ಯಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಕೆಜಿಎಫ್ 2’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಇನ್ನೂ ದಾಖಲೆಗಳ ಮೇಲೆ ದಾಖಲೆ ಮಾಡುತ್ತಿದೆ. ಈ ನಡುವೆ ಕೆಜಿಎಫ್ 3 ಸಿನಿಮಾ ಬರಲಿದೆಯಾ ಎನ್ನುವ ಚರ್ಚೆ ಶುರುವಾಗಿತ್ತು. ನಿರ್ದೇಶಕ ಪ್ರಶಾಂತ್ ನೀಲ್ ಇನ್ನೂ ಎರಡು ಚಿತ್ರಗಳನ್ನು ಒಪ್ಪಿಕೊಂಡಿರುವ ಕಾರಣಕ್ಕಾಗಿ ಕೆಜಿಎಫ್ 3 ಸಿನಿಮಾವನ್ನು ಕೂಡಲೇ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎನ್ನಲಾಗುತ್ತಿತ್ತು. ಇದನ್ನೂ ಓದಿ : Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು
ಆದರೆ, ಕೆಜಿಎಫ್ 2 ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರು ಅಚ್ಚರಿಯ ಹೇಳಿಕೆಯೊಂದನ್ನು ಕೊಟ್ಟಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿರುವ ಅವರು ‘ಅಕ್ಟೋಬರ್ ಒಳಗೆ ಸಲಾರ್ ಸಿನಿಮಾದ ಶೂಟಿಂಗ್ ಮುಗಿಸಬೇಕೆಂದು ತೀರ್ಮಾನ ಮಾಡಿದ್ದೇವೆ. ಅಂದುಕೊಂಡಂತೆ ಆ ಸಿನಿಮಾದ ಕೆಲಸ ಮುಗಿದರೆ, ಅಕ್ಟೋಬರ್ ನಿಂದಲೇ ಕೆಜಿಎಫ್ 2 ಸಿನಿಮಾದ ಕೆಲಸ ಆರಂಭಿಸಲಿದ್ದೇವೆ’ ಎಂದು ಹೇಳಿದ್ದಾರೆ. ಇದನ್ನೂ ಓದಿ : ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ
ಕೆಜಿಎಫ್ 2 ಸಿನಿಮಾದಲ್ಲಿ ನಾಯಕ ಬದುಕಿದನಾ ಅಥವಾ ಸತ್ತನಾ ಎನ್ನುವುದು ಅಸ್ಪಷ್ಟ. ಹಾಗಾಗಿ ಯಶ್ ಅವರೇ ಈ ಸಿನಿಮಾದ ನಾಯಕ ಆಗುತ್ತಾರಾ? ಅಥವಾ ಕೆಜಿಎಫ್ 3 ನಲ್ಲಿ ಬೇರೆ ನಾಯಕ ಇರಲಿದ್ದಾರೆ ಎನ್ನುವುದಕ್ಕೆ ಅವರು ಯಾವುದೇ ಸ್ಪಷ್ಟತೆ ನೀಡಿಲ್ಲ. ಆದರೆ, ಸ್ಪೈಡರ್ ಮ್ಯಾನ್, ಹೋಮ್ ಕಮಿಂಗ್ ರೀತಿಯಲ್ಲಿ ಪಾತ್ರಗಳನ್ನು ಬದಲಾಯಿಸಿದರೆ, ಇನ್ನೂ ಹೆಚ್ಚಿನ ಸಂಖ್ಯೆಯ ಜನರಿಗೆ ಸಿನಿಮಾವನ್ನು ತಲುಪಿಸಬಹುದು’ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ ನಿರ್ಮಾಪಕರು. ಇದನ್ನೂ ಓದಿ : ಪತಿ ಉಪ್ಪಿಗಿಂತಲೂ ಪತ್ನಿ ಪ್ರಿಯಾಂಕಾ ಉಪೇಂದ್ರ ಫಾಸ್ಟ್ : ಡಿಟೆಕ್ಟೀವ್ ತೀಕ್ಷ್ಣ @ 50
ಈಗಾಗಲೇ ತೆಲುಗಿನ ಖ್ಯಾತ ನಟ ರಾಣಾ ದಗ್ಗುಬಾಟಿಯನ್ನು ನಿರ್ಮಾಪಕರು ಸಂಪರ್ಕಿಸಿದ್ದಾರೆ ಎನ್ನುವ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಆದರೆ, ಈ ಕುರಿತು ನಿರ್ಮಾಪಕ ವಿಜಯ್ ಕಿರಗಂದೂರು ಯಾವುದೇ ಮಾಹಿತಿಯನ್ನು ನೀಡಿಲ್ಲ. ಒಟ್ಟಿನಲ್ಲಿ ಕೆಜಿಎಫ್ 2 ಗಿಂತಲೂ ಇನ್ನೂ ದೊಡ್ಡದಾಗಿ ಈ ಸಿನಿಮಾ ಇರಲಿದೆ ಎನ್ನುವ ಮಾಹಿತಿಯನ್ನಂತೂ ನೀಡಿದ್ದಾರೆ. ಅಲ್ಲಿಗೆ ಕೆಜಿಎಫ್ 3 ಸಿನಿಮಾ ಲೇಟಾದರೂ, ನಿರ್ಮಾಣವಾಗಲಿದೆ ಎನ್ನುವುದು ಖಚಿತ.