ಉಪೇಂದ್ರ ಮತ್ತು ಉಪ್ಪಿ ಅಣ್ಣನ ಮಗನಿಗೆ ಕ್ಷಮೆ ಕೇಳಿದ ಕಿಚ್ಚ ಸುದೀಪ್

Public TV
1 Min Read
kiccha sudeep 1 1

ಕಿಚ್ಚ ಸುದೀಪ್ ಸಿನಿಮಾ ರಂಗಕ್ಕೆ ಬರಲು ಹಲವರ ಪ್ರೋತ್ಸಾಹವಿದೆ. ಅದರಲ್ಲೂ ಉಪೇಂದ್ರ ಅವರು ಸುದೀಪ್ ಅವರಿಗೆ ಸಾಕಷ್ಟು ರೀತಿಯಲ್ಲಿ ಉತ್ತೇಜಿಸಿದ್ದಾರೆ. ಸುದೀಪ್ ಅವರು ಮೊದಲು ಫೋಟೋ ಶೂಟ್ ಮಾಡಿಸಲು ಕಾರಣವೂ ಉಪ್ಪಿ ಆಗಿದ್ದಾರೆ. ಹಾಗಾಗಿ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯವಿದೆ. ಈ ಕಾರಣಕ್ಕಾಗಿಯೇ ಉಪೇಂದ್ರ ಅವರು ತಮ್ಮ ಸಹೋದರನ ಮಗ ನಿರಂಜನ್ ಅವರ ಚೊಚ್ಚಲು ಸಿನಿಮಾ ನಮ್ಮ ಹುಡುಗರು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಆದರೆ, ಅಂದು ಕಿಚ್ಚ ಗೈರಾಗಿದ್ದರು.

ACTOR SUDEEP

ಸಿನಿಮಾ ರಿಲೀಸ್ ಗೂ ಮುನ್ನ ನಡೆದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕಿಚ್ಚ ಸುದೀಪ್ ಬರಬೇಕಿತ್ತು. ಸ್ವತಃ ಉಪೇಂದ್ರ ಅವರೇ ಕಾಲ್ ಮಾಡಿ ಸುದೀಪ್ ಅವರನ್ನು ಆಹ್ವಾನಿಸಿದ್ದರಂತೆ. ಆದರೆ, ಕಿಚ್ಚನಿಗೆ ಆ ಕಾರ್ಯಕ್ರಮದಲ್ಲಿ ಭಾಗಿ ಆಗಲು ಸಾಧ್ಯವಾಗಿಲ್ಲ. ಅದಕ್ಕೆ ಕಾರಣ ಅವರ ಕಾಲು ನೋವು. ಈ ಕುರಿತು ವಿಡಿಯೋ ಮಾಡಿ ಕಳುಹಿಸಿದ್ದ ಸುದೀಪ್, ಈ ಕಾರ್ಯಕ್ರಮಕ್ಕೆ ಬರಲಾಗುತ್ತಿಲ್ಲ. ಹಾಗಾಗಿ ಉಪ್ಪಿ ಸರ್ ಮತ್ತು ನಿರಂಜನ್ ಕ್ಷಮಿಸಿ ಎಂದು ಕೇಳಿದ್ದಾರೆ. ಇದನ್ನೂ ಓದಿ: ಕಾಳಿ ಕೈಗೆ ಸಿಗರೇಟು : ಮಾಳವಿಕಾ ಅವಿನಾಶ್ ಛೀಮಾರಿ, ನಟ ಕಿಶೋರ್ ವಿಭಿನ್ನ ಪ್ರತಿಕ್ರಿಯೆ

SUDEEP

ಸುದೀಪ್ ಮಂಡಿಗೆ ನೋವು ಮಾಡಿಕೊಂಡಿದ್ದಾರಂತೆ. ಹಾಗಾಗಿ ಓಡಾಡಲು ಆಗುತ್ತಿಲ್ಲವಂತೆ. ಹಾಗಾಗಿ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗಲಿಲ್ಲ ಎಂದು ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ. ಇದೇ ತಿಂಗಳು ಕೊನೆಯಲ್ಲಿ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಆಗುತ್ತಿದೆ. ಇದರ ಪ್ರಚಾರದಲ್ಲೂ ಸುದೀಪ್ ತೊಡಗಿದ್ದು, ಮನೆಯಲ್ಲೇ ಕುಳಿತುಕೊಂಡು ಆ ಕೆಲಸವನ್ನು ಮಾಡುತ್ತಿದ್ದಾರಂತೆ. ವೈದ್ಯರು ವಿಶ್ರಾಂತಿ ಹೇಳಿದ್ದರಿಂದ ಮತ್ತು ಹೆಚ್ಚು ನಡೆಯದಿರಲು ಸಲಹೆ ಮಾಡಿದ್ದರಂತೆ, ಸುದೀಪ್ ಎಲ್ಲಿಯೂ ಓಡಾಡುತ್ತಿಲ್ಲವಂತೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *