Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗತವೈಭವ ಸೃಷ್ಟಿಸಲು ಹೊರಟ ಸಿಂಪಲ್ ಸುನಿಗೆ ಕಿಚ್ಚ ಸಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಗತವೈಭವ ಸೃಷ್ಟಿಸಲು ಹೊರಟ ಸಿಂಪಲ್ ಸುನಿಗೆ ಕಿಚ್ಚ ಸಾಥ್

Cinema

ಗತವೈಭವ ಸೃಷ್ಟಿಸಲು ಹೊರಟ ಸಿಂಪಲ್ ಸುನಿಗೆ ಕಿಚ್ಚ ಸಾಥ್

Public TV
Last updated: November 10, 2025 3:59 pm
Public TV
Share
3 Min Read
GathaVaibhav
SHARE

ನಿರ್ದೇಶಕ ಸಿಂಪಲ್ ಸುನಿ ಅವರ ಸಿನಿಕರಿಯರ್‌ನ ವಿಭಿನ್ನ ಚಿತ್ರ ಎನಿಸಿಕೊಂಡಿರುವ ಗತವೈಭವ ತನ್ನ ಕಂಟೆಂಟ್ ಮೂಲಕ ಈಗಾಗಲೇ ನಿರೀಕ್ಷೆ ಹೆಚ್ಚು ಮಾಡಿದೆ. ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಹುಟ್ಟುಹಾಕಿರುವ ಗತವೈಭವಕ್ಕೆ ಕಿಚ್ಚ ಸುದೀಪ್ ಬೆಂಬಲ ಸಿಕ್ಕಿದೆ. ನಿನ್ನೆ ಬೆಂಗಳೂರಿನ (Bengaluru) ಖಾಸಗಿ ಮಾಲ್ ನಲ್ಲಿ ಗತವೈಭವ ಟ್ರೇಲರ್ ಬಿಡುಗಡೆ ಮಾಡಿದ ಕಿಚ್ಚ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು.

ಕಿಚ್ಚ ಸುದೀಪ್ (Kichcha Sudeep) ಮಾತನಾಡಿ, “ಕನ್ನಡ ಚಿತ್ರರಂಗದ ಬೆಸ್ಟ್ ನಿರ್ದೇಶಕರಲ್ಲಿ ಸಿಂಪಲ್ ಸುನಿ ಕೂಡ ಒಬ್ಬರು. ಅವರ ಜೊತೆಗೆ ಕೆಲಸ ಮಾಡುವ ಅವಕಾಶ ನನಗಿನ್ನೂ ಸಿಕ್ಕಿಲ್ಲ. ಒಂದಲ್ಲಾ ಒಂದು ದಿನ ಅವರ ಜೊತ ಕೆಲಸ ಮಾಡಬಹುದು. ಪ್ರತಿಯೊಂದು ಫ್ರೇಮ್ ಅನ್ನು ಕೆತ್ತಿ ಕೆತ್ತಿ ತೆಗೆಯುತ್ತೀರಿ ತಾವು. ನಾನು ‘ಗತವೈಭವ’ ಚಿತ್ರಕ್ಕಾಗಿ ಕಾಯುತ್ತಿದ್ದೇನೆ. ಚಿತ್ರದ ಹೀರೋ ದುಷ್ಯಂತ್, ನಾಯಕಿ ಆಶಿಕಾ ರಂಗನಾಥ್ ಎಲ್ಲರೂ ಚೆನ್ನಾಗಿ ಕಾಣುತ್ತಿದ್ದೀರಿ. ”ಈ ಚಿತ್ರದ ಹೀರೋ ದುಷ್ಯಂತ್ ಅವರಿಗೆ ನಾನು ಟಿಪ್ಸ್ ಕೊಡುವುದು ಏನಿಲ್ಲ. ಅವರು ತುಂಬಾ ಚೆನ್ನಾಗಿ ಮಾತನಾಡಿದ್ದು ನೋಡಿದೆ. ಅಸಲಿಗೆ, ನಾನು ಅವರಿಂದ ಕಲಿಯಬೇಕು. ಇವರು ಹೇಗೆ 10 ನಿಮಿಷಗಳ ಕಾಲ ಅಷ್ಟೊಂದು ಅಚ್ಚುಕಟ್ಟಾಗಿ ಎಲ್ಲರನ್ನ ತಮ್ಮ ಮಾತಿನಿಂದ ಹಿಡಿದಿಟ್ಟುಕೊಂಡರು ಅಂತ ಯೋಚಿಸ್ತಿದ್ದೆ. ಆಮೇಲೆ ಗೊತ್ತಾಯ್ತು ದುಷ್ಯಂತ್ ಅವರು ರಾಜಕಾರಣಿ ಮಗ ಅಂತ” ಎಂದು ಹೇಳಿದರು.ಇದನ್ನೂ ಓದಿ: ಸರ್ಕಾರ ನಿಗದಿ ಮಾಡಿದ ದರ ನೀಡಬೇಕು – ಕಬ್ಬು ಬೆಳೆಗಾರರಿಂದ ನಾಳೆ ಹೈವೇ ಬಂದ್ ಎಚ್ಚರಿಕೆ

