ಬಿಗ್ ಬಾಸ್ ಕನ್ನಡ ಸೀಸನ್ 10 (Bigg Boss Kannada 10) ಫಿನಾಲೆ ಹಬ್ಬ ಶುರುವಾಗಿದೆ. ಸಖತ್ ಅದ್ದೂರಿ ವೇದಿಕೆಯಲ್ಲಿ ಸುದೀಪ್ (Sudeep) ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಫೈನಲಿಸ್ಟ್ ಆಗಿರುವ ಆರು ಜನ ಸ್ಪರ್ಧಿಗಳನ್ನು, ಅವರ ಮನೆಯವರನ್ನು ಮಾತಾಡಿಸಿದ್ದಾರೆ. ಈ ಕಲರ್ಫುಲ್ ವೇದಿಕೆಯ ತುಣುಕನ್ನು ಜಿಯೋ ಸಿನಿಮಾ ಬಿಡುಗಡೆ ಮಾಡಿರುವ ಪ್ರೋಮೊದಲ್ಲಿದೆ.
ಫಿನಾಲೆ ವೇದಿಕೆಯ ಮೇಲೆ ಸುದೀಪ್ ಮಾಸ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಈ ಹತ್ತು ಸೀಸನ್ನಲ್ಲಿ ಇಷ್ಟು ಸುದ್ದಿ ಮಾಡಿದ ಸೀಸನ್ ಬೇರೆ ಇಲ್ಲ ಎಂದು ಸ್ವತಃ ಕಿಚ್ಚ ಸುದೀಪ್ ಅವರು ಹೇಳಿದ್ದಾರೆ. ವರ್ತೂರು ಸಂತೋಷ್ ಅವರು ಜೈಲಿಗೆ ಹೋಗಿದ್ದ ಸಂಗತಿಯನ್ನು ಸುದೀಪ್ ರಿವೀಲ್ ಮಾಡುತ್ತಿದ್ದ ಹಾಗೆಯೇ ಮನೆಯೊಳಗಿನ ಉಳಿದ ಸ್ಪರ್ಧಿಗಳ ಮುಖದಲ್ಲಿ ಅಚ್ಚರಿ ಮೂಡಿದರೆ, ವರ್ತೂರು ಸಂತೋಷ್ (Varthur Santhosh) ಅವರ ಕಣ್ಣುಗಳಲ್ಲಿ ನೀರು ತುಂಬಿತ್ತು. ಹೊರಗೆ ಕೂತಿದ್ದ ವರ್ತೂರು ಸಂತೋಷ್ ಅಮ್ಮನೂ ಸೆರಗಿನಲ್ಲಿ ಕಣ್ಣೀರು ಒರೆಸಿಕೊಂಡರು. ಹುಲಿ ಉಗುರಿನ ಕೇಸ್ ಬಗ್ಗೆ ಮಾತನಾಡುತ್ತಿದ್ದಂತೆ ಸಂತೋಷ್ ತಾಯಿ ಭಾವುಕರಾದರು.
ಡ್ರೋನ್ ಪ್ರತಾಪ್ ತಾಯಿ, ನಮ್ಮ ಮಗನನ್ನು ನಮಗೆ ಕೊಟ್ಟಿದ್ದೀರಾ. ಈ ವೇದಿಕೆಗೆ ಚಿರಋಣಿ ಎಂದು ಭಾವುಕರಾಗಿದ್ದಾರೆ. ಎಲ್ಲರ ಮುಖದಲ್ಲಿಯೂ ಬಿಗ್ ಬಾಸ್ ವೇದಿಕೆಯ ಕುರಿತು ಕೃತಜ್ಞತೆಯ ಭಾವ ತುಂಬಿದೆ. ಇನ್ನಷ್ಟು ಪರ್ಫಾರ್ಮೆನ್ಸ್, ಕಲರ್ಫುಲ್ ಡಾನ್ಸ್, ಕಚಗುಳಿಯ ಮಾತುಕತೆ ಎಲ್ಲವೂ ತುಂಬಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಫಿನಾಲೆ ಇಂದು ಮತ್ತು ನಾಳೆ ಜಿಯೊ ಸಿನಿಮಾದಲ್ಲಿ ಮತ್ತು ವಾಹಿನಿಯಲ್ಲಿ ಸಂಜೆ 7.30ರಿಂದ ಪ್ರಸಾರವಾಗಲಿದೆ. ಇದನ್ನೂ ಓದಿ:Bigg Boss: ದೊಡ್ಮನೆಯಿಂದ ತುಕಾಲಿ ಸಂತು ಎಲಿಮಿನೇಟ್?
ಅಂದಹಾಗೆ, ಬಿಗ್ ಬಾಸ್ ಮನೆಯ ಫಿನಾಲೆಯಲ್ಲಿ 6 ಸ್ಪರ್ಧಿಗಳು ಇದ್ದರು. ಸಂಗೀತಾ, ವರ್ತೂರು ಸಂತೋಷ್, ತುಕಾಲಿ ಸಂತು, ವಿನಯ್, ಪ್ರತಾಪ್, ಕಾರ್ತಿಕ್. ಅದರಲ್ಲಿ ಫಿನಾಲೆಯ ಮೊದಲ ದಿನ ತುಕಾಲಿ ಸಂತು ಔಟ್ ಆಗಿ ಹೊರಬಂದಿದ್ದಾರೆ ಎನ್ನಲಾಗುತ್ತಿದೆ.