Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೃತಿ-ಸರ್ಜಾ ರೆಬಲ್ ಸಂಧಾನ ಸೂತ್ರ: ಫಿಲ್ಮ್ ಚೇಂಬರ್ ಇನ್ ಸೈಡ್ ಸ್ಟೋರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಶೃತಿ-ಸರ್ಜಾ ರೆಬಲ್ ಸಂಧಾನ ಸೂತ್ರ: ಫಿಲ್ಮ್ ಚೇಂಬರ್ ಇನ್ ಸೈಡ್ ಸ್ಟೋರಿ

Cinema

ಶೃತಿ-ಸರ್ಜಾ ರೆಬಲ್ ಸಂಧಾನ ಸೂತ್ರ: ಫಿಲ್ಮ್ ಚೇಂಬರ್ ಇನ್ ಸೈಡ್ ಸ್ಟೋರಿ

Public TV
Last updated: October 25, 2018 7:44 pm
Public TV
Share
4 Min Read
Shruthi Hariharan Shruthi Hariharan
SHARE

ಬೆಂಗಳೂರು: ಕಳೆದ ಒಂದು ವಾರದಿಂದ ಸ್ಯಾಂಡಲ್‍ವುಡ್ ನಲ್ಲಿ ಮೀಟೂ ಆರೋಪ ಸಂಚಲನ ಮೂಡಿಸಿದೆ. ಶೃತಿ ಹರಿಹರನ್ ವಿಸ್ಮಯ ಚಿತ್ರದ ಚಿತ್ರೀಕರಣದ ವೇಳೆ ನಟ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಮೀಟೂ ವೇದಿಕೆಯಲ್ಲಿ ಹೇಳಿಕೊಂಡಿದ್ದರು. ಶೃತಿ ಆರೋಪ ಮಾಡುತ್ತಿದ್ದಂತೆ ಕೆಲ ಸಂಘಟನೆಗಳು, ನಟರು, ಕಲಾವಿದರು ನಟಿಯ ಪರ ನಿಂತರೆ, ಬಹುತೇಕ ಹಿರಿಯ ಕಲಾವಿದರು ಅರ್ಜುನ್ ಸರ್ಜಾ ಪರ ಬ್ಯಾಟ್ ಬೀಸಿದ್ದರು. ಇತ್ತ ಅರ್ಜುನ್ ಸರ್ಜಾ ವಿರುದ್ಧ ದೂರು ಕೇಳಿ ಬರುತ್ತಿದ್ದಂತೆ ಮಾವ, ಹಿರಿಯ ನಟ ಕಲಾ ತಪಸ್ವಿ ರಾಜೇಶ್ ಫಿಲ್ಮ್ ಚೇಂಬರ್ ನಲ್ಲಿ ದೂರು ದಾಖಲಿಸಿದ್ದರು.

ದೂರು ದಾಖಲಾದ ಬಳಿಕ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಚಲನಚಿತ್ರ ಮಂಡಳಿ ಸಹ ಶೃತಿ ಹರಿಹರನ್ ನೇರವಾಗಿ ಮಾಧ್ಯಮಗಳ ಮುಂದೆ ಹೋಗಬಾರದಿತ್ತು ಎಂದು ಅಸಮಾಧಾನ ಹೊರಹಾಕಿತ್ತು. ಆದ್ರೆ ರೆಬೆಲ್ ಸ್ಟಾರ್ ಅಂಬರೀಶ್ ಪ್ರವಾಸದಲ್ಲಿದ್ದರಿಂದ ಇಂದು ಸಂಧಾನ ಸಭೆಯನ್ನು ಮುಂದೂಡಿದ್ದರು. ಇಂದು ಸಂಜೆ ಫಿಲ್ಮ್ ಚೇಂಬರ್ ನಲ್ಲಿ ಶೃತಿ ಹರಿಹರನ್ ಮತ್ತು ಅರ್ಜುನ್ ಸರ್ಜಾ ಮಧ್ಯೆ ಸಂಧಾನ ಸಭೆ ಅಂಬರೀಶ್ ನೇತೃತವದಲ್ಲಿ ನಡೆದಿದೆ. ಹಾಗಾದ್ರೆ ಸಭೆಯಲ್ಲಿ ಏನು? ಏನಾಯ್ತು? ಇಲ್ಲಿದೆ ಇನ್ ಸೈಡ್ ಸ್ಟೋರಿ

KFCC

ಅಂಬರೀಶ್: ನಿಮ್ಮ ಅಭಿಪ್ರಾಯವನ್ನು ಮುಕ್ತವಾಗಿ ಮಾತನಾಡಿ. ನಿಮಗೇ ನ್ಯಾಯ ಸಿಗುವ ಭರವಸೆ ನೀಡುತ್ತೇವೆ. ನಮ್ಮಿಂದ ಯಾರಿಗೂ ಅನ್ಯಾಯ ಆಗಿಲ್ಲ, ಗಂಡು ಹೆಣ್ಣು ಅಂತ ನೋಡಲ್ಲ. ಆದರೆ ನೀವು ಮಾಧ್ಯಮಗಳ ಮುಂದೇ ಹೋಗಿದ್ದು ತಪ್ಪು.

ಶೃತಿ: ಆ ವೇಳೆ ನನಗೆ ಆಗ ಏನು ಮಾಡಬೇಕು ಎಂದು ತಿಳಿಯಲಿಲ್ಲ. ಅದ್ದರಿಂದ ಹಾಗೆ ಮಾಡಿದೆ. ಈಗ ನಿಮ್ಮ ಮುಂದೇ ಬಂದಿದ್ದೇನೆ, ನ್ಯಾಯ ಸಿಗುವಂತೆ ಮಾಡಿ

ಅಂಬರೀಶ್: ಆದರೆ ಈ ಮಾತಿಗೆ ಸಮಾಧಾನ ವ್ಯಕ್ತಪಡಿಸಿದ ಅಂಬರೀಶ್ ಅವರು ನೀನು ಚಿಕ್ಕ ಹುಡುಗಿ ಅಲ್ಲ. ನಿಮ್ಮ ಈ ರೀತಿಯ ನಡೆಗಳಿಂದ ಇಡೀ ಚಿತ್ರರಂಗದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ನೀವು ಮೊದಲೇ ಇಲ್ಲಿಗೆ ಬಂದಿದ್ದರೆ ಇಷ್ಟು ಸಮಸ್ಯೆ ಆಗುತ್ತಿರಲಿಲ್ಲ. ಆದರೆ ನಿಮ್ಮ ಹಠವನ್ನು ಬಿಡುವುದು ಒಳ್ಳೆಯದು ಎಂದು ಸಲಹೆ ನೀಡದರು.

KFCC 1

ಸರ್ಜಾ ತಿರುಗೇಟು: `ವಿಸ್ಮಯ’ ಕುರಿತು ಹೇಳಿಕೆ ನೀಡುವ ವೇಳೆ ಮಧ್ಯ ಪ್ರವೇಶ ಮಾಡಿದ ನಟ ಅರ್ಜುನ ಸರ್ಜಾ ಅವರು, ಸಿನಿಮಾ ವೇಳೆ ನಾನು ಯಾವುದೇ ರೀತಿ ಕೆಟ್ಟದಾಗಿ ವರ್ತನೆ ಮಾಡಿಲ್ಲ. ಅಲ್ಲದೇ ಯಾವುದೇ ಡಿನ್ನರ್, ಹೋಟೆಲ್, ರೆಸಾರ್ಟ್, ರೂಮ್‍ಗೆ ಕರೆದಿಲ್ಲ. 35 ವರ್ಷದಿಂದ ಚಿತ್ರರಂಗದಲ್ಲಿ ಇದ್ದು, ಒಂದು ಕಪ್ಪು ಚುಕ್ಕೆ ನನ್ನ ಮೇಲಿಲ್ಲ. ಆದರೆ ಇಂದು ಇವರು ಮಾಡಿರುವ ಆರೋಪದಿಂದ ನನಗೂ, ನನ್ನ ಕುಟುಂಬಸ್ಥರಿಗೂ ಸಾಕಷ್ಟು ನೋವಾಗಿದೆ. ಈ ವೇಳೆ ಶೃತಿ ಅವರಿಗೆ ಮಾತನಾಡಲು ಅವಕಾಶ ನೀಡುವಂತೆ ಅಂಬರೀಶ್ ತಡೆದಿದ್ದರು.

ನನಗೆ ಎಷ್ಟು ನೋವಾಗಿದೆ ಎಂದು ನನಗೆ ಮಾತ್ರ ಗೊತ್ತು. 5 ಭಾಷೆಗಳಲ್ಲಿ ನಟನೆ ಮಾಡಿದ್ದೇನೆ. ಹಿರಿಯ ನಟರೊಂದಿಗೆ ಅಭಿನಯ ಮಾಡಿದ್ದೇನೆ. ಯಾರು ಈ ಕುರಿತು ಒಂದು ಮಾತು ಕೆಟ್ಟದಾಗಿ ಮಾತನಾಡಿಲ್ಲ. ಆದರೆ ಇವರು ಇಲ್ಲದ ಆರೋಪ ಮಾಡಿ ನನ್ನ ಹೆಸರಿಗೆ ಧಕ್ಕೆ ತಂದಿದ್ದಾರೆ.

