ಬೆಂಗಳೂರು: ತನ್ನ ಅಭಿಮಾನಿಯೊಬ್ಬ ಅನಾರೋಗ್ಯದಿಂದ ನಿಧನ ಹೊಂದಿದ್ದ ಸುದ್ದಿ ಕೇಳಿ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದಾರೆ.
ಸುದೀಪ್ ಅವರ ಅಭಿಮಾನಿಯಾಗಿದ್ದ ಆದಿತ್ಯ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದರು. ಆದಿತ್ಯ ಇಂದು ಕೊನೆಯುಸಿರೆಳೆದಿದ್ದಾರೆ.
“ನನಗೆ ತುಂಬಾ ಬೇಸರವಾಗುತ್ತಿದೆ. ನಾನು ಆ ಮಗುವಿನ ಜೊತೆ ಕಳೆದ ಆ ಸುಂದರ ಕ್ಷಣಗಳನ್ನು ಎಂದಿಗೂ ಮರೆಯುವುದಿಲ್ಲ. ಆ ಅದ್ಭುತ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬೇಡಿಕೊಳ್ಳುತ್ತೇನೆ” ಎಂದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
Deeply saddened.. I Wil never forget th moments that I spent with this beautiful child… My prayers for this wonderful soul to rest in peace. pic.twitter.com/xH0EZeFQY9
— Kichcha Sudeepa (@KicchaSudeep) November 21, 2018
ಆದಿತ್ಯ ಅಪರೂಪದ ಡಿಎಂಡಿ ಕಾಯಿಲೆಯಿಂದ ಬಳಲುತ್ತಿದ್ದರು. ಡಿಎಂಡಿ ಕಾಯಿಲೆ ಸ್ನಾಯುಗಳನ್ನು ದುರ್ಬಲಗೊಳಿಸುತ್ತದೆ. ಅಲ್ಲದೇ ಒಂದು ಗಂಟೆ ಒಂದೇ ಕಡೆ ಕೂರಲು ಸಾಧ್ಯವಾಗುವುದಿಲ್ಲ. ಈ ಕಾಯಿಲೆ ಹೆಚ್ಚು ಹುಡುಗರಲ್ಲಿ ಕಾಣಿಸಿಕೊಳ್ಳುತ್ತದೆ.
ಆದಿತ್ಯಗೆ ಸುದೀಪ್ ನೆಚ್ಚಿನ ನಟನಾಗಿದ್ದರಿಂದ ಅವರನ್ನು ಬಹಳ ಇಷ್ಟಪಡುತ್ತಿದ್ದರು. ಕೆಲವು ವರ್ಷಗಳ ಹಿಂದೆ ಆದಿತ್ಯ ಡಿಎಂಡಿ ಕಾಯಿಲೆಯಿಂದ ಬಳಲುತ್ತಿದ್ದರು. 2014ರಲ್ಲಿ ಮೈಸೂರಿನಲ್ಲಿ ಕರ್ನಾಟಕ ಪ್ರೀಮಿಯರ್ ಲೀಗ್ ಪಂದ್ಯ ನಡೆಯುತ್ತಿದ್ದಾಗ ಸುದೀಪ್ ತಮ್ಮ ಅಭಿಮಾನಿ ಆದಿತ್ಯ ಅವರನ್ನು ಭೇಟಿ ಮಾಡಿ ತಮ್ಮ ಆಸೆಗಳನ್ನು ಹೇಳಿಕೊಂಡಿದ್ದರು.
ಆದಿತ್ಯ ಅವರ ಆಸೆಗಳನ್ನು ಈಡೇರಿಸಲು ಕಿಚ್ಚ ಸುದೀಪ್ ಅವರ ಕುಟುಂಬಕ್ಕೆ ನೆರವಾಗಿದ್ದರು. ಆದಿತ್ಯ ಅವರ ತಂದೆ ಭಾರತಿ ಶಂಕರ್ ಆಗಿದ್ದು, ‘ಆಟೋಗ್ರಾಫ್ ಪ್ಲೀಸ್’ ಚಿತ್ರವನ್ನು ನಿರ್ದೇಶಿಸಿದ್ದರು. ನಂತರ ಅವರು ಚಿತ್ರರಂಗದಿಂದ ದೂರ ಉಳಿದಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv