Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುದ್ಧಕ್ಕೆ ನಿಂತ ಮೇಲೆ ಸೋತರೂ ಪರವಾಗಿಲ್ಲ, ಸತ್ತಾದರೂ ಗೆಲ್ಲಿ- ಕಿಚ್ಚನ ಕ್ಲಾಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯುದ್ಧಕ್ಕೆ ನಿಂತ ಮೇಲೆ ಸೋತರೂ ಪರವಾಗಿಲ್ಲ, ಸತ್ತಾದರೂ ಗೆಲ್ಲಿ- ಕಿಚ್ಚನ ಕ್ಲಾಸ್

Bengaluru City

ಯುದ್ಧಕ್ಕೆ ನಿಂತ ಮೇಲೆ ಸೋತರೂ ಪರವಾಗಿಲ್ಲ, ಸತ್ತಾದರೂ ಗೆಲ್ಲಿ- ಕಿಚ್ಚನ ಕ್ಲಾಸ್

Public TV
Last updated: October 22, 2023 4:03 pm
Public TV
Share
3 Min Read
bigg boss 1 20
SHARE

ದೊಡ್ಮನೆಯ ಆಟ ಈಗ 2 ವಾರ ಕಳೆದಿದೆ. ಮೊದಲ ವಾರ ಸ್ನೇಕ್ ಶ್ಯಾಮ್ ಎಲಿಮಿನೇಟ್ ಆಗಿ ಹೊರನಡೆದಿದ್ದಾರೆ. 2ನೇ ವಾರದ ಎಲಿಮಿನೇಷನ್ ಬಿಸಿ ಮನೆಮಂದಿಗೆ ತಟ್ಟಿದೆ. ಇದರ ಮಧ್ಯೆ ಕಿಚ್ಚನ ಪಂಚಾಯಿತಿ ಎಪಿಸೋಡ್‌ನಲ್ಲಿ ಸುದೀಪ್ ಅವರು ಸಿಕ್ಕಾಪಟ್ಟೆ ಕೋಪಗೊಂಡಿದ್ದಾರೆ. ಮನೆಯ ಸದಸ್ಯರನ್ನು ಭೇಟಿಯಾಗುತ್ತಲೇ, ನೀವು ನೀವೇ ಡಿಸ್ಕಸ್ ಮಾಡಿಕೊಂಡು ಇಬ್ಬರನ್ನು ನಾಮಿನೇಟ್ ಮಾಡಿ ಎಂದರು. ಅದಕ್ಕೆ ಡ್ರೋನ್ ಪ್ರತಾಪ್ ಸೇರಿದಂತೆ ಕೆಲ ಹೆಸರುಗಳನ್ನು ಫೈನಲ್ ಮಾಡಲಾಯಿತು.

sudeep 2 1

ಈ ವಾರ ಕಿಚ್ಚನ ಪಂಚಾಯಿತಿಯಲ್ಲಿ ಸುದೀಪ್ ಸ್ಪರ್ಧಿಗಳಿಗೆ ಸಖತ್ ಆಗಿಯೇ ಬೆಂಡೆತ್ತಿದ್ದಾರೆ. ನೀವಿಲ್ಲಿ ಚಪ್ಪಾಳೆ ಹೊಡೆಯೋಕೆ ಬಂದ್ರಾ ಅಂತ ಖಡಕ್ ಆಗಿ ಮಾತನಾಡಿದ್ದಾರೆ. ಮನೆಯ ಸದಸ್ಯರು ನಾಮಿನೇಟ್ ಮಾಡಿದ ನಂತರ ಸೋಫಾ ಮೇಲೆ ವಿನಯ್ ಗೌಡ ಮತ್ತು ಕಾರ್ತಿಕ್ ಮಹೇಶ್ ಅವರನ್ನು ಬಿಟ್ಟು ಮಿಕ್ಕವರು ಕೂರಬಾರದು ಎಂದು ಸುದೀಪ್ (Sudeep) ಆದೇಶಿಸಿದರು. ನಂತರ ಎಲ್ಲರಿಗೂ ಸರಿಯಾಗಿ ಕ್ಲಾಸ್ ತೆಗೆದುಕೊಂಡರು. ಕಾರಣ, ಮಂಗಳವಾರದ ಸಂಚಿಕೆಯಲ್ಲಿ ಮನೆಯಲ್ಲಿ ಇಬ್ಬರನ್ನು ತಂಡದ ಕ್ಯಾಪ್ಟನ್ ಆಗಿ ಆಯ್ಕೆ ಮಾಡಬೇಕು ಎಂದು ಹೇಳಿದಾಗ, ಮನೆಯ ಸದಸ್ಯರು 20 ಸೆಕೆಂಡ್ ಕೂಡ ಯೋಚಿಸದೇ ಕಾರ್ತಿಕ್ ಮತ್ತು ವಿನಯ್ ಹೆಸರನ್ನು ಹೇಳಿದ್ದರು. ಇದು ಸುದೀಪ್‌ಗೆ ಕೋಪ ತರಿಸಿದೆ. ಇದನ್ನೂ ಓದಿ:ಸುದೀಪ್‌ಗೆ ನಾಯಕಿಯಾದ ‘ಕೆಜಿಎಫ್‌’ ಬ್ಯೂಟಿ ಶ್ರೀನಿಧಿ ಶೆಟ್ಟಿ

sudeep 1 2

ಈ ಮನೆಯನ್ನು ರಕ್ಷಕ್‌ನಂತಹ (Rakshak Bullet) ಚಿಕ್ಕ ಹುಡುಗನ ಕ್ಯಾಪ್ಟನ್‌ಶಿಪ್‌ನಲ್ಲಿ ನಡೆಸಲು ನೀವು ರೆಡಿ ಇದ್ದೀರಿ. ಆದರೆ ಒಬ್ಬ ಹೆಣ್ಣಿನ ಮೇಲೆ ನಿಮಗೆ ನಂಬಿಕೆ ಇಲ್ಲ. ಈಶಾನಿ (Eshani) ನೀವು ಏನಕ್ಕೆ ಇದ್ದೀರಾ ಮನೆಯೊಳಗೆ? ಈ ವೇದಿಕೆ ಮೇಲೆ ನಿಂತಾಗ, ಡ್ಯಾನ್ಸ್ ಮಾಡಿದ್ರಿ, ಕಾನ್ಫಿಡೆನ್ಸ್ ಅಲ್ಲಿ ಮಾತನಾಡಿದ್ರಿ, ಹೊರಗಡೆ ಒಬ್ಬರ ಅವಕಾಶವನ್ನು ಕಿತ್ತುಕೊಂಡು ನೀವು ಒಳಗೆ ಹೋದ್ರಿ. ನೀವಿಲ್ಲ ಇದ್ದಿದ್ದರೆ ಇನ್ನೊಬ್ಬರು ಯಾರಾದರೂ ಹೋಗಿರುತ್ತಿದ್ದರು ಎಂದು ಸುದೀಪ್ ಹೇಳಿದರು.

eshani

ಬಿಗ್ ಬಾಸ್ (Bigg Boss Kannada) ಒಂದು ಫಿಸಿಕಲ್ ಟಾಸ್ಕ್‌ಗಳನ್ನು ಮಾಡುವಂತಹ ಶೋ. ಬಿಗ್ ಬಾಸ್ ನಿಮ್ಮಿಂದ ಇದು ಸಾಧ್ಯ ಎಂದು ನಂಬಿಕೆ ಇಟ್ಟು ಮನೆಯೊಳಗೆ ಮಹಿಳೆಯರನ್ನು ಕಳಿಸ್ತಾರೆ. ಆದರೆ ನಿಮಗೆ ನಿಮ್ಮ ಮೇಲೆ ನಂಬಿಕೆ ಇಲ್ವಾ? ಈ ಪ್ರಶ್ನೆಯನ್ನು ನಾನು ಲೇಡಿಸ್‌ಗೆ ಕೇಳ್ತಾ ಇದ್ದೇನೆ. ನಿಮಗೆ ಗೆಲ್ಲಬೇಕು ಅಂತ ಹಠ ಇದಿಯೋ, ಇಲ್ವೋ ಅಂತ ಡೌಟ್ ಆಗ್ತಾ ಇದೆ. ನೀವಿಲ್ಲಿ ಚಪ್ಪಾಳೆ ಹೊಡೆಯೋಕೆ ಬಂದಿದ್ದೀರಾ? ಅದನ್ನಂತೂ ಎಲ್ರೂ ತುಂಬ ಚೆನ್ನಾಗಿ ಮಾಡ್ತಾ ಇದ್ದೀರಾ. 9 ಸೀಸನ್‌ನಲ್ಲಿ ಒಬ್ಬರು ಶ್ರುತಿ ಅವರನ್ನು ಬಿಟ್ಟರೆ ಬೇರೆ ಯಾರೂ ಲೇಡಿಸ್ ಗೆದ್ದಿಲ್ಲ. ಯಾಕೆ ಅಂದ್ರೆ ನಿಮಗೆ ಗೆಲ್ಲಬೇಕು ಅಂತ ಅನ್ನಿಸ್ತಾ ಇಲ್ಲ ಎಂದು ಸುದೀಪ್ ಹೇಳಿದರು.

sudeep 1 1

ಎಲ್ರೂ ಏನ್ ಮಾಡಬೇಕು ಅಂತ ಇಲ್ಲಿಗೆ ಬಂದಿದ್ದೀರಿ? ನಾನು ನಿಮಗೆ ಎರಡು ಚಾಯ್ಸ್ ಕೊಡ್ತಿನಿ. ಯಾರಿಗೆ ಹಠ ಇಲ್ಲ, ಯಾರಿಗೆ ಸಿಕ್ಕ ಅವಕಾಶವನ್ನು ಹಾಳು ಮಾಡ್ಕೊಂಡು ಮನೆಗೆ ಹೋಗಬೇಕು ಅಂತ ಆಸೆ ಇದೆಯೋ ಕೈ ಎತ್ತಿ, ಈ ಕ್ಷಣವೇ ನಾನು ಬಾಗಿಲು ತೆರೆಸುತ್ತೇನೆ ಎಂದು ಬಿಗ್ ಬಾಸ್ ಮನೆಯ ಮೇನ್ ಡೋರ್ ಅನ್ನು ಸುದೀಪ್ ತೆರೆಸಿದರು. ಇಷ್ಟು ಸೀಸನ್‌ಗಳಲ್ಲಿ ಮೊದಲ ಬಾರಿಗೆ ತಮಗಿದ್ದ ಅಧಿಕಾರ ಬಳಸಿಕೊಂಡು, ಬಾಗಿಲು ತೆರೆಸಿ, ಮನೆಯೊಳಗೆ ಇರುವವರಿಗೆ, ಯಾರಿಗಾದರೂ ಇಷ್ಟವಿದ್ದರೆ ಹೋಗಬಹುದು ಎಂದು ನೇರವಾಗಿ ಹೇಳಿದರು.

ಈ ವಾರ ನಾನು ಮನೆಯೊಳಗೆ ನೋಡಿದ್ದು ಇಷ್ಟ ಆಗಿಲ್ಲ. ಬಿಗ್ ಬಾಸ್ ಮನೆಯೊಳಗೆ ಗೆಲ್ಲುವುದಕ್ಕೆ ಬಂದಿರುವ ನೀವು, ಯಾವುದೇ ಡಿಸ್ಕಸ್ ಕೂಡ ಮಾಡದೇ ಇಬ್ಬರ ಹೆಸರನ್ನು ಹೇಳ್ತೀರಾ. ನಿಮ್ಮ ಕರಿಯರ್ ಬಗ್ಗೆ ನಿಮ್ಮ ಯೋಚನೆ ಇಲ್ವಾ? ನಾನ್ಯಾಕೆ ಕ್ಯಾಪ್ಟನ್ ಆಗಬಾರದು ಅಂತ ನಿಮಗೆ ಅನ್ನಿಸಲಿಲ್ವಾ? ಯುದ್ಧಕ್ಕೆ ಇಳಿದ ಮೇಲೆ ಸೋತರೂ ಪರವಾಗಿಲ್ಲ, ಸತ್ತಾದಾರೂ ಗೆಲ್ಲಿ. ಹೇಗಿರಬೇಕು ಅನ್ನೋದು ನಿಮಗೆ ಬಿಟ್ಟಿದ್ದು. ಆದರೆ ಈ ರೀತಿ ಮಾತ್ರ ಇರಬೇಡಿ ಎಂದು ಖಡಕ್ ವಾರ್ನಿಂಗ್ ಕೊಟ್ಟರು ಕಿಚ್ಚ.

TAGGED:bigg boss kannada 10sandalwoodsudeepಕಿಚ್ಚ ಸುದೀಪ್ಬಿಗ್ ಬಾಸ್ ಕನ್ನಡ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

gold silver price drop market crash
Latest

ಚಿನ್ನದ ದರ ದಾಖಲೆಯ ಕುಸಿತ – ಏರಿದ್ದ ಚಿನ್ನದ ಬೆಲೆ ದಿಢೀರ್‌ ಇಳಿಕೆಗೆ ಕಾರಣ ಏನು?

Public TV
By Public TV
8 minutes ago
AI Image
Bengaluru City

ಮಕ್ಕಳಿಗೆ ಡಿಜಿಟಲ್ ಬಳಕೆ ಹೇಗೆ? – ಶಿಕ್ಷಣ, ಆರೋಗ್ಯ ಇಲಾಖೆ & ನಿಮ್ಹಾನ್ಸ್‌ನಿಂದ ಗೈಡಲೈನ್ಸ್‌

Public TV
By Public TV
22 minutes ago
Chikkaballapura Enginer Death By Accident
Chikkaballapur

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಅಪಘಾತದಲ್ಲಿ ಗಾಯಗೊಂಡಿದ್ದ ಎಂಜಿನಿಯರ್ ಸಾವು

Public TV
By Public TV
42 minutes ago
Ramesh Bandisiddegowda
Bengaluru City

ಮಿನಿಸ್ಟರ್ Vs MLA ವಾರ್ – ಸ್ವಪಕ್ಷೀಯ ಸಚಿವರ ವಿರುದ್ಧವೇ ಸರ್ಕಾರಿ ಜಮೀನು ನುಂಗಿದ ಆರೋಪ: ರಮೇಶ್ ಬಂಡಿಸಿದ್ದೇಗೌಡ

Public TV
By Public TV
58 minutes ago
gold silver 1
Latest

ಇರಾನ್‌ ಯುದ್ಧ – ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಮೇ ತಿಂಗಳಲ್ಲಿ ಪಿಂಕ್ ಲೈನ್ ಸಂಚಾರಕ್ಕೆ ಮುಕ್ತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?