KFCC 3

ಶೃತಿ: ಧ್ರುವ ಸರ್ಜಾ ನಟ ಚೇತನ್ ವಿರುದ್ಧ ನಾಯಿ, ಕ್ರಿಮಿ ಕೀಟ ಎಂದು ಹೇಳಿಕೆ ನೀಡಿದ್ದನ್ನು ಪ್ರಸ್ತಾಪಿಸಿದ ಅವರು, ನನ್ನ ಪರ ನಿಂತ ತಪ್ಪಿಗಾಗಿ ಅವರ ಮೇಲೆ ಈ ರೀತಿ ಹೇಳಿಕೆ ನೀಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಂಬರೀಶ್ ಅವರು, ಯುವಕ ಏನೋ ಮಾತನಾಡಿದ್ದಾನೆ ಅದನ್ನು ಸುಮ್ಮನೆ ಅಲ್ಲಿಗೆ ಬಿಟ್ಟರೆ ಒಳ್ಳೆಯದು ಎಂದು ಸುಮ್ಮನಾಗಿಸಿದರು.

ನನ್ನ ಬಳಿ ಇವರು ಕೆಟ್ಟದಾಗಿ ನಡೆದುಕೊಂಡ ಬಗ್ಗೆ ಸಾಕ್ಷಿ ಇದೆ. ಕಾನೂನು ಮೂಲಕವೇ ಹೋರಾಟ ಮಾಡುತ್ತೇನೆ ಎಂದು ಶೃತಿ ಹರಿಹರನ್ ಹೇಳಿದ್ದು, ಈ ಮಾತಿಗೆ ಪ್ರತಿಕ್ರಿಯೆ ನೀಡಿದ ಅರ್ಜುನ್ ಸರ್ಜಾ ಅವರು ಇವರ ಆರೋಪ ರಹಿತ ಹೇಳಿಕೆ ಇಂದ ನನಗೆ ಸಾಕಷ್ಟು ತೊಂದರೆ ಆಗಿದೆ. ಬಹಿರಂಗ ಕ್ಷಮೆ ಕೇಳಲೇಬೇಕು. ಇಲ್ಲವಾದರೆ ಕೋರ್ಟ್ ನಲ್ಲೇ ಕಾನೂನು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದರು. ಬಳಿಕ ಇಬ್ಬರ ಹೇಳಿಕೆ ಪ್ರತ್ಯೇಕವಾಗಿ ಪಡೆಯಲು ಹಿರಿಯ ಮುಖಂಡರು ತೀರ್ಮಾನಿಸಿ ಬೇರೆ ಬೇರೆ ಹೇಳಿಕೆ ಪಡೆಯಲು ಮುಂದಾದರು.

KFCC 2

ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್ ನಡುವಿನ ವಿವಾದ ಚಿತ್ರರಂಗದ ಹಿರಿಯ ನಡುವೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಕನ್ನಡ ಚಿತ್ರರಂಗದ ಪ್ರಮುಖ ನಿರ್ಮಾಪಕ, ನಿರ್ದೇಶಕರಾದರು ಭಾಗವಹಿಸಿದ್ದರು. ಕೆ ಮುಂಜು, ಹಿರಿಯ ನಟ ಲೋಕನಾಥ್, ನಿರ್ಮಾಪಕ ಟೇಶಿ ವೆಂಕಟೇಶ್, ನಿರ್ಮಾಪಕ ಸುರೇಶ್, ನಿರ್ಮಾಪಕ ಉಮೇಶ್ ಬಣಕರ್, ಮಾಜಿ ಅಧ್ಯಕ್ಷ ಥಾಮಸ್ ಡಿ ಸೋಜಾ, ನಿರ್ಮಾಪಕ ಗಿರೀಶ್, ಕಲಾವಿದರ ಸಂಘದ ದೊಡ್ಡಣ್ಣ, ನಿರ್ಮಾಪಕರದ ರಾಕ್‍ಲೈನ್ ವೆಂಕಟೇಶ ಅವರು ಭಾಗವಹಿಸಿದ್ದರು. ಅಲ್ಲದೇ ನಟಿಯಾರದ ಪೂಜಾಗಾಂಧಿ, ಪ್ರಮೀಳಾ ಜೊಷಾಯ್, ರೂಪ ಅಯ್ಯರ್ ಸೇರಿದಂತೆ ಶೃತಿ ಅವರೊಂದಿಗೆ ಕವಿತಾ ಲಂಕೇಶ್ ಆಗಮಿಸಿದ್ದರು. ಅರ್ಜುನ್ ಸರ್ಜಾ ಅವರೊಂದಿಗೆ ಅವರ ಮಾವ, ನಟ ರಾಜೇಶ್ ಹಾಗೂ ಧ್ರುವ ಸರ್ಜಾ ಆಗಮಿಸಿದ್ದರು.

shruthi hariharan 2

ಸಭೆಗೂ ಮುನ್ನವೇ ನಟಿ ಶೃತಿ ಹರಿಹರನ್ ಸಭೆಯನ್ನು ಸಂಧಾನ ಸಭೆ ಅಲ್ಲ. ಸಂಧಾನ ಮಾಡಿಕೊಳ್ಳುವ ಕುರಿತು ಯಾವುದೇ ಯೋಚನೆ ಇಲ್ಲ. ನ್ಯಾಯಾಲಯದ ಮೂಲಕವೇ ಈ ಕುರಿತು ಹೋರಾಟ ನಡೆಸುವುದಾಗಿ ತಿಳಿಸಿದ್ದರು. ಅಲ್ಲದೇ ವಾಣಿಜ್ಯ ಮಂಡಳಿಯ ಕೆ. ಮಂಜು ಅವರು ಸ್ಪಷ್ಟನೆ ನೀಡಿ ಸದ್ಯ ನಡೆಯುತ್ತಿರುವ ಸಭೆ ಕೇವಲ ವಿಚಾರಣೆ ಸಭೆ ಅಷ್ಟೇ. ರಾಜೇಶ್ ಅವರು ವಾಣಿಜ್ಯ ಮಂಡಳಿಗೆ ನೀಡಿದ್ದ ದೂರಿನ ಅನ್ವಯ ವಿಚಾರಣೆ ನಡೆಯುತ್ತದೆ ಎಂದು ತಿಳಿಸಿದ್ದರು.

ಶೃತಿ ಹರಿಹರನ್ ಆರೋಪಕ್ಕೆ ಈಗಾಗಲೇ ಕಾನೂನು ಹೋರಾಟ ಮಾಡಿರುವ ನಟ ಅರ್ಜುನ್ ಸರ್ಜಾ ಅವರು ದೂರು ನೀಡಿದ್ದು, 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಅಲ್ಲದೇ ಸೈಬರ್ ಕ್ರೈಂ ಗೂ ದೂರು ನೀಡಿದ್ದು, ತಮ್ಮ ಇಮೇಲ್ ಹ್ಯಾಕ್ ಮಾಡಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಈ ದೂರಿನಲ್ಲಿ ಪ್ರಮುಖವಾಗಿ ಅನಾಮಿಕ ವ್ಯಕ್ತಿಯೊಬ್ಬ ಶ್ರುತಿ ಅವರ ಆರೋಪ ತಣ್ಣಗಾಗುವಂತೆ ಮಾಡಲು 1.5 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ದೂರು ನೀಡಿದ್ದಾರೆ.

Sruthi Arjun 1 1024x442 1

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=vAyM2M2dcHY

TAGGED:Arjun SarjaMeTooPublic TVrebel star ambarishsandalwoodShruthi Hariharanಅರ್ಜುನ್ ಸರ್ಜಾಪಬ್ಲಿಕ್ ಟಿವಿಮೀಟೂರೆಬೆಲ್ ಸ್ಟಾರ್ ಅಂಬರೀಶ್ಶೃತಿ ಹರಿಹರನ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

31 Karnataka Congress MLAs Write To High Command Demanding Cabinet Expansion Letter Goes Viral
Bengaluru City

ಕುರ್ಚಿ ಕದನದ ಮಧ್ಯೆ ಹೊಸಬರಿಗೆ ಮಂತ್ರಿ ಸ್ಥಾನಕ್ಕೆ ಬೇಡಿಕೆ – ಪತ್ರ ಬರೆದ 31 ಶಾಸಕರು ಯಾರು?

Public TV
By Public TV
11 minutes ago
Siddaramaiah Chikkaballapura MGNREGA Programme
Districts

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ

Public TV
By Public TV
15 minutes ago
Ranaji Final
Cricket

ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

Public TV
By Public TV
53 minutes ago
Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

Public TV
By Public TV
2 hours ago
Eshwar Khandre
Bengaluru City

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?