ಕಿಚ್ಚ (Kiccha) ಸುದೀಪ್ ಬಿಜೆಪಿ (BJP) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಬಲಿಸಿದ್ದಕ್ಕೆ ನಟ ಪ್ರಕಾಶ್ ರಾಜ್ ಪ್ರತಿಕ್ರಿಸಿದ್ದಾರೆ. ಸುದೀಪ್ (Sudeep) ತಮ್ಮನ್ನು ತಾವು ಮಾರಿಕೊಳ್ಳುವುದಿಲ್ಲವೆಂದು ಭಾವಿಸಿದ್ದೇನೆ ಎಂದು ನಿನ್ನೆಯಷ್ಟೇ ಟ್ವಿಟ್ ಮಾಡಿದ್ದ ಪ್ರಕಾಶ್ ರಾಜ್ (Prakash Raj) ನಂತರದ ಬೆಳವಣಿಕೆ ಕಂಡು ಸುದೀಪ್ ನೆಡೆಯು ನನಗೆ ಕೇವಲ ಅಚ್ಚರಿ ತಂದಿಲ್ಲ, ಅಪಾರ ನೋವನ್ನುಂಟು ಮಾಡಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಆದರೆ, ಪ್ರಕಾಶ್ ಅವರ ಮಾತಿಗೆ ಸುದೀಪ್ ‘ಅವರೊಂದಿಗೆ ನಾನು ನಟಿಸಲು ಕಾಯುತ್ತಿದ್ದೇನೆ’ ಎಂದಷ್ಟೇ ಉತ್ತರ ನೀಡಿದ್ದಾರೆ.
ಸುದೀಪ್ ಬಿಜೆಪಿಗೆ ನೇರವಾಗಿ ಬೆಂಬಲಿಸುತ್ತೇನೆ ಎಂದು ಹೇಳದೇ ಇದ್ದರೂ, ‘ನನಗೆ ಆತ್ಮೀಯರು, ಆಪ್ತರು ತುಂಬಾ ಜನ ರಾಜಕಾರಣದಲ್ಲಿ ಸಕ್ರೀಯರಾಗಿದ್ದಾರೆ. ಅಲ್ಲದೇ, ಅವರು ನನ್ನ ಕಷ್ಟದ ಕಾಲದಲ್ಲಿ ಕೈ ಹಿಡಿದಿದ್ದಾರೆ. ಅವರ ಪರವಾಗಿ ನಿಲ್ಲಬೇಕಾಗಿದ್ದು ನನ್ನ ಕರ್ತವ್ಯ ಈ ಕಾರಣದಿಂದಾಗಿ ನಾನು ಇಂಥದ್ದೊಂದು ನಿರ್ಧಾರವನ್ನು ತಗೆದುಕೊಂಡಿದ್ದೇನೆ’ ಎಂದಿದ್ದಾರೆ. ಇದನ್ನೂ ಓದಿ:ಅಲ್ಲು ಅರ್ಜುನ್-ಸುಕುಮಾರ್ ಕಾಂಬೋ ಬ್ಯಾಕ್, ಧೂಳ್ ಎಬ್ಬಿಸಿದ ‘ಪುಷ್ಪ 2’ ಗ್ಲಿಂಪ್ಸ್
ಬಿಜೆಪಿ ಜೊತೆಗಿನ ಸಂಬಂಧವನ್ನು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಸಂದರ್ಭದಲ್ಲಿ ಒಂದು ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದನ್ನು ಅಭಿಮಾನಿಗಳಿಗೆ ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ಟಿಕೆಟ್ ಕೇಳುವುದಿಲ್ಲ’ ಎಂದಿದ್ದಾರೆ ಸುದೀಪ್.
ಈ ಕುರಿತಂತೆ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆ ಆರಂಭಿಸಿದ್ದಾರೆ. ನೆಚ್ಚಿನ ನಟ ಈಗಾಗಲೇ ತಮ್ಮದೇ ಟ್ರಸ್ಟ್ ಮೂಲಕ ಸಮಾಜಸೇವೆ ಆರಂಭಿಸಿದ್ದಾರೆ. ರಾಜಕಾರಣಕ್ಕೆ ಹೋದರೆ ಮತ್ತಷ್ಟು ಸಹಾಯ ಮಾಡಬಹುದು ಎಂದು ಕೆಲವರು ಅಭಿಪ್ರಾಯ ವ್ಯಕ್ತ ಪಡಿಸಿದ್ದರೆ, ಇನ್ನೂ ಕೆಲವರು ಅವರು ರಾಜಕೀಯ ಕ್ಷೇತ್ರಕ್ಕೆ ಹೋಗುವುದು ಬೇಡ ಎಂದು ನೇರವಾಗಿ ಹೇಳಿಕೆ ನೀಡಿದ್ದಾರೆ.
ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್, ಬಿಜೆಪಿ ಸೇರುವ ವಿಚಾರ ಮಾತನಾಡಲಿಲ್ಲ. ಪಕ್ಷದ ಪರವಾಗಿ ಪ್ರಚಾರ ಮಾಡುವೆ ಅಂತಾನೂ ಹೇಳಲಿಲ್ಲ. ಬಸವರಾಜ ಬೊಮ್ಮಾಯಿ ಪರವಾಗಿ ನಿಂತುಕೊಳ್ಳುತ್ತೇನೆ ಎಂದಷ್ಟೇ ಹೇಳಿದರು.