ ಹಿಂದಿನ ದಿನ ಮೃತ ನವೀನ್ ಬಾಬು ಅವರಿಗೆ ಸಹೋದ್ಯೋಗಿಗಳು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಈ ವೇಳೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಹಾಗೂ ಸಿಪಿಎಂ ನಾಯಕಿ ಪಿಪಿ ದಿವ್ಯಾ (PP Divya) ಆಹ್ವಾನವಿಲ್ಲದೇ ದಿಢೀರ್ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
- Advertisement -
ಈ ವೇಳೆ ಮಾತನಾಡಿದ ದಿವ್ಯಾ, ನವೀನ್ ಬಾಬು ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಜೊತೆಗೆ ಹಲವು ತಿಂಗಳುಗಳಿಂದ ಚೆಂಗಲೈ ಪೆಟ್ರೋಲ್ ಪಂಪ್ಗೆ ಅನುಮತಿ ನೀಡಲು ಎಡಿಎಮ್ ಅವರು ವಿಳಂಬ ಮಾಡುತ್ತಿದ್ದಾರೆ ಎಂದು ಟೀಕಿಸಿ, ಬಹಿರಂಗವಾಗಿ ಮಾತನಾಡಿದ್ದರು.
- Advertisement -
ಎಡಿಎಮ್ ಅವರ ದಿಢೀರ್ ವರ್ಗಾವಣೆ ಹಿಂದಿನ ಕಾರಣ ನನಗೆ ಗೊತ್ತಿದೆ. ಎರಡು ದಿನಗಳ ನಂತರ ಇನ್ನುಳಿದ ಮಾಹಿತಿಯನ್ನು ನೀಡುತ್ತೇನೆ ಎಂದು ಸುಳಿವು ನೀಡಿದ್ದರು. ಇದಾದ ಮಾರನೇ ದಿನ ನೇಣು ಬಿಗಿದ ಸ್ಥಿತಿಯಲ್ಲಿ ನವೀನ್ ಬಾಬು ಅವರ ಶವವಾಗಿ ಪತ್ತೆಯಾಗಿದ್ದು, ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಸಿಪಿಎಂ ಸ್ಥಳೀಯ ಮುಖಂಡ ಮಲಯಾಳಪುಳ ಮೋಹನ್ ಸುದ್ದಿಗಾರರೊಂದಿಗೆ ಮಾತನಾಡಿ, ಬಾಬು ಅವರ ಕುಟುಂಬವು ಸಾಂಪ್ರದಾಯಿಕ ಕುಟುಂಬವಾಗಿದ್ದು, ಬಾಬು ಕುರಿತು ನನಗೆ ಬಹಳ ಹಿಂದಿನಿಂದಲೂ ತಿಳಿದಿದೆ. ಬಾಬು ಒಬ್ಬ ಪ್ರಾಮಾಣಿಕ ಅಧಿಕಾರಿಯಾಗಿದ್ದರು. ದಿವ್ಯಾ ಅವರ ಬಹಿರಂಗ ಟೀಕೆಯು ಬಾಬು ಅವರ ಸಾವಿಗೆ ಕಾರಣವಾಗಿದ್ದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ಇದನ್ನೂ ಓದಿ: ಸೈನ್ಯಕ್ಕೆ ಪ್ರಬಲ ಅಸ್ತ್ರ – ಅಮೆರಿಕದ MQ-9B ಪ್ರಿಡೆಟರ್ ಡ್ರೋನ್ ಒಪ್ಪಂದಕ್ಕೆ ಸಹಿ ಹಾಕಿದ ಭಾರತ
ಸದ್ಯ ಈ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ.