ಕೊಟ್ಟ ಮಾತಿನಂತೆ ಪವಿತ್ರಾಗೆ ಸೈಕಲ್ ಉಡುಗೊರೆ ನೀಡಿದ ಸಿಎಂ ಬೊಮ್ಮಾಯಿ

Public TV
2 Min Read
CYCLIST

-5 ಲಕ್ಷ ಬೆಲೆಯ ಸೈಕಲ್

ಬೆಂಗಳೂರು: ರಾಷ್ಟ್ರ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಮಿಂಚಿದ್ದ ಪ್ರತಿಭೆಯ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೊಟ್ಟ ಮಾತಿನಂತೆ ಸೈಕಲ್ ಉಡುಗೊರೆಯಾಗಿ ನೀಡಿದ್ದಾರೆ.

CLYLIST

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಅಶೋಕ್ ಮತ್ತು ರೇಣುಕಾ ದಂಪತಿ ಮಗಳಾದ ಪವಿತ್ರಾ ಕುರ್ತಕೋಟಿ, 5 ನೇ ತರಗತಿಯಲ್ಲಿರುವಾಗ ಸೈಕ್ಲಿಂಗ್ ಕ್ರೀಡೆಯತ್ತಾ ಪ್ರವೇಶ ಪಡೆದು ಬಳಿಕ ಹಲವಾರು ರಾಜ್ಯ, ರಾಷ್ಟ್ರ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಪ್ರಶಸ್ತಿ ಜಯಿಸಿದ್ದಾರೆ. ಪ್ರಸ್ತುತ ಪ್ರಥಮ ಪಿಯುಸಿ ವಿಡಿಎಫ್‍ಟಿ ಬಾಲಕಿಯರ ಕಾಲೇಜಿನಲ್ಲಿ ಓದುತ್ತಿದ್ದಾರೆ. ತಂದೆ ರೈತ ಕಾರ್ಮಿಕರಾಗಿದ್ದು, ತಾಯಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿ ಊಟದ ಅಡುಗೆ ಸಹಾಯಕರಾಗಿದ್ದಾರೆ. ಅತ್ಯಂತ ಬಡತನದಲ್ಲಿ ಜೀವನ ಸಾಗಿಸುತ್ತಿರುವ ಪವಿತ್ರ ಅವರಿಗೆ ಮೊದಲಿನಿಂದಲೂ ಸೈಕ್ಲಿಂಗ್‍ನಲ್ಲಿ ಆಸಕ್ತಿ. ಆದರೆ ಗುಣಮಟ್ಟದ ಸೈಕಲ್ ಖರೀದಿಸುವ ಶಕ್ತಿ ಇಲ್ಲ. ಈ ಮೊದಲು ದಾನಿಗಳ ಸಹಾಯದಿಂದ ಪವಿತ್ರ ಅವರು ಸೈಕಲ್ ಖರೀದಿಸಿ ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಂಡು ಬಹುಮಾನ ಗೆದ್ದಿದ್ದರು. ಇದನ್ನೂ ಓದಿ: ಟಿ20 ವಿಶ್ವಕಪ್ ಆಯ್ಕೆಗೆ ಇನ್ನೊಂದು ಚಾನ್ಸ್ ಕಲ್ಪಿಸಿಕೊಡಬಹುದು ಐಪಿಎಲ್?

CYCLIST 1

ಸಿಎಂ ಖಾಸಗಿ ಸುದ್ದಿವಾಹಿನಿಯಲ್ಲಿ ಸಂದರ್ಶನದಲ್ಲಿದ್ದಾಗ ಪವಿತ್ರ ಅವರು ದೂರವಾಣಿಯಲ್ಲಿ ಮಾತನಾಡಿ, ಗುಣಮಟ್ಟದ ಸೈಕಲ್ ಕೊಡಿಸುವಂತೆ ಮನವಿ ಮಾಡಿದ್ದರು. ಉತ್ತಮ ಗುಣಮಟ್ಟದ ಸೈಕಲ್ ಕೊಡಿಸುವುದಾಗಿ ಬೊಮ್ಮಾಯಿ ಅವರು ಭರವಸೆ ನೀಡಿದ್ದರು. ಅದರಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಕ್ರೀಡಾ ಇಲಾಖೆ ಹಾಗೂ ಎಂಬೈಸಿ ಗ್ರೂಪ್, ಬ್ಲಾಸಂ ಆಸ್ಪತ್ರೆ ಮತ್ತು ಮಧುಸೂದನ್ ಅವರ ಸಹಕಾರದೊಂದಿಗೆ Argon-18 E-119 ಸೈಕಲ್ ಅನ್ನು ಖರೀದಿಸಿ ಪವಿತ್ರ ಅವರಿಗೆ, ಮುಖ್ಯಮಂತ್ರಿ ಹಸ್ತಾಂತರಿಸಿದ್ದಾರೆ. ಈ ಮೂಲಕ ಪವಿತ್ರ ಅವರ ಕನಸು ನನಸುಗೊಳಿಸಿ ಅಂತರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಪ್ರಯತ್ನಕ್ಕೆ ಸಹಕಾರ ನೀಡಿದ್ದಾರೆ. ಕೆನಡಾದಿಂದ ತರಿಸಿರುವ ಈ ಸೈಕಲ್ ಸುಮಾರು 5 ಲಕ್ಷ ಬೆಲೆಯದ್ದಾಗಿದೆ.

CYCLIST 2

ಪವಿತ್ರಾ ಅವರ ಸಾಧನೆ:
2018ರಲ್ಲಿ ಕುರುಕ್ಷೇತ್ರದಲ್ಲಿ ನಡೆದ ರೋಡ್ ಸೈಕ್ಲಿಂಗ್ 15 ಕಿ.ಮೀ ಸ್ಪರ್ಧೆಯಲ್ಲಿ 5ನೇ ಸ್ಥಾನ. 2019ರಲ್ಲಿ ಪುಣೆಯಲ್ಲಿ ನಡೆದ ರಾಷ್ಟ್ರಮಟ್ಟದ ಎಂ.ಟಿ.ಬಿ. ಸೈಕಲ್ ಸ್ಪರ್ಧೆಯಲ್ಲಿ 9ನೇ ಸ್ಥಾನ. 2021ರಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಎಂ.ಟಿ.ಬಿ. ಮೌಂಟೇನ್ ಬೈಕ್ ಸ್ಪರ್ಧೆಯಲ್ಲಿ 3ನೇ ಸ್ಥಾನ. 2021ರಲ್ಲಿ ಗದಗದಲ್ಲಿ ನಡೆದ ರಾಷ್ಟ್ರೀಯ ಎಂ.ಟಿ.ಬಿ. ಮೌಂಟೇನ್ ಬೈಕ್ ಸ್ಪರ್ಧೆಯಲ್ಲಿ 3ನೇ ಸ್ಥಾನ ಪಡೆದಿದ್ದಾರೆ. ಈಗ ನ್ಯಾಶನಲ್ ಲೆವೆಲ್ ಗೇಮ್ಸ್ ಚಾಂಪಿಯನ್‍ಶಿಪ್ ಪಂಜಾಬ್‍ನ ಪಟಿಯಾಲದಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಟೀಂಗೆ ಆಯ್ಕೆಯಾಗಿದ್ದು, ಈ ಕ್ಯಾಂಪಿನಲ್ಲಿ ಪಾಲ್ಗೊಳ್ಳಲು ಅಂತರಾಷ್ಟ್ರೀಯ ಮಟ್ಟದ ಸೈಕಲ್ ಅವಶ್ಯಕತೆ ಇತ್ತು, ಅದನ್ನು ಈಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನೀಡಲಾಗಿದೆ. ಇದನ್ನೂ ಓದಿ: ಇಂತಹ ಕೆಟ್ಟ ಸರ್ಕಾರವನ್ನು ರಾಜಕೀಯ ಜೀವನದಲ್ಲಿ ನೋಡಿಲ್ಲ: ಸಿದ್ದರಾಮಯ್ಯ

ಸೈಕಲ್ ಹಸ್ತಾಂತರ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಆರ್​ಸಿಬಿ ಕ್ಯಾಪ್ಟನ್ ರೇಸ್‍ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ 

Share This Article
Leave a Comment

Leave a Reply

Your email address will not be published. Required fields are marked *