ಸಿಂಪಲ್ ಸುನಿ ಮಾತನಾಡಿ, ಸುದೀಪ್ ಸರ್ ಟ್ರೇಲರ್ ಲಾಂಚ್‌ಗೆ ಬಂದಿರುವುದು ಖುಷಿ ಕೊಟ್ಟಿದೆ. ಇದು ಬೇರೆ ರೀತಿ ಸಿನಿಮಾ. ಈ ಚಿತ್ರ ರಿಲೀಸ್ ಆದ್ಮೇಲೆ ಮೌತ್ ಪಬ್ಲಿಸಿಟಿ ತೆಗೆದುಕೊಂಡು ಚೆನ್ನಾಗಿ ಹೋಗುತ್ತದೆ ಎಂಬ ನಂಬಿಕೆ ಇದೆ. ಚಿತ್ರಕ್ಕೆ ಹಾಕಿರುವ ಎಫರ್ಟ್ ದೊಡ್ಡದಿದೆ. ಆದರೆ ಸ್ಟಾರ್ ವ್ಯಾಲ್ಯೂ ಕಮ್ಮಿ ಇತ್ತು. ಅದನ್ನು ನಮ್ಮ ಚಿತ್ರರಂಗದ ಗಣ್ಯರಾದ ಶಿವಣ್ಣ, ಸುದೀಪ್ ಸರ್ ಅವರಿಂದ ಬೆಂಬಲ ಸಿಕ್ಕಿರುವುದು ಗತವೈಭವ ಸಿನಿಮಾಗೆ ಒಳ್ಳೆ ಓಪನಿಂಗ್ ಸಿಗಲಿದೆ ಎಂಬ ನಂಬಿಕೆ ಇದೆ ಎಂದರು.

ನಟಿ ಆಶಿಕಾ ರಂಗನಾಥ್ (Ashika Ranganath) ಮಾತನಾಡಿ, ಈ ಕಾರ್ಯಕ್ರಮ ಆಗಲು ಕಾರಣ ನಮ್ಮ ಪ್ರೀತಿಯ ಸುದೀಪ್ ಸರ್. ಅವರು ಯಾವಾಗಲೂ ಹೊಸಬರ ಕಂಟೆಂಟ್‌ಗೆ ಪ್ರೀತಿಯಿಂದ ಸಪೋರ್ಟ್ ಮಾಡುತ್ತಾರೆ. ಅದು ಅವರಲ್ಲಿ ಇರುವ ಸಿನಿಮಾ ಮೇಲಿನ ಪ್ರೀತಿ ಹಾಗೂ ಫ್ಯಾಷನ್ ಕಾಣಿಸುತ್ತದೆ. ಗತವೈಭವ ಚಿತ್ರದ ಟ್ರೇಲರ್ ಲಾಂಚ್‌ಗೆ ಸುದೀಪ್ ಸರ್ ಮೆರುಗು ನೀಡಿದ್ದಾರೆ. ಗತವೈಭವ ಸಾಕಷ್ಟು ರೀತಿಯಲ್ಲಿ ಸ್ಪೆಷಲ್ ಚಿತ್ರ. ಅತಿ ಹೆಚ್ಚು ದಿನಗಳ ಕಾಲ ಶೂಟ್ ಮಾಡಿದ ಸಿನಿಮಾ. ಗತವೈಭವ ಸಿನಿಮಾವನ್ನು ನಾಲ್ಕು ಸಿನಿಮಾ ನೋಡುವ ಅನುಭವ ಆಗುತ್ತದೆ. ನಾಲ್ಕು ಕಥೆ, ನಾಲ್ಕು ಪಾತ್ರಗಳು. ಇದು ಹೊಸ ರೀತಿ ಸ್ಕ್ರೀಪ್ಟ್. ನವೆಂಬರ್ 14ಕ್ಕೆ ಚಿತ್ರ ತೆರೆಗೆ ಬರಲಿದೆ. ನಿಮ್ಮ ಸಪೋರ್ಟ್ ಇರಲಿ ಎಂದರು.

GathaVaibhav 1

ನಟ ದುಷ್ಯಂತ್ ಮಾತನಾಡಿ, ನಮ್ಮ ಸಿನಿಮಾ ಗತವೈಭವಗೆ ಕಿಚ್ಚ ಸರ್ ಬೆನ್ನೆಲುಬಾಗಿ ನಿಂತಿರುವುದು ಖುಷಿ ಕೊಟ್ಟಿದೆ. ಎಂಟು ವರ್ಷಗಳ ಪ್ರಯತ್ನದ ಬಳಿಕ ನಾನು ನಟನಾಗಿ ನಿಮ್ಮ ಮುಂದೆ ಬರುತ್ತಿದ್ದೇನೆ. ಇದೇ ತಿಂಗಳ 14ರಂದು ನಮ್ಮ ಚಿತ್ರ ತೆರೆಗೆ ಬರ್ತಿದೆ. ತ್ರಿಭಾಷಾ ನಟಿ ಆಶಿಕಾ ಅವರ ಜೊತೆ ನಟಿಸಿರುವುದು ಸಂತಸ. ಹತ್ತು ಯಶಸ್ವಿ ಚಿತ್ರಗಳ ನಿರ್ದೇಶಕ ಸಿಂಪಲ್ ಸುನಿ ಅವರ ಕನಸಿನ ಕೂಸು ಮಕ್ಕಳ ದಿನದಂದು ನಿಮ್ಮ ಮುಂದೆ ಬರ್ತಿದೆ. ನಿಮ್ಮ ಬೆಂಬಲ ಇರಲಿ ಎಂದರು. ನವೆಂಬರ್ 14ರಂದು ತೆರೆಗೆ ಬರಲಿರುವ ‘ಗತವೈಭವ’ ಚಿತ್ರದಲ್ಲಿ ಹೊಸ ಹೀರೋ ದುಷ್ಯಂತ್ ಜೊತೆಗೆ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದಾರೆ. ಸುಧಾ ಬೆಳವಾಡಿ, ಕಿಶನ್ ಬಿಳಗಲಿ, ಕೃಷ್ಣ ಹೆಬ್ಬಾಳೆ, ಕೃಷ್ಣ ಜೋರಾಪುರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಈ ಚಿತ್ರಕ್ಕೆ ಜೂಡಾ ಸ್ಯಾಂಡಿ ಸಂಗೀತ ನೀಡಿದ್ದು, ವಿಲೀಯಂ ಡೇವಿಡ್ ಛಾಯಾಗ್ರಹಣ ಮಾಡಿದ್ದಾರೆ.ಸೇರ್ವೇಗಾರ ಸಿಲ್ವರ್ ಸ್ಕ್ರೀನ್ಸ್ ಮತ್ತು ಸುನಿ ಸಿನಿಮಾಸ್ ಸಂಸ್ಥೆಯಡಿ ದೀಪಕ್ ಹಾಗೂ ಸಿಂಪಲ್ ಸುನಿ ಚಿತ್ರ ನಿರ್ಮಾಣ ಮಾಡ್ತಿದ್ದಾರೆ. ಗತವೈಭವ, ಸಂಪೂರ್ಣ ಪ್ರೇಮಕಥೆ. ಪ್ಯಾಂಟಸಿ ಹಾಗು ಸಾನಾತನ ಧರ್ಮದ ಕಥೆಯ ಹಿನ್ನೆಲೆಯಲ್ಲಿ ಚಿತ್ರ ಸಾಗಲಿದೆ.ಇದನ್ನೂ ಓದಿ: ಉತ್ತರ ಪ್ರದೇಶದ ಶಾಲೆ, ಕಾಲೇಜುಗಳಲ್ಲಿ ವಂದೇ ಮಾತರಂ ಗೀತೆ ಕಡ್ಡಾಯ: ಯೋಗಿ ಆದಿತ್ಯನಾಥ್

TAGGED:Gatha VaibhavaKichcha SudeepTrailer Lauchಕಿಚ್ಚ ಸುದೀಪ್ಗತವೈಭವ
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

Mumbai metro 2
Latest

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ!

Public TV
By Public TV
11 minutes ago
BY Vijayendra 1
Bengaluru City

ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್‌ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ

Public TV
By Public TV
1 hour ago
Bidar Boy Death
Bidar

ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

Public TV
By Public TV
1 hour ago
Modi 4
Latest

ತುರ್ತು ಲ್ಯಾಂಡಿಂಗ್ ಸೌಲಭ್ಯ ಉದ್ಘಾಟನೆ; C-130J ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಬಂದಿಳಿದ ಮೋದಿ

Public TV
By Public TV
1 hour ago
Chikkaballapura Man Attempts Suicide By Writing Death Note Against Tahsildar
Chikkaballapur

ಮನೆ ತೆರವಿಗೆ ಮುಂದಾದ ತಹಶೀಲ್ದಾರ್ – ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ

Public TV
By Public TV
2 hours ago
Karnataka Student Missing In California
Crime

ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?