Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಜಿಎಫ್‌ 2 ಹಾಡು ಬಳಕೆ – ಕಾಂಗ್ರೆಸ್‌ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ ಎಂಆರ್‌ಟಿ ಮ್ಯೂಸಿಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಜಿಎಫ್‌ 2 ಹಾಡು ಬಳಕೆ – ಕಾಂಗ್ರೆಸ್‌ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ ಎಂಆರ್‌ಟಿ ಮ್ಯೂಸಿಕ್‌

Bengaluru City

ಕೆಜಿಎಫ್‌ 2 ಹಾಡು ಬಳಕೆ – ಕಾಂಗ್ರೆಸ್‌ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ ಎಂಆರ್‌ಟಿ ಮ್ಯೂಸಿಕ್‌

Public TV
Last updated: December 2, 2022 7:05 pm
Public TV
Share
3 Min Read
Bharat Jodo Yatra 1 3
SHARE

ಬೆಂಗಳೂರು: ಕಾಂಗ್ರೆಸ್‌(Congress) ವಿರುದ್ಧ ಎಂಆರ್‌ಟಿ ಮ್ಯೂಸಿಕ್‌(MRT Music) ನ್ಯಾಯಾಂಗ ನಿಂದನೆ(Contempt of Court ) ಅರ್ಜಿ ಸಲ್ಲಿಸಿದ್ದು ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಈ ಹಿಂದೆ ಹೈಕೋರ್ಟ್‌ನಲ್ಲಿ(High Court) ನಡೆದ ವಿಚಾರಣೆ ವೇಳೆ ಕೆಜಿಎಫ್ ಚಾಪ್ಟರ್‌ 2(KGF 2) ಸಿನಿಮಾದ ಹಾಡು ತೆಗೆಯುತ್ತೇವೆಂದು ಕಾಂಗ್ರೆಸ್‌ ಮುಚ್ಚಳಿಕೆ ನೀಡಿತ್ತು. ಆದರೆ ಈ ಹಾಡನ್ನು ಇನ್ನೂ ತೆಗೆದಿಲ್ಲ ಎಂದು ಆರೋಪಿಸಿ ಎಂಆರ್‌ಟಿ ಮ್ಯೂಸಿಕ್‌ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ.

ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ದ್ವಿಸದಸ್ಯ ಪೀಠ ರಾಹುಲ್ ಗಾಂಧಿ (Rahul Gandhi), ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ (Supriya) ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್(Jairam Ramesh) ಅವರಿಗೆ ನೋಟಿಸ್‌ ಜಾರಿ ಮಾಡಿದೆ.  ಅರ್ಜಿಯ ಮುಂದಿನ ವಿಚಾರಣೆ  ಜನವರಿ 12ಕ್ಕೆ ನಡೆಯಲಿದೆ.

kgf 2

ಏನಿದು ಪ್ರಕರಣ?:
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಸಂಸ್ಥೆಯ ಅನುಮತಿ ಇಲ್ಲದೇ ಕೆಜಿಎಫ್‌ ಹಾಡನ್ನು ಭಾರತ್‌ ಜೋಡೋ ಯಾತ್ರೆಯಲ್ಲಿ ಬಳಸಿದೆ. ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ ಕೆಜಿಎಫ್ ಚಿತ್ರದ ಹಾಡುಗಳ ಪ್ರಸಾರ ಹಕ್ಕು ಹೊಂದಿರುವ ಎಂಆರ್‌ಟಿ ಸಂಸ್ಥೆಯು ರಾಹುಲ್ ಗಾಂಧಿ, ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ, ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ ವಿರುದ್ಧ ದೂರು ದಾಖಲಿಸಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ (FIR) ದಾಖಲಾಗಿತ್ತು.

ಕೆಜಿಎಫ್‌ ಹಾಡನ್ನು ಕಾಗ್ರೆಸ್ ಪಕ್ಷದ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಾದ ಟ್ಟಿಟ್ಟರ್‌, ಯೂಟ್ಯೂಬ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬಳಸಲಾಗಿದೆ. ನಮ್ಮ ಸಂಸ್ಥೆಯ ಅನುಮತಿ ಪಡೆಯದೇ ಕಾಪಿರೈಟ್‌ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಸಂಸ್ಥೆ ಬಳಿಕ ಕೋರ್ಟ್‌ ಮೊರೆ ಹೋಗಿತ್ತು. ದೂರಿನ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮತ್ತು ಭಾರತ್‌ ಜೋಡೋ ಯಾತ್ರೆಯ ಖಾತೆಯನ್ನು ತಾತ್ಕಾಲಿಕವಾಗಿ ಅಮಾನತು ಮಾಡುವಂತೆ ಟ್ವಿಟ್ಟರ್‌ ಕಂಪನಿಗೆ ಬೆಂಗಳೂರು ನಗರ ಜಿಲ್ಲಾ ವಾಣಿಜ್ಯ ಕೋರ್ಟ್‌ ಆದೇಶಿಸಿತ್ತು.

Bharat Jodo Yatra 3

ಈ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್‌ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ನ.8 ರಂದು ನ್ಯಾ. ಜಿ. ನರೇಂದರ್‌ ಮತ್ತು ನ್ಯಾ.ಪಿಎನ್‌ ದೇಸಾಯಿ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ನಡೆದ ಅರ್ಜಿಯ ವಿಚಾರಣೆ ವೇಳೆ ಕಾಂಗ್ರೆಸ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ, ನಮ್ಮ ಪ್ರತಿವಾದಿಗಳು ಸಂಪೂರ್ಣ ಟ್ವಿಟ್ಟರ್‌ ಖಾತೆಯನ್ನು ತೆಗೆದು ಹಾಕುವಂತೆ ಕೋರಿದ್ದಾರೆ. ಆದರೆ 45 ಸೆಕೆಂಡಿನ ಆಡಿಯೋದಲ್ಲಿ ಮಾತ್ರ ಮ್ಯೂಸಿಕ್‌ ಬಳಕೆ ಮಾಡಲಾಗಿದೆ. ಮ್ಯೂಸಿಕ್‌ ಬಳಸಿ ನಾವು ತಪ್ಪು ಮಾಡಿದ್ದೇವೆ. ಕೆಜಿಎಫ್‌ ಮ್ಯೂಸಿಕ್‌ ಎಲ್ಲೆಲ್ಲಿ ಬಳಕೆ ಮಾಡಲಾಗಿದೆಯೋ ಅವೆಲ್ಲವನ್ನು ತೆಗೆದು ಹಾಕುತ್ತೇವೆ ಎಂದು ಮನವಿ ಮಾಡಿದ್ದರು.

ತನ್ನ ತಪ್ಪನ್ನು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಕೆಜಿಎಫ್‌ ಹಾಡನ್ನು ಬಳಕೆ ಮಾಡಿದ್ದ ಟ್ವೀಟ್‌ಗಳನ್ನು(Tweet) ತೆಗೆದು ಹಾಕಬೇಕೆಂದು ಹೈಕೋರ್ಟ್‌ ಕಾಂಗ್ರೆಸ್‌ಗೆ ಆದೇಶ ನೀಡಿ ಕೆಳ ನ್ಯಾಯಾಲಯ ನೀಡಿದ ಆದೇಶವನ್ನು ರದ್ದುಗೊಳಿಸಿತ್ತು.

Bharat Jodo Yatra 3

ದೂರುದಾರರು ಸಂಪೂರ್ಣ ಖಾತೆಯನ್ನು ತೆಗೆದು ಹಾಕುವಂತೆ ಕೋರಿದ್ದಾರೆ. ಇಲ್ಲಿ ಪ್ರತಿವಾದಿಯವರಿಗೆ ರಾಜಕೀಯ ಕುಮ್ಮಕ್ಕು ಇದೆಯೇ ಹೊರತು ಬೇರೆ ಯಾವುದೇ ಉದ್ದೇಶ ಇಲ್ಲ. ನಾವು ತಪ್ಪು ಮಾಡಿದ್ದೇವೆ. ಆದರೆ ಇದರಲ್ಲಿ ಯಾವುದೇ ವಾಣಿಜ್ಯ ಉದ್ದೇಶ ಇಲ್ಲ. ನಮ್ಮ ಅಭಿಪ್ರಾಯವನ್ನು ಆಲಿಸದೇ ಕೆಳ ನ್ಯಾಯಾಲಯ ಈ ರೀತಿಯ ಆದೇಶ ನೀಡಿದ್ದು ಎಷ್ಟು ಸರಿ? ದೇಶದ ದೊಡ್ಡ ರಾಜಕೀಯ ಪಕ್ಷದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವ್ಯಕ್ತಪಡಿಸುವ ಸಾಮಾಜಿಕ ಮಾಧ್ಯಮ ಧಮನಿಸುವುದಕ್ಕೆ ಕೋರ್ಟ್‌ ಅನುಮತಿ ನೀಡಬಾರದು ಎಂದು ಸಿಂಘ್ವಿ ಮನವಿ ಮಾಡಿದ್ದರು.

ಈ ವೇಳೆ ಎಂಆರ್‌ಟಿ ಸ್ಟುಡಿಯೋ ಪರ ವಕೀಲರಿಗೆ, ಈ ಪ್ರಕರಣದಲ್ಲಿ ಕಾಂಗ್ರೆಸ್‌ ಟ್ವಿಟ್ಟರ್‌ ಖಾತೆಯನ್ನು ತನಿಖೆ ಯಾಕೆ ಮಾಡಬೇಕು? ಆಯುಕ್ತರನ್ನು ಯಾಕೆ ನೇಮಿಸಬೇಕು? ಅವರು ತಪ್ಪನ್ನು ಒಪ್ಪಿಕೊಂಡಿದ್ದಾರೆ. ತಪ್ಪನ್ನು ಒಪ್ಪಿಕೊಂಡ ಮೇಲೆ ತನಿಖೆ ಯಾಕೆ ಎಂದು ಪ್ರಶ್ನಿಸಿತು.

ಅಭಿಷೇಕ್‌ ಮನು ಸಿಂಘ್ವಿ, ನ.9ರ ಮಧ್ಯಾಹ್ನ 2 ಗಂಟೆಯ ಒಳಗಡೆ ಎಲ್ಲೆಲ್ಲಿ ಮ್ಯೂಸಿಕ್‌ ಬಳಕೆ ಮಾಡಿದ್ದೇವೋ ಅವುಗಳನ್ನು ತೆಗೆದು ಹಾಕುತ್ತೇವೆ. ಅರ್ಜಿದಾರ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಗೆ ದಾಖಲೆ ನೀಡುತ್ತೇವೆ ಎಂದು ತಿಳಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ ಕಾಪಿರೈಟ್‌ ಉಲ್ಲಂಘನೆ ಮಾಡಿದ ಎಲ್ಲಾ ಟ್ವೀಟ್‌ಗಳನ್ನು ತೆಗೆದು ಹಾಕುವಂತೆ ಆದೇಶಿಸಿತ್ತು.

Live Tv
[brid partner=56869869 player=32851 video=960834 autoplay=true]

TAGGED:congressKGF chapter 2Rahul Gandhiಎಂಆರ್‌ಟಿಕಾಂಗ್ರೆಸ್ಕಾಪಿರೈಟ್‌ಕೆಜಿಎಫ್ನ್ಯಾಯಾಂಗ ನಿಂದನೆಮ್ಯೂಸಿಕ್ಹೈಕೋರ್ಟ್
Share This Article
Facebook Whatsapp Whatsapp Telegram

Cinema news

Rashmika Mandanna Srilanka Trip
2 ದಿನ ರಜೆ ಸಿಕ್ತು ಅಂತ ರಶ್ಮಿಕಾ ಹೋಗಿದ್ದೆಲ್ಲಿಗೆ..?
Cinema Latest Top Stories
Shilpa shetty 2
ಬೆಂಗಳೂರಿನಲ್ಲಿರೋ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ ಮೇಲೆ ಐಟಿ ದಾಳಿ
Bengaluru City Bollywood Districts Karnataka Latest Main Post
sri murali 2
42ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ
Cinema Latest Sandalwood
Raj B Shetty Rishab Rakshit
ರಿಷಬ್, ನಾನು, ರಕ್ಷಿತ್ ಒಟ್ಟಿಗೆ ಸಿನಿಮಾ ಮಾಡ್ತೀವಿ : ರಾಜ್ ಬಿ ಶೆಟ್ಟಿ
Cinema Latest Sandalwood Top Stories

You Might Also Like

Mallikarjun Kharge 2
Latest

ಪ್ರಧಾನಿ ಮೋದಿ, ಅಮಿತ್‌ ಶಾ ರಾಜೀನಾಮೆ ನೀಡಲಿ: ಖರ್ಗೆ ಒತ್ತಾಯ

Public TV
By Public TV
17 minutes ago
Lakshmi Hebbalkar
Belgaum

2 ತಿಂಗಳ ಗೃಹಲಕ್ಷ್ಮಿ ಹಣ ಬಾಕಿಯಿದೆ – ʻಪಬ್ಲಿಕ್‌ ಟಿವಿʼ ವರದಿ ಬಳಿಕ ಸತ್ಯ ಒಪ್ಪಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್‌

Public TV
By Public TV
18 minutes ago
rowdy sheeter mangaluru
Crime

ಮಂಗಳೂರು| ಎಸ್ಕೇಪ್‌ ಆಗುತ್ತಿದ್ದ ರೌಡಿಶೀಟರ್‌ನ ಚೇಸ್‌ ಮಾಡಿ ಹಿಡಿದ ಪೊಲೀಸರು

Public TV
By Public TV
59 minutes ago
Ramamurthy Nagar Police Station
Bengaluru City

Chinni Love U…U Must Love Me – ಇನ್ಸ್‌ಪೆಕ್ಟರ್‌ಗೆ ಲವ್ ಲೆಟರ್ ಬರೆದ ಮಹಿಳೆ

Public TV
By Public TV
1 hour ago
music mailari 1
Bagalkot

ಬಾಲಕಿಗೆ ಲೈಂಗಿಕ ದೌರ್ಜನ್ಯ ಕೇಸ್‌ – ಮ್ಯೂಸಿಕ್‌ ಮೈಲಾರಿ ಬಂಧನ

Public TV
By Public TV
1 hour ago
Tulsi Gabbard 3
Latest

ಇಸ್ಲಾಮಿಸ್ಟ್‌ಗಳು, ಇಸ್ಲಾಮಿಸಂ ಇಡೀ ವಿಶ್ವದ ಭದ್ರತೆಗೇ ಅಪಾಯ – ತುಳಸಿ ಗಬ್ಬಾರ್ಡ್ ಕಳವಳ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?