ಸಾವಿನಂಚಿನಲ್ಲಿರೋ ಅಭಿಮಾನಿಯ ಕೊನೆ ಆಸೆ ಈಡೇರಿಸಿದ ಕಿಚ್ಚ

Public TV
1 Min Read
KICHHA SUDEEP

ಬೆಂಗಳೂರು: ಸ್ಯಾಂಡಲ್‍ವುಡ್‍ನ ಅಭಿನಯ ಚಕ್ರವರ್ತಿ ತೆರೆ ಮೇಲೆ ಮಾತ್ರ ಹೀರೋ ಅಲ್ಲ. ತೆರೆಯ ಹಿಂದೆಯೂ ಕೂಡ ಹೀರೋ ಎಂಬುದನ್ನು ಕಿಚ್ಚ ಸಾಬೀತು ಮಾಡಿದ್ದಾರೆ. ಸಾವಿನ ಅಂಚಿನಲ್ಲಿರುವ ಅಭಿಮಾನಿಯೊಬ್ಬರ ಕೊನೆಯ ಆಸೆಯನ್ನು ಸುದೀಪ್ ಈಡೇರಿಸಿದ್ದಾರೆ.

ಕಿಚ್ಚನ ಅಭಿಮಾನಿ ವಿನುತಾ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ಉಲ್ಬಣಗೊಂಡು ನಾಲ್ಕನೆಯ ಹಂತ ತಲುಪಿದೆ. ವೈದ್ಯರು ವಿನುತಾ ಬದುಕುಳಿಯುವ ಸಾಧ್ಯತೆ ತುಂಬಾ ಕಡಿಮೆ ಎಂದು ತಿಳಿಸಿದ್ದಾರೆ.

KICHHA SUDEEP 2

ಸಾವಿನಂಚಿನಲ್ಲಿರುವ ವಿನುತಾ ಸುದೀಪ್ ಅವರ ದೊಡ್ಡ ಅಭಿಮಾನಿ, ಅವರ ಕೊನೆಯ ಆಸೆ ಏನು ಎಂದು ಕೇಳಿದಾಗ, ಒಮ್ಮೆ ತಮ್ಮ ಮೆಚ್ಚಿನ ನಟನನ್ನು ನೋಡಬೇಕು ಎಂಬ ಆಸೆಯನ್ನು ಹೇಳಿಕೊಂಡಿದ್ದಾರೆ.

ವಿನುತಾರ ಕೊನೆಯ ಆಸೆಯ ಬಗ್ಗೆ ಕಿಚ್ಚಾ ಸುದೀಪ್ ಸೇನಾ ಸಮಿತಿಯು (KSSS) ನಟ ಸುದೀಪ್ ಅವರಿಗೆ ಹೇಳಿತ್ತು. ವಿಷಯ ತಿಳಿದ ನಂತರ ಸುದೀಪ್ ವಿನುತಾ ಕೊನೆಯಾಸೆಯಂತೆ ಅವರನ್ನು ಭೇಟಿ ಮಾಡಿದ್ದು, ಅವರ ಜೊತೆ ಮಾತನಾಡುತ್ತಾ ಸಮಯ ಕಳೆದಿದ್ದಾರೆ.

KICHHA SUDEEP 1

KICHHA SUDEEP 3

SUDEEP 5

SUDEEP 2

Share This Article
Leave a Comment

Leave a Reply

Your email address will not be published. Required fields are marked *