ಯಾದಗಿರಿ: ಗಿರಿಗಳ ನಾಡು ಯಾದಗಿರಿ ಜಿಲ್ಲೆಯಲ್ಲಿ ಚುನಾವಣೆಯ ಕಾವು ಹೆಚ್ಚಾಗುತ್ತಿದ್ದಂತೆಯೇ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ನಾನಾ ರೀತಿಯಲ್ಲಿ ಪ್ರಚಾರದ ಕಸರತ್ತು ನಡೆಸುತ್ತಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರವೆಂದರೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಜಿದ್ದಾಜಿದ್ದಿಯ ಪ್ರತಿಷ್ಠೆಯ ರಣರಂಗವಾಗಿ ಮಾರ್ಪಟ್ಟಿದೆ. ಇದೀಗ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ನರಸಿಂಹ ನಾಯಕ ಪರ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಚಿತ್ರನಟಿ ತಾರಾ ಸುರಪುರನ ಕಕ್ಕೇರಾ, ಹುಣಸಗಿ, ಕೊಡೆಕಲ್, ಸುರಪುರ ವಿವಿಧ ಕಡೆ ರೋಡ್ ಶೋ ಮಾಡುವ ಮೂಲಕ ಮತದಾರರ ಗಮನ ಸೆಳೆಯಲು ಮುಂದಾಗಿದ್ದಾರೆ.
ಸುರಪುರ ಮತಕ್ಷೇತ್ರದಲ್ಲಿ ವಾಲ್ಮಿಕಿ ಸಮಾಜದ ಸುಮಾರು 65 ಸಾವಿರ ಮತಗಳಿವೆ. ಕಿಚ್ಚ ಸುದೀಪ್ ರೋಡ್ ಶೋ ಮಾಡಿದರೆ ಬಿಜೆಪಿಗೆ ಮತಗಳ ವರದಾನವಾಗುವ ಸಾಧ್ಯತೆಗಳಿವೆ. ಇತ್ತೀಚೆಗೆ ಸುರಪುರ ಕಾಂಗ್ರೆಸ್ ಅಭ್ಯರ್ಥಿ ರಾಜವೆಂಕಟಪ್ಪ ನಾಯಕ್ ಪರ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ. ಇಬ್ರಾಹಿಂ ಅವರು ಸುರಪುರನ ಕಕ್ಕೇರಾ ಪಟ್ಟಣದಲ್ಲಿ ಪ್ರಚಾರ ಮಾಡಲಾಗಿತ್ತು.
ಆದರೆ ಇದೀಗ ಬಿಸಿಲಿನ ತಾಪ ಹೆಚ್ಚಾದಂತೆ ಬಿಸಿಲು ನಾಡು ಯಾದಗಿರಿಯಲ್ಲಿ ಕಿಚ್ಚ ಸುದೀಪ್ ಪ್ರಚಾರದ ಕಾವು ಬಿಜೆಪಿಗೆ ಯಾವ ರೀತಿ ವರ್ಕೌಟ್ ಆಗುತ್ತೆ ಎನ್ನುವುದು ಕಾದು ನೋಡಬೇಕು.