ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಕೇರಳ ಪೊಲೀಸ್

Public TV
1 Min Read
SHOBHA 2

ತಿರುವನಂತಪುರಂ: ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವ ಹೇಳಿಕೆ ನೀಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶೋಭಾ ಕರಂದ್ಲಾಜೆ ಅವರು, ಕೇರಳ ದೇಶದ ಮತ್ತೊಂದು ಕಾಶ್ಮೀರ ಆಗಲು ಹೊರಟಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿದ ಮಲಪ್ಪುರಂನ ಕುಟ್ಟಿಪುರಂ ಪಂಚಾಯತ್‍ನ ಹಿಂದೂಗಳಿಗೆ ನೀರು ಸರಬರಾಜು ನಿರಾಕರಿಸಲಾಗಿದೆ. ಈ ಪ್ರದೇಶದಲ್ಲಿ ಸೇವಾ ಭಾರತಿ ನೀರು ಸರಬರಾಜು ಮಾಡುತ್ತಿದೆ ಎಂದು ಜನವರಿ 22ರಂದು ಟ್ವೀಟ್ ಮಾಡಿದ್ದರು.

https://twitter.com/ShobhaBJP/status/1220006329768538112

ಈ ಟ್ವೀಟ್ ಆಧರಿಸಿ ಕೇರಳ ಪೊಲೀಸರು ಶೋಭಾ ಕರಂದ್ಲಾಜೆ ಅವರ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ ಆಧಾರದವಾಗಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *