ಹೊಸ ಕಥೆ ಇದ್ದರೆ ಜನ ಒಪ್ಪಿಕೊಳ್ತಾರೆ, `ಕಾಂತಾರ’ ಸಕ್ಸಸ್ ಬಗ್ಗೆ ಕಿಚ್ಚನ ಮಾತು

Public TV
2 Min Read
rishab shetty 1

ಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) `ವಿಕ್ರಾಂತ್ ರೋಣ’ (Vikrantrona) ಸಿನಿಮಾ ನಂತರ ಹೊಸ ಸಿನಿಮಾ ಮೂಲಕ ಬರುವ ತಯಾರಿ ನಡೆಯಲ್ಲಿದ್ದಾರೆ. ಹೀಗಿರುವಾಗ ಕಾಂತಾರ (KANTARA) ಸಿನಿಮಾ ಸಕ್ಸಸ್ ಬಗ್ಗೆ ಕಿಚ್ಚ ಸುದೀಪ್ ಮಾತನಾಡಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ -ಕಿಯಾರಾ ಜೋಡಿ

SUDEEP 1 1ಕನ್ನಡ ಮತ್ತು ಸೌತ್ ಸಿನಿಮಾಗಳು ಪ್ಯಾನ್ ಇಂಡಿಯಾ ಸಿನಿಮಾವಾಗಿ ಗೆಲ್ಲುತ್ತಿದೆ. ಬಾಲಿವುಡ್‌ನಲ್ಲಿ ದಕ್ಷಿಣದ ಸಿನಿಮಾಗಳು ಕಮಾಲ್ ಮಾಡುತ್ತಿದೆ. ಹೀಗಿರುವಾದ ಸಂದರ್ಶನವೊಂದರಲ್ಲಿ ಕಿಚ್ಚ ಸುದೀಪ್‌ಗೆ ಪ್ರಶ್ನೆಯೊಂದು ಎದುರಾಗಿದೆ. ಸಿನಿಮಾ ಸಕ್ಸಸ್ ಸೂತ್ರಗಳು ಬಗ್ಗೆ ನಟ ಮಾಡಿದ್ದಾರೆ. ಇತ್ತೀಚಿಗೆ ಕಾರ್ಯಕ್ರಮದಲ್ಲಿವೊಂದರಲ್ಲಿ ಭಾಗವಹಿಸಿದ ಸುದೀಪ್‌ಗೆ ಪ್ಯಾನ್ ಇಂಡಿಯಾ ಸಿನಿಮಾಗಳ ಹೇಗೆ ಗೆಲ್ಲುತ್ತವೆ, ಯಾವ ಚಿತ್ರಗಳನ್ನು ಪ್ಯಾನ್ ಇಂಡಿಯಾ ಮಾಡಬೇಕು ಎಂಬುದನ್ನು ನಿರ್ಧರಿಸುವುದು ಹೇಗೆ, ಇದರ ಒತ್ತಡ ನಿರ್ಮಾಪಕರ ಮೇಲೆ ಯಾವ ರೀತಿ ಬೀಳಲಿದೆ ಎಂಬ ಪ್ರಶ್ನೆ ಎದುರಾಯಿತು.

sudeep 1 4

ಈ ಪ್ರಶ್ನೆಗಳಿಗೆ ಉತ್ತರಿಸಲು ಆರಂಭಿಸಿದ ಸುದೀಪ್ ಚೈನೀಸ್ ಸಿನಿಮಾಗಳನ್ನು ಉದಾಹರಣೆಯಾಗಿ ನೀಡಿದರು. ಬೇರೆ ಭಾಷೆಗಳಿಗೆ ಡಬ್ ಮಾಡಿ ವಿಶ್ವದಾದ್ಯಂತ ತಮ್ಮ ಸಿನಿಮಾಗಳು ಹಬ್ಬುವಂತೆ ಮಾಡಿದರು. ಇಂಗ್ಲಿಷ್ ಭಾಷೆಗೆ ಡಬ್ ಆದ ಚೈನೀಸ್ ಭಾಷೆಗಳು ದೇಶದೆಲ್ಲೆಡೆ ಗೆದ್ದವು, ಪ್ರೇಕ್ಷಕನಿಗೆ ಹೊಸತನ್ನು ನೋಡುವ ಬಯಕೆ ಇರುತ್ತದೆ. ಹಾಗಾಗಿಯೇ ಹೊಸತನದಿದ್ದ ಚೈನೀಸ್ ಕೊರಿಯನ್ ಚಿತ್ರಗಳನ್ನು ಭಾರತದ ಅಭಿಮಾನಿಗಳು ಮೆಚ್ಚಿಕೊಂಡರು ಎಂದು ಕಿಚ್ಚ ಮಾತನಾಡಿದ್ದಾರೆ.

Kantara 3

ಇದೇ ವೇಳೆ ರಿಷಬ್‌ ನಟನೆ, ನಿರ್ದೇಶನದ `ಕಾಂತಾರ’ (KANTARA) ಚಿತ್ರ ಒಂದು ಕನ್ನಡ ಚಿತ್ರ, ಕರ್ನಾಟಕದ (Karnataka) ಆಚರಣೆಯಾದ ಭೂತಕೋಲದ ಕಥೆ ಇರುವ ಚಿತ್ರ, ಈ ಚಿತ್ರವನ್ನು ಉತ್ತರ ಪ್ರದೇಶದ ಸಿನಿ ರಸಿಕ ಮೆಚ್ಚಿಕೊಳ್ಳಲು ಕಾರಣವೇನು ಎಂಬ ಪ್ರಶ್ನೆಯೂ ಸಹ ಸುದೀಪ್ ಅವರಿಗೆ ಎದುರಾಯಿತು. ಇದರ ಬಗ್ಗೆಯೂ ಮಾತನಾಡಿದ ಸುದೀಪ್ ʻಕಾಂತಾರʼ ನಮ್ಮ ನಾಡಿನ ಕಥೆಯಾದರೂ ಬೇರೆ ಭಾಷೆಯ ಜನರಿಗೆ ಹೊಸತು, ಸಾಮಾನ್ಯ ಕಥೆಗಳನ್ನು ನೋಡಿರುವ ಸಿನಿ ರಸಿಕರಿಗೆ ಆ ಚಿತ್ರ ಹೊಸ ಅನುಭವವನ್ನು ನೀಡಿತು, ಅದು ಬೇರೆ ರಾಜ್ಯದ ಸಿನಿ ರಸಿಕರಿಗೆ ಹೊಸತು, ಹಾಗಾಗಿ ಗೆಲುವು ಕಂಡಿತು, ಪ್ಯಾನ್ ಇಂಡಿಯಾ ಚಿತ್ರಗಳು ಗೆಲ್ಲುವುದೇ ಈ ರೀತಿ ಎಂದು ತಿಳಿಸಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *