ಕನ್ನಡದ ಪ್ರತಿಭಾವಂತ ಹಾಸ್ಯ ನಟ ಕೋಮಲ್ ಮತ್ತೆ ಸಿನಿಮಾ ರಂಗಕ್ಕೆ ಕಮ್ ಬ್ಯಾಕ್ ಆಗುತ್ತಿದ್ದಾರೆ. ಕೆಂಪೇಗೌಡ ಸಿನಿಮಾದ ನಂತರ ಸಂಪೂರ್ಣವಾಗಿ ಅವರು ಸಿನಿಮಾ ರಂಗದಿಂದಲೇ ದೂರ ಉಳಿದಿದ್ದರು. ಕಳೆದ ಆರೇಳು ವರ್ಷಗಳಿಂದ ಸಿನಿಮಾಗಳು ಹಿಟ್ ಆಗದೇ ಇದ್ದರೂ, ಸಿನಿಮಾವಂತ ಮಾಡುತ್ತಿದ್ದರು. ಆದರೆ, ಕಳೆದ ನಾಲ್ಕೈದು ವರ್ಷಗಳಿಂದ ಸಿನಿಮಾದಲ್ಲಿ ನಟಿಸುವುದನ್ನೇ ಬಿಟ್ಟಿದ್ದರು.
ಬೇಡಿಕೆ ಇರುವಾಗ ಕೋಮಲ್ ಯಾಕೆ ಮನೆಯಲ್ಲಿ ಕೂತಿದ್ದಾರೆ ಎನ್ನುವ ಪ್ರಶ್ನೆ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಕೋಮಲ್ ಅವರಿಗೆ ಕೇತುದೆಸೆ ಇತ್ತಂತೆ. ಹಾಗಾಗಿ ಸಿನಿಮಾದಲ್ಲಿ ನಟಿಸಬೇಡ ಎಂದು ಸ್ವತಃ ಜಗ್ಗೇಶ್ ಅವರೇ ಹೇಳಿದ್ದರಂತೆ. ಸಹೋದರನ ಮಾತಿಗೆ ಒಪ್ಪಿಗೆ ಸೂಚಿಸಿ ಸಿನಿಮಾ ಮಾಡಲಿಲ್ಲವಂತೆ ಕೋಮಲ್. ಈ ಮಾಹಿತಿಯನ್ನು ಜಗ್ಗೇಶ್ ಅವರೇ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ʻಸಿಂಧೂರ ಲಕ್ಷ್ಮಣʼನಾಗಿ ಬರಲಿದ್ದಾರೆ ನಟ ಧನಂಜಯ
‘ಕೋಮಲ್ ಗೆ ಕೇತುದೆಸೆ ಇತ್ತು. ಈ ವೇಳೆಯಲ್ಲಿ ಏನೇ ಕೆಲಸ ಮಾಡಿದರೂ, ಅದರಲ್ಲಿ ಯಶಸ್ಸು ಕಾಣುವುದಿಲ್ಲೆ ಎನ್ನುವುದು ಗೊತ್ತಿತ್ತು. ಹಾಗಾಗಿ ನಾನೇ ಸಿನಿಮಾ ಮಾಡಬೇಡ ಅಂತ ಕೋಮಲ್ ಗೆ ಹೇಳಿದ್ದೆ. ಇದೀಗ ಕೇತುದೆಸೆ ಕಳೆದಿದೆ. ಇನ್ಮುಂದೆ ಕೋಮಲ್ ಸಿನಿಮಾಗಳು ಹಿಟ್ ಆಗುತ್ತವೆ. ಸಿನಿಮಾ ರಂಗದಲ್ಲಿ ಮತ್ತೆ ಕೋಮಲ್ ಅಗಾಧವಾಗಿ ಬೆಳೆಯುತ್ತಾರೆ ಎಂದು ತಮ್ಮನ ಬಗ್ಗೆ ಮಾತನಾಡಿದರು ಜಗ್ಗೇಶ್.
ಕೋಮಲ್ ಮತ್ತೆ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿರುವುದು ಸಹಜವಾಗಿಯೇ ಅಭಿಮಾನಿಗಳಿಗೆ ಖುಷಿ ಆಗಿದೆ. ಅಲ್ಲದೇ, ಕೋಮಲ್ ನಟನೆಯ ನಮೋ ಭೂತಾತ್ಮ ಸಿನಿಮಾ ಭಾಗ 2 ಆಗಿ ಮೂಡಿ ಬರಲಿದೆಯಂತೆ. ಅಲ್ಲದೇ, ಕೋಮಲ್ ಗೆ ಸಿನಿಮಾ ಮಾಡಲು ಅನೇಕರು ತುದಿಗಾಲಲ್ಲಿ ನಿಂತಿದ್ದಾರೆ. ಕೋಮಲ್ ಮತ್ತೆ ಸಿನಿಮಾ ರಂಗದಲ್ಲಿ ಬ್ಯುಸಿ ಆಗುವುದರಲ್ಲಿ ಅನುಮಾನವಿಲ್ಲ ಅಂತಾರೆ ಜಗ್ಗೇಶ